2014ರಲ್ಲಿ ಬಿಡುಗಡೆಯಾದ ‘ಲವ್ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ.
ಸದ್ಯ ‘ಯುರ್ಸ್ ಸಿನ್ಸಿಯರ್ಲಿ ರಾಮ್’ ಮತ್ತು ‘ಪಿನಾಕ’ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಗಣೇಶ್, ಏಪ್ರಿಲ್ 6 ರಂದು ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಏಪ್ರಿಲ್.7 ರಿಂದ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಚಿತ್ರದ ಹೆಸರೇನು? ಈ ಹೊಸ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ? ಇದರ ವಿಶೇಷತೆಗಳೇನು? ಎಂಬ ವಿಷಯಗಳನ್ನು ಚಿತ್ರತಂಡ ಇನ್ನೂ ಹಂಚಿಕೊಂಡಿಲ್ಲ. ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ.
ವಿಶೇಷವೆಂದರೆ, ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಯಶಸ್ವಿಯಾದ ತೆಲುಗಿನ ‘ಹನುಮ್ಯಾನ್’ ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
SNT ಎಂಟರ್ಪ್ರೈಸಸ್ ಲಾಂಛನದಲ್ಲಿ ರವಿ ನಿರ್ಮಿಸುತ್ತಿರುವ ಈ ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ. ಸುಜ್ಞಾನ್ ಛಾಯಾಗ್ರಹಣವಿದೆ.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…