ಮನರಂಜನೆ

ಪಿನಾಕ’ ನನ್ನ ವೃತ್ತಿ ಬದುಕಿನಲ್ಲೇ ಒಂದು ವಿಭಿನ್ನ ಚಿತ್ರ: ಗಣೇಶ್‍

‘ಪಿನಾಕ’ ಚಿತ್ರವು ತಮ್ಮ ವೃತ್ತಿ ಬದುಕಿನಲ್ಲೇ ಒಂದು ವಿಭಿನ್ನವಾದ ಚಿತ್ರವಾಗಲಿದೆ ಎಂದು ಗಣೇಶ್‍ ಈ ಹಿಂದೆ ಹೇಳಿಕೊಂಡಿದ್ದರು. ಈಗ ಚಿತ್ರೀಕರಣ ಸಾಗುತ್ತಿದ್ದಂತೆ, ಆ ನಂಬಿಕೆ ಮತ್ತಷ್ಟು ಬಲವಾಗಿದೆ. ಈಗ ಮತ್ತೊಮ್ಮೆ ಅವರು ಇದೇ ಮಾತುಗಳನ್ನು ಹೇಳಿಕೊಂಡಿದ್ದಾರೆ.

‘ಪಿನಾಕ’ ಚಿತ್ರಕ್ಕಾಗಿ ನೆಲಮಂಗಲ ಬಳಿ  ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್‍ ಹಾಕಲಾಗಿದೆ. ಸೆಟ್‍ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್‍ ನಿರ್ಮಿಸಲಾಗಿದೆ. ಇಲ್ಲಿ ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇನ್ನೂ 15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆಯಂತೆ. ಇಲ್ಲೇ ಚಿತ್ರದ ಕಥೆಯ ಪ್ರಮುಖ ಘಟ್ಟ ನಡೆಯುವುದರಿಂದ ಈ ಸೆಟ್‍ ಗೌಪ್ಯವಾಗಿಡಲಾಗಿದೆ.

ತಮ್ಮ ಪಾತ್ರದ ಕುರಿತು ಮಾತನಾಡುವ ಗಣೇಶ್‍, ‘ಬಹಳ ಖುಷಿಕೊಟ್ಟ ಪಾತ್ರವಿದು. ಇದು ಬೇರೆ ತರಹದ ಸಿನಿಮಾ. ನನ್ನ ಚಿತ್ರಜೀವನದಲ್ಲಿ ವಿಭಿನ್ನವಾದ ಸಿನಿಮಾ. ನನ್ನ ಬಳಿ ಬರುವಾಗಲೇ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂಬ ತೀರ್ಮಾನದೊಂದಿಗೆ ನಿರ್ಮಾಪಕರು ಬಂದರು. ಧನು ಮೊದಲ ಚಿತ್ರದಲ್ಲೇ ಇಂಥದ್ದೊಂದು ದೊಡ್ಡ ಪ್ರಯತ್ನ ಮಾಡುತ್ತಿದ್ದಾನೆ. ಅವನು ಹೇಗೆ ಮಾಡಬಹುದು ಎಂಬ ಪ್ರಶ್ನೆ ನನಗೂ ಇತ್ತು. ಆದರೆ, ಇಲ್ಲಿ ನೂರಕ್ಕೆ ನೂರು ಅಂಕಗಳನ್ನು ತೆಗೆದಿದ್ದಾನೆ’ ಎಂದು ಖುಷಿಪಟ್ಟರು.

ಇನ್ನು, ಗಣೇಶ್ ಭಾಷಾಜ್ಞಾನ ಅದ್ಭುತ. ಅವರ ಮಾತಲ್ಲಿ ಒಂದು ಅಪಶಬ್ಧ ಬರುವುದಿಲ್ಲ ಎಂದು ಹಿರಿಯ ನಟ ಶ್ರೀನಿವಾಸಮೂರ್ತಿ ಅವರ ಹೊಗಳಿಕೆಗೆ ಪ್ರತಿಕ್ರಿಯಿಸಿದ ಗಣೇಶ್‍, ‘ನನ್ನ ಮಾತೃಭಾಷೆಯನ್ನು ನಾನು ಚೆನ್ನಾಗಿ ಮಾತಾಡದೆ, ಇನ್ಯಾರು ಚೆನ್ನಾಗಿ ಮಾತಾಡ್ತಾರೆ? ಇದು ನನ್ನ ಭಾಷೆ. ನಾನು ಡಾ. ರಾಜಕುಮಾರ್, ವಿಷ್ಣುವರ್ಧನ್‍, ಭೋಜರಾಜನ (ಶ್ರೀನಿವಾಸಮೂರ್ತಿ) ಸಿನಿಮಾ ನೋಡಿ ಭಾಷೆ ಕಲಿತು ಬೆಳೆದವನು. ಭೋಜರಾಜನ ಹತ್ತಿರ ಗಣೇಶನ ಭಾಷೆ ಚೆನ್ನಾಗಿದೆ ಅಂದರೆ ಇದಕ್ಕಿಂತ ಅವಾರ್ಡ್ ಇನ್ನೇನು ಬೇಕು? ಪ್ರತಿದಿನ ಚಿತ್ರೀಕರಣ ಮಾಡುವಾಗ, ಶ್ರೀನಿವಾಸಮೂರ್ತಿ ಅವರ ಬಳಿ ಸಂಭಾಷಣೆ ಹೇಳಿ, ಇದು ಸರಿಯೇ? ಎಂದು ಕೇಳುತ್ತಿದ್ದೆ. ಅವರು ಮಾರ್ಗದರ್ಶನ ಮಾಡುತ್ತಿದ್ದರು. ನನ್ನ ಬಗ್ಗೆ ಏನೇ ಚೆನ್ನಾಗಿದೆ ಎಂದು ಹೇಳಿದರೂ, ಅದು ತಂಡಕ್ಕೆ ಸೇರಬೇಕು, ನನಗೊಬ್ಬನಿಗಲ್ಲ’ ಎಂದರು ಗಣೇಶ್‍.

ಈ ಸಂದರ್ಭದಲ್ಲಿ ಹಿರಿಯ ನಟ ಹೊನ್ನವಳ್ಳಿ ಕೃಷ್ಣ, ರವೀಂದ್ರನಾಥ್‍, ಛಾಯಾಗ್ರಾಹಕ ಕರಮ್‍ ಚಾವ್ಲಾ, ನಿರ್ದೇಶಕ ಧನಂಜಯ್‍, ನಿರ್ಮಾಣದ ಉಸ್ತುವಾರಿ ಹೊತ್ತಿರುವ ವಿಜಯಾ ಮುಂತಾದವರು ಹಾಜರಿದ್ದರು. ಈ ಚಿತ್ರವನ್ನು ತೆಲುಗಿನ ಜನಪ್ರಿಯ ನಿರ್ಮಾಣ ಸಂಸ್ಥೆ ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಹನೂರು: ನಾಳೆ ಚಂದ್ರಗಹಣವಿದ್ದರೂ ಭಕ್ತರಿಗೆ ಮಹದೇಶ್ವರನ ದರ್ಶನಕ್ಕಿಲ್ಲ ತೊಂದರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…

11 mins ago

ಹುದ್ದೆಗಳ ಭರ್ತಿ ನಡೆಯಲಿ; ಯುವಶಕ್ತಿಯನ್ನು ಕಡೆಗಣಿಸದಿರಲಿ

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …

31 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಬಿಜೆಪಿ-ಜಾ.ದಳ ಪಾಳೆಯಗಳಿಗೆ  ಹರ್ಷ ತಂದಿರುವ ರಾಜ್ಯ ರಾಜಕಾರಣ

ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು…

43 mins ago

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

4 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

4 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

4 hours ago