ಮನರಂಜನೆ

‘ಜಿ ಬಾಸ್‍’ ಅಂತ ಕರೆಯಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ ಗಣೇಶ್‍

‘ನನಗೆ ನೀವು ಪ್ರೀತಿಯಿಂದ ‘ಗೋಲ್ಡನ್‍ ಸ್ಟಾರ್’ ಅಂತ ಕರೆದಿದ್ದೀರಿ. ಅಷ್ಟು ಸಾಕು. ‘ಜಿ ಬಾಸ್’ ಎಂದು ಕರೆಯಬೇಡಿ’ ಎಂದು ಗಣೇಶ್‍ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಗುರುವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಖುಷಿಯಿಂದ ‘ಜಿ ಬಾಸ್‍’ ಎಂದು ಕರೆದಿದ್ದು ಗಣೇಶ್ ಗಮನಕ್ಕೆ ಬಂದಿದೆ. ಹಾಗೆ ಕರೆಯಬೇಡಿ ಎಂದು ಗಣೇಶ್‍ ಬಹಳ ನಯವಾಗಿ ತಮ್ಮಅಭಿಮಾನಿಗಳಿಗೆ ಚಿತ್ರದ ಸಂತೋಷಕೂಟದಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಅಭಿಮಾನಿಗಳು ಇತ್ತೀಚೆಗೆ ಸಂಭ್ರಮದಲ್ಲಿ ನನ್ನನ್ನು ‘ಜಿ ಬಾಸ್‍’ ಅಂತ ಕರೆಯುತ್ತಿದ್ದರು. ದಯಮಾಡಿ ನನ್ನನ್ನು ‘ಜಿ ಬಾಸ್‍’ ಅಂತೆಲ್ಲಾ ಕರೆಯಬೇಡಿ. ನಾನು ನಿಮ್ಮ ಮನೆಯ ಹುಡುಗ ಗಣೇಶ್‍. ಪ್ರೀತಿಯಿಂದ ‘ಗೋಲ್ಡನ್ ಸ್ಟಾರ್’ ಎಂಬ ಕರೆದಿದ್ದೀರಿ. ನನಗೆ ಅಷ್ಟು ಸಾಕು. ‘ಜಿ ಬಾಸ್‍’ ಅಂತ ಕರೆಯಬೇಡಿ’ ಎಂದು ಗಣೇಶ್‍ ಹೇಳಿದ್ದಾರೆ.

ಇನ್ನು, ಈ ಚಿತ್ರಕ್ಕೆ ಜನ ತೋರುತ್ತಿರುವ ಪ್ರೀತಿಯ ಬಗ್ಗೆ ಗಣೇಶ್‍ ಬಹಳ ಖುಷಿಯಾಗಿದ್ದಾರೆ. ‘ಮಂಡ್ಯದಲ್ಲಿ ಒಂದೇ ಕುಟುಂಬದ 30 ಜನ ಒಟ್ಟಿಗೆ ಬಂದು ಚಿತ್ರ ನೋಡಿದ್ದಾರೆ. ಇದು ಅವರು ನನ್ನ ಮೇಲೆ ಇಟ್ಟ ಪ್ರೀತಿಯನ್ನು ತೋರಿಸುತ್ತದೆ. ಪ್ರತೀ ಸಿನಿಮಾದಲ್ಲೂ ಜನರನ್ನು ಮನರಂಜಿಸುವ ಕೆಲಸ ಮಾಡುತ್ತಿರುತ್ತೀನಿ. ಅದು ಈ ಚಿತ್ರದಲ್ಲಿ ದೊಡ್ಡ ಮಟ್ಟದಲ್ಲಿ ಆಗಿದೆ. ನಿರ್ದೇಶಕರು 50 ಲಕ್ಷ ಜನ ನೋಡಿದರೆ ಸಾಕು ಎಂದರು. ನನಗೆ 30 ಲಕ್ಷ ಜನ ನೋಡುತ್ತಾರೆ ಎಂಬ ಭರವಸೆ ಇದೆ. ಚಿತ್ರ ನೋಡಿ ಪ್ರೋತ್ಸಾಹಿಸುತ್ತಿರುವ ಎಲ್ಲರಿಗೂ ಧನ್ಯವಾದ’ ಎಂದರು.

‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ಗೆಲ್ಲಿಸಿದ ಜನರಿಗೆ ಥ್ಯಾಂಕ್ಸ್ ಹೇಳುವುದಕ್ಕೆ ಗಣೇಶ್ ‍ನಿರ್ಧರಿಸಿದ್ದು, ಇದೇ ಮೊದಲ ಬಾರಿಗೆ ಅವರು ಟೂರ್‍ ಮಾಡಿ ಧನ್ಯವಾದ ಹೇಳುತ್ತಾರಂತೆ. ‘ಮೊದಲು ನಾವು ಹುಬ್ಬಳ್ಳಿಯಲ್ಲಿ ಪ್ರೀ-ರಿಲೀಸ್‍ ಇವೆಂಟ್‍ ಮಾಡಬೇಕು ಎಂಬ ಯೋಚನೆ ಇತ್ತು. ಆದರೆ, ಸಾಧ್ಯವಾಗಲಿಲ್ಲ. ಈ ಬಾರಿ ಯಶಸ್ಸಿನ ಸಮಾರಂಭವನ್ನು ದೊಡ್ಡ ಮಟ್ಟದಲ್ಲಿ ಮಾಡುವ ಯೋಚನೆ ಇದೆ. ಅದರ ಜೊತೆಗೆ ಮುಂದಿನ ವಾರದಿಂದ ಕರ್ನಾಟಕದಾದ್ಯಂತ ಟ್ರಿಪ್‍ ಮಾಡುವ ಯೋಚನೆ ಇದೆ. ಪ್ರತಿ ಜಿಲ್ಲೆ, ತಾಲ್ಲೂಕಿಗೆ ಹೋಗಿ ಧನ್ಯವಾದ ಹೇಳಿ ಬರುತ್ತೇವೆ. ನಾನು ಯಾವತ್ತೂ ಹೀಗೆ ಟೂರ್ ಮಾಡಿದವನಲ್ಲ. ಇದೇ ಮೊದಲ ಬಾರಿಗೆ ಟೂರ್‍ ಮಾಡುತ್ತಿದ್ದೇನೆ’ ಎಂದರು.

ಭೂಮಿಕಾ

Recent Posts

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್‌ ಈಶ್ವರ್‌

ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…

9 mins ago

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…

20 mins ago

ನಮಗೂ ಸಚಿವ ಸ್ಥಾನ ಕೊಡಿ: ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…

30 mins ago

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು…

35 mins ago

ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ: ಎಚ್.ಡಿ.ದೇವೇಗೌಡ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್‌ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ…

39 mins ago

ವಿರಾಜಪೇಟೆಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ವಿರಾಜಪೇಟೆ: ವಿರಾಜಪೇಟೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ…

46 mins ago