ಮನರಂಜನೆ

‘ಜಿ ಬಾಸ್‍’ ಅಂತ ಕರೆಯಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ ಗಣೇಶ್‍

‘ನನಗೆ ನೀವು ಪ್ರೀತಿಯಿಂದ ‘ಗೋಲ್ಡನ್‍ ಸ್ಟಾರ್’ ಅಂತ ಕರೆದಿದ್ದೀರಿ. ಅಷ್ಟು ಸಾಕು. ‘ಜಿ ಬಾಸ್’ ಎಂದು ಕರೆಯಬೇಡಿ’ ಎಂದು ಗಣೇಶ್‍ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಗುರುವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಖುಷಿಯಿಂದ ‘ಜಿ ಬಾಸ್‍’ ಎಂದು ಕರೆದಿದ್ದು ಗಣೇಶ್ ಗಮನಕ್ಕೆ ಬಂದಿದೆ. ಹಾಗೆ ಕರೆಯಬೇಡಿ ಎಂದು ಗಣೇಶ್‍ ಬಹಳ ನಯವಾಗಿ ತಮ್ಮಅಭಿಮಾನಿಗಳಿಗೆ ಚಿತ್ರದ ಸಂತೋಷಕೂಟದಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಅಭಿಮಾನಿಗಳು ಇತ್ತೀಚೆಗೆ ಸಂಭ್ರಮದಲ್ಲಿ ನನ್ನನ್ನು ‘ಜಿ ಬಾಸ್‍’ ಅಂತ ಕರೆಯುತ್ತಿದ್ದರು. ದಯಮಾಡಿ ನನ್ನನ್ನು ‘ಜಿ ಬಾಸ್‍’ ಅಂತೆಲ್ಲಾ ಕರೆಯಬೇಡಿ. ನಾನು ನಿಮ್ಮ ಮನೆಯ ಹುಡುಗ ಗಣೇಶ್‍. ಪ್ರೀತಿಯಿಂದ ‘ಗೋಲ್ಡನ್ ಸ್ಟಾರ್’ ಎಂಬ ಕರೆದಿದ್ದೀರಿ. ನನಗೆ ಅಷ್ಟು ಸಾಕು. ‘ಜಿ ಬಾಸ್‍’ ಅಂತ ಕರೆಯಬೇಡಿ’ ಎಂದು ಗಣೇಶ್‍ ಹೇಳಿದ್ದಾರೆ.

ಇನ್ನು, ಈ ಚಿತ್ರಕ್ಕೆ ಜನ ತೋರುತ್ತಿರುವ ಪ್ರೀತಿಯ ಬಗ್ಗೆ ಗಣೇಶ್‍ ಬಹಳ ಖುಷಿಯಾಗಿದ್ದಾರೆ. ‘ಮಂಡ್ಯದಲ್ಲಿ ಒಂದೇ ಕುಟುಂಬದ 30 ಜನ ಒಟ್ಟಿಗೆ ಬಂದು ಚಿತ್ರ ನೋಡಿದ್ದಾರೆ. ಇದು ಅವರು ನನ್ನ ಮೇಲೆ ಇಟ್ಟ ಪ್ರೀತಿಯನ್ನು ತೋರಿಸುತ್ತದೆ. ಪ್ರತೀ ಸಿನಿಮಾದಲ್ಲೂ ಜನರನ್ನು ಮನರಂಜಿಸುವ ಕೆಲಸ ಮಾಡುತ್ತಿರುತ್ತೀನಿ. ಅದು ಈ ಚಿತ್ರದಲ್ಲಿ ದೊಡ್ಡ ಮಟ್ಟದಲ್ಲಿ ಆಗಿದೆ. ನಿರ್ದೇಶಕರು 50 ಲಕ್ಷ ಜನ ನೋಡಿದರೆ ಸಾಕು ಎಂದರು. ನನಗೆ 30 ಲಕ್ಷ ಜನ ನೋಡುತ್ತಾರೆ ಎಂಬ ಭರವಸೆ ಇದೆ. ಚಿತ್ರ ನೋಡಿ ಪ್ರೋತ್ಸಾಹಿಸುತ್ತಿರುವ ಎಲ್ಲರಿಗೂ ಧನ್ಯವಾದ’ ಎಂದರು.

‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ಗೆಲ್ಲಿಸಿದ ಜನರಿಗೆ ಥ್ಯಾಂಕ್ಸ್ ಹೇಳುವುದಕ್ಕೆ ಗಣೇಶ್ ‍ನಿರ್ಧರಿಸಿದ್ದು, ಇದೇ ಮೊದಲ ಬಾರಿಗೆ ಅವರು ಟೂರ್‍ ಮಾಡಿ ಧನ್ಯವಾದ ಹೇಳುತ್ತಾರಂತೆ. ‘ಮೊದಲು ನಾವು ಹುಬ್ಬಳ್ಳಿಯಲ್ಲಿ ಪ್ರೀ-ರಿಲೀಸ್‍ ಇವೆಂಟ್‍ ಮಾಡಬೇಕು ಎಂಬ ಯೋಚನೆ ಇತ್ತು. ಆದರೆ, ಸಾಧ್ಯವಾಗಲಿಲ್ಲ. ಈ ಬಾರಿ ಯಶಸ್ಸಿನ ಸಮಾರಂಭವನ್ನು ದೊಡ್ಡ ಮಟ್ಟದಲ್ಲಿ ಮಾಡುವ ಯೋಚನೆ ಇದೆ. ಅದರ ಜೊತೆಗೆ ಮುಂದಿನ ವಾರದಿಂದ ಕರ್ನಾಟಕದಾದ್ಯಂತ ಟ್ರಿಪ್‍ ಮಾಡುವ ಯೋಚನೆ ಇದೆ. ಪ್ರತಿ ಜಿಲ್ಲೆ, ತಾಲ್ಲೂಕಿಗೆ ಹೋಗಿ ಧನ್ಯವಾದ ಹೇಳಿ ಬರುತ್ತೇವೆ. ನಾನು ಯಾವತ್ತೂ ಹೀಗೆ ಟೂರ್ ಮಾಡಿದವನಲ್ಲ. ಇದೇ ಮೊದಲ ಬಾರಿಗೆ ಟೂರ್‍ ಮಾಡುತ್ತಿದ್ದೇನೆ’ ಎಂದರು.

ಭೂಮಿಕಾ

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago