ಮನರಂಜನೆ

‘ತಾರಕೇಶ್ವರ’ನಾದ ಗಣೇಶ್ ರಾವ್; ಈಶ್ವರನಾಗಿ ಹ್ಯಾಟ್ರಿಕ್‍ ಸಾಧನೆ

ಪೊಲೀಸ್ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಗಣೇಶ್‍ ರಾವ್ ಕೇಸರ್ಕರ್‍, ಈಗ ಒಂದರಹಿಂದೊಂದು ಮೂರು ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಮೂರೂ ಚಿತ್ರಗಳಲ್ಲೂ ಅವರು ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ.

‘ಶ್ರೀ ಸಿದ್ಧರಾಮೇಶ್ವರ’ ಎಂಬ ಬಿಡುಗಡೆಯಾಗದ ಚಿತ್ರದಲ್ಲಿ ಗಣೇಶ್‍ ರಾವ್ ‍ಮೊದಲು ಶಿವನ ಪಾತ್ರ ಮಾಡಿದರು. ನಂತರ ‘ಗಂಗೆ ಗೌರಿ’ ಎಂಬ ಚಿತ್ರದಲ್ಲೂ ಈಶ್ವರನಾದರು. ಈ ಚಿತ್ರದ ಮುಹೂರ್ತ ಕೆಲವು ತಿಂಗಳುಗಳ ಹಿಂದೆ ಆಗಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಿದೆ. ಆ ಎರಡೂ ಚಿತ್ರಗಳು ಬಿಡುಗಡೆಯಾಗುವ ಮೊದಲೇ, ಅವರು ಈಗ ‘ತಾರಕೇಶ್ವರ’ ಎಂಬ ಚಿತ್ರದಲ್ಲಿ ಈಶ್ವರನಾಗಿ ನಟಿಸಿದ್ದಾರೆ. ಈ ಚಿತ್ರವು ಸದ್ದಿಲ್ಲದೆ ಸಿದ್ಧವಾಗಿದ್ದು, ಇತ್ತೀಚೆಗೆ ಹಾಡುಗಳು ಬಿಡುಗಡೆಯಾಗಿವೆ.

‘ತಾರಕೇಶ್ವರ’ ಚಿತ್ರಕ್ಕೆ ’ಅಸುರ ಕುಲತಿಲಕ’ ಎಂಬ ಅಡಿಬರಹ ಇದ್ದು, ಇದುವರೆಗೂ ಹೆಚ್ಚಾಗಿ ಪೌರಾಣಿಕ ಚಿತ್ರಗಳನ್ನೇ ನಿರ್ದೇಶನ ಮಾಡಿರುವ ಓಂಕಾರ್‍ ಪುರುಷೋತ್ತಮ್‍, ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಅವರು, ‘ಈ ಹಿಂದೆ ’ಸಿದ್ದರಾಮೇಶ್ವರ’ ಚಿತ್ರದಲ್ಲಿ ಗಣೇಶ್‌ ರಾವ್, ಈಶ್ವರನಾಗಿ ನಟಿಸಿದ್ದರು. ಆ ಸಂದರ್ಭದಲ್ಲೇ ‘ತಾರಕೇಶ್ವರ’ ಚಿತ್ರದ ಒಂದೆಳೆ ಹೇಳಿದ್ದೆ. ಅದು ಈಗ ಚಿತ್ರವಾಗಿದೆ. ಶಿವಪುರಾಣದ ಕಥೆಯಲ್ಲಿ ತಾರಕಾಸುರ ಅಸುರ ಆದರೂ, ತಂದೆ ಕೊಂದವನ ಮೇಲೆ ಸೇಡು ತೀರಿಸಿಕೊಳ್ಳಲು ತಪ್ಪಸ್ಸು ಮಾಡಿ ತನಗೆ ಸಾವು ಬರಬಾರದೆಂದು ಬ್ರಹ್ಮನಿಂದ ವರ ಪಡೆದುಕೊಳ್ಳುತ್ತಾನೆ. ಮುಂದೆ ಯಾವ ರೀತಿ ಹೋರಾಟ ಮಾಡುತ್ತಾನೆಂಬುದು ಚಿತ್ರದ ಕಥೆ. ಗಣೇಶ್‌ರಾವ್ ಕೇಸರ್‌ಕರ್ ಪುತ್ರ ಪ್ರಜ್ವಲ್ ಕೇಸರ್‌ಕರ್ ಇಂದ್ರನಾಗಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು, ಶ್ರೀರಂಗಪಟ್ಟಣ, ಮೈಸೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದರು.

ಗಣೇಶ್ ರಾವ್ ಕೇಸರ್ಕರ್ ಅವರು ಈಶ್ವರನ ಪಾತ್ರ ಮಾಡಿದಾಗ ಎಲ್ಲರೂ ಇಷ್ಟಪಟ್ಟರಂತೆ. ‘ಮುಂದೆ ’ಗಂಗೆ ಗೌರಿ’ ಶುರು ಮಾಡಿದೆವು. ಆ ಚಿತ್ರದ ಎಡಿಟಿಂಗ್‍ ಸಂದರ್ಭದಲ್ಲಿ ’ತಾರಕೇಶ್ವರ’ ಚಿತ್ರ ಮಾಡುವ ಬಗ್ಗೆ ಪ್ರಸ್ತಾಪ ಬಂತು. ಈ ಚಿತ್ರದಲ್ಲಿ ತಾರಕೇಶ್ವರನಾಗಿ ಕಾಣಿಸಿಕೊಂಡಿದ್ದೇನೆ. ಆಗ ಒಂದಷ್ಟು ಆಪ್ತರು ಹಣ ಹೂಡಲು ಮುಂದೆ ಬಂದರು. ಅವರೆಲ್ಲರ ಸಹಕಾರದಿಂದಲೇ ಟೈಟಲ್ ರೋಲ್‌ದಲ್ಲಿ ಕಾಣಿಸಿಕೊಳ್ಳಲು ಸುಲಭವಾಯಿತು’ ಎಂದರು.

ಈ ಚಿತ್ರದಲ್ಲಿ ಪಾರ್ವತಿಯಾಗಿ ನಾಯಕಿ ರೂಪಾಲಿ ನಟಿಸಿದ್ದಾರೆ. ಅವರೊಂದಿಗೆ ಸುಮಿತ ಪ್ರವೀಣ್, ಅನ್ನಪೂರ್ಣ, ರತಿ-ಮನ್ಮಥರಾಗಿ ವಿಕ್ರಂ ಸೂರಿ -ನಮಿತಾ ರಾವ್, ಶಂಕರ ಭಟ್, ಜಿಮ್‌ ಶಿವು, ಎನ್.ಟಿ. ರಾಮಸ್ವಾಮಿ, ಗುರುರಾಜ್, ಹೆಜ್ಜಾಜಿ ಮಹಾದೇವ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ರಾಜ್‍ ಭಾಸ್ಕರ್‍ ಸಂಗೀತ ಮತ್ತು ಮುತ್ತುರಾಜ್‍ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

34 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

1 hour ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

1 hour ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

1 hour ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

1 hour ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

1 hour ago