ಮನರಂಜನೆ

ಈ ಬಾರಿ ಅಭಿಮಾನಿಗಳೊಂದಿಗೆ ಗಣೇಶ್‍ ಹುಟ್ಟುಹಬ್ಬವಿಲ್ಲ..

ಜುಲೈ ತಿಂಗಳಲ್ಲಿ ಗಣೇಶ್‍, ಯೋಗಿ, ಶ್ರೀನಗರ ಕಿಟ್ಟಿ, ಶಿವರಾಜಕುಮಾರ್‌, ಪ್ರಜ್ವಲ್, ರಿಷಭ್‍ ಶೆಟ್ಟಿ ಮುಂತಾದವರು ಕನ್ನಡದ ಹಲವು ಸ್ಟಾರ್ ‍ನಟರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ಸಾಲಿನಲ್ಲಿ ಮೊದಲಿಗೆ ಬರುವುದು ಗಣೇಶ್‍ ಹುಟ್ಟುಹಬ್ಬ. ಇಂದು ಗಣೇಶ್‍ ಹುಟ್ಟುಹಬ್ಬ. ಆದರೆ, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳದಿರುವುದಕ್ಕೆ ಗಣೇಶ್‍ ತೀರ್ಮಾನಿಸಿದ್ದಾರೆ.

ಗಣೇಶ್‍ ಪ್ರತಿ ಬಾರಿ ತಮ್ಮ ಅಭಿಮಾನಿಗಳ ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ರಾಜರಾಜೇಶ್ವರಿಯ ಗಣೇಶ್ ಮನೆ ಎದುರು ಅಭಿಮಾನಿಗಳು ಜುಲೈ. 01ರ ರಾತ್ರಿಯಿಂದಲೇ ಜಮಾಯಿಸುತ್ತಿದ್ದರು. ಆದರೆ, ಈ ಬಾರಿ ಚಿತ್ರೀಕರಣದಲ್ಲಿ ಭಾಗಿಯಾಗಿರುವುದರಿಂದ, ಗಣೇಶ್‍ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಗಣೇಶ್‍ ಸದ್ಯ ಮೂರು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ವಿಖ್ಯಾತ್‍ ನಿರ್ದೇಶನದ ‘ಯುವರ್ಸ್ ಸಿನ್ಸಿಯರ್ಲಿ ರಾಮ್‍’, ಧನಂಜಯ್‍ ನಿರ್ದೇಶನದ ‘ಪಿನಾಕ’ ಜೊತೆಗೆ ಅರಸು ಅಂತಾರೆ ನಿರ್ದೇಶನದ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ. ಈ ಪೈಕಿ, ಮೊದಲ ಎರಡು ಚಿತ್ರಗಳ ಚಿತ್ರೀಕರಣ ಸತತವಾಗಿ ನಡೆಯುತ್ತಿದ್ದು, ಆ ಚಿತ್ರೀಕರಣದಲ್ಲಿ ಗಣೇಶ್ ಭಾಗವಹಿಸುತ್ತಿರುವುದರಿಂದ, ಈ ಬಾರಿ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲವಂತೆ.

ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿರುವ ಗಣೇಶ್, ‘ಜುಲೈ.02 ನಾನು ಹುಟ್ಟಿದ ದಿನ. ಸಹಜವಾಗಿ ನನಗದು ನಿಮ್ಮ ಪ್ರೀತಿ ಹಾಗೂ ಅಭಿಮಾನವನ್ನು ಅತ್ಯಂತ ಸಮೀಪದಿಂದ ಕಣ್ತುಂಬಿಕೊಂಡು ಸಂಭ್ರಮಿಸುವ ದಿನ. ಆದರೆ, ಈ ಬಾರಿ ನಾನು ‘ಯುವರ್ಸ್ ಸಿನ್ಸಿಯರ್ಲಿ ರಾಮ್‍’ ಹಾಗೂ ‘ಪಿನಾಕ’ ಚಿತ್ರಗಳ ಹೊರಾಂಗಣ ಚಿತ್ರೀಕರಣಗಳಲ್ಲಿ ಭಾಗವಹಿಸಬೇಕಿರುವ ಕಾರಣ, ಜುಲೈ.02ರಂದು ನಾನು ನಿಮ್ಮೆಲ್ಲರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬ ನನಗೆ ಮತ್ತೊಂದಿಲ್ಲ. ಆದ ಕಾರಣ ಯಾರೂ ಮನೆಯ ಬಳಿ ಬರದೆ, ಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ತಾವುಗಳು ಇದ್ದಲ್ಲಿಂದಲೇ ನನಗೆ ಆಶಿಸಿ, ಆಶೀರ್ವದಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

3 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

4 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

4 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

4 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

5 hours ago