ಮನರಂಜನೆ

‘ಜಿ ಬಾಸ್‍’ ಅಂತ ಕರೆಯಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ ಗಣೇಶ್‍

‘ನನಗೆ ನೀವು ಪ್ರೀತಿಯಿಂದ ‘ಗೋಲ್ಡನ್‍ ಸ್ಟಾರ್’ ಅಂತ ಕರೆದಿದ್ದೀರಿ. ಅಷ್ಟು ಸಾಕು. ‘ಜಿ ಬಾಸ್’ ಎಂದು ಕರೆಯಬೇಡಿ’ ಎಂದು ಗಣೇಶ್‍ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಗುರುವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಖುಷಿಯಿಂದ ‘ಜಿ ಬಾಸ್‍’ ಎಂದು ಕರೆದಿದ್ದು ಗಣೇಶ್ ಗಮನಕ್ಕೆ ಬಂದಿದೆ. ಹಾಗೆ ಕರೆಯಬೇಡಿ ಎಂದು ಗಣೇಶ್‍ ಬಹಳ ನಯವಾಗಿ ತಮ್ಮಅಭಿಮಾನಿಗಳಿಗೆ ಚಿತ್ರದ ಸಂತೋಷಕೂಟದಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಅಭಿಮಾನಿಗಳು ಇತ್ತೀಚೆಗೆ ಸಂಭ್ರಮದಲ್ಲಿ ನನ್ನನ್ನು ‘ಜಿ ಬಾಸ್‍’ ಅಂತ ಕರೆಯುತ್ತಿದ್ದರು. ದಯಮಾಡಿ ನನ್ನನ್ನು ‘ಜಿ ಬಾಸ್‍’ ಅಂತೆಲ್ಲಾ ಕರೆಯಬೇಡಿ. ನಾನು ನಿಮ್ಮ ಮನೆಯ ಹುಡುಗ ಗಣೇಶ್‍. ಪ್ರೀತಿಯಿಂದ ‘ಗೋಲ್ಡನ್ ಸ್ಟಾರ್’ ಎಂಬ ಕರೆದಿದ್ದೀರಿ. ನನಗೆ ಅಷ್ಟು ಸಾಕು. ‘ಜಿ ಬಾಸ್‍’ ಅಂತ ಕರೆಯಬೇಡಿ’ ಎಂದು ಗಣೇಶ್‍ ಹೇಳಿದ್ದಾರೆ.

ಇನ್ನು, ಈ ಚಿತ್ರಕ್ಕೆ ಜನ ತೋರುತ್ತಿರುವ ಪ್ರೀತಿಯ ಬಗ್ಗೆ ಗಣೇಶ್‍ ಬಹಳ ಖುಷಿಯಾಗಿದ್ದಾರೆ. ‘ಮಂಡ್ಯದಲ್ಲಿ ಒಂದೇ ಕುಟುಂಬದ 30 ಜನ ಒಟ್ಟಿಗೆ ಬಂದು ಚಿತ್ರ ನೋಡಿದ್ದಾರೆ. ಇದು ಅವರು ನನ್ನ ಮೇಲೆ ಇಟ್ಟ ಪ್ರೀತಿಯನ್ನು ತೋರಿಸುತ್ತದೆ. ಪ್ರತೀ ಸಿನಿಮಾದಲ್ಲೂ ಜನರನ್ನು ಮನರಂಜಿಸುವ ಕೆಲಸ ಮಾಡುತ್ತಿರುತ್ತೀನಿ. ಅದು ಈ ಚಿತ್ರದಲ್ಲಿ ದೊಡ್ಡ ಮಟ್ಟದಲ್ಲಿ ಆಗಿದೆ. ನಿರ್ದೇಶಕರು 50 ಲಕ್ಷ ಜನ ನೋಡಿದರೆ ಸಾಕು ಎಂದರು. ನನಗೆ 30 ಲಕ್ಷ ಜನ ನೋಡುತ್ತಾರೆ ಎಂಬ ಭರವಸೆ ಇದೆ. ಚಿತ್ರ ನೋಡಿ ಪ್ರೋತ್ಸಾಹಿಸುತ್ತಿರುವ ಎಲ್ಲರಿಗೂ ಧನ್ಯವಾದ’ ಎಂದರು.

‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ಗೆಲ್ಲಿಸಿದ ಜನರಿಗೆ ಥ್ಯಾಂಕ್ಸ್ ಹೇಳುವುದಕ್ಕೆ ಗಣೇಶ್ ‍ನಿರ್ಧರಿಸಿದ್ದು, ಇದೇ ಮೊದಲ ಬಾರಿಗೆ ಅವರು ಟೂರ್‍ ಮಾಡಿ ಧನ್ಯವಾದ ಹೇಳುತ್ತಾರಂತೆ. ‘ಮೊದಲು ನಾವು ಹುಬ್ಬಳ್ಳಿಯಲ್ಲಿ ಪ್ರೀ-ರಿಲೀಸ್‍ ಇವೆಂಟ್‍ ಮಾಡಬೇಕು ಎಂಬ ಯೋಚನೆ ಇತ್ತು. ಆದರೆ, ಸಾಧ್ಯವಾಗಲಿಲ್ಲ. ಈ ಬಾರಿ ಯಶಸ್ಸಿನ ಸಮಾರಂಭವನ್ನು ದೊಡ್ಡ ಮಟ್ಟದಲ್ಲಿ ಮಾಡುವ ಯೋಚನೆ ಇದೆ. ಅದರ ಜೊತೆಗೆ ಮುಂದಿನ ವಾರದಿಂದ ಕರ್ನಾಟಕದಾದ್ಯಂತ ಟ್ರಿಪ್‍ ಮಾಡುವ ಯೋಚನೆ ಇದೆ. ಪ್ರತಿ ಜಿಲ್ಲೆ, ತಾಲ್ಲೂಕಿಗೆ ಹೋಗಿ ಧನ್ಯವಾದ ಹೇಳಿ ಬರುತ್ತೇವೆ. ನಾನು ಯಾವತ್ತೂ ಹೀಗೆ ಟೂರ್ ಮಾಡಿದವನಲ್ಲ. ಇದೇ ಮೊದಲ ಬಾರಿಗೆ ಟೂರ್‍ ಮಾಡುತ್ತಿದ್ದೇನೆ’ ಎಂದರು.

ಭೂಮಿಕಾ

Recent Posts

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

20 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

31 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

45 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

49 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

2 hours ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago