ಮನರಂಜನೆ

ಈ ಬಾರಿ ಅಭಿಮಾನಿಗಳೊಂದಿಗೆ ಗಣೇಶ್‍ ಹುಟ್ಟುಹಬ್ಬವಿಲ್ಲ..

ಜುಲೈ ತಿಂಗಳಲ್ಲಿ ಗಣೇಶ್‍, ಯೋಗಿ, ಶ್ರೀನಗರ ಕಿಟ್ಟಿ, ಶಿವರಾಜಕುಮಾರ್‌, ಪ್ರಜ್ವಲ್, ರಿಷಭ್‍ ಶೆಟ್ಟಿ ಮುಂತಾದವರು ಕನ್ನಡದ ಹಲವು ಸ್ಟಾರ್ ‍ನಟರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ಸಾಲಿನಲ್ಲಿ ಮೊದಲಿಗೆ ಬರುವುದು ಗಣೇಶ್‍ ಹುಟ್ಟುಹಬ್ಬ. ಇಂದು ಗಣೇಶ್‍ ಹುಟ್ಟುಹಬ್ಬ. ಆದರೆ, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳದಿರುವುದಕ್ಕೆ ಗಣೇಶ್‍ ತೀರ್ಮಾನಿಸಿದ್ದಾರೆ.

ಗಣೇಶ್‍ ಪ್ರತಿ ಬಾರಿ ತಮ್ಮ ಅಭಿಮಾನಿಗಳ ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ರಾಜರಾಜೇಶ್ವರಿಯ ಗಣೇಶ್ ಮನೆ ಎದುರು ಅಭಿಮಾನಿಗಳು ಜುಲೈ. 01ರ ರಾತ್ರಿಯಿಂದಲೇ ಜಮಾಯಿಸುತ್ತಿದ್ದರು. ಆದರೆ, ಈ ಬಾರಿ ಚಿತ್ರೀಕರಣದಲ್ಲಿ ಭಾಗಿಯಾಗಿರುವುದರಿಂದ, ಗಣೇಶ್‍ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಗಣೇಶ್‍ ಸದ್ಯ ಮೂರು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ವಿಖ್ಯಾತ್‍ ನಿರ್ದೇಶನದ ‘ಯುವರ್ಸ್ ಸಿನ್ಸಿಯರ್ಲಿ ರಾಮ್‍’, ಧನಂಜಯ್‍ ನಿರ್ದೇಶನದ ‘ಪಿನಾಕ’ ಜೊತೆಗೆ ಅರಸು ಅಂತಾರೆ ನಿರ್ದೇಶನದ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ. ಈ ಪೈಕಿ, ಮೊದಲ ಎರಡು ಚಿತ್ರಗಳ ಚಿತ್ರೀಕರಣ ಸತತವಾಗಿ ನಡೆಯುತ್ತಿದ್ದು, ಆ ಚಿತ್ರೀಕರಣದಲ್ಲಿ ಗಣೇಶ್ ಭಾಗವಹಿಸುತ್ತಿರುವುದರಿಂದ, ಈ ಬಾರಿ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲವಂತೆ.

ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿರುವ ಗಣೇಶ್, ‘ಜುಲೈ.02 ನಾನು ಹುಟ್ಟಿದ ದಿನ. ಸಹಜವಾಗಿ ನನಗದು ನಿಮ್ಮ ಪ್ರೀತಿ ಹಾಗೂ ಅಭಿಮಾನವನ್ನು ಅತ್ಯಂತ ಸಮೀಪದಿಂದ ಕಣ್ತುಂಬಿಕೊಂಡು ಸಂಭ್ರಮಿಸುವ ದಿನ. ಆದರೆ, ಈ ಬಾರಿ ನಾನು ‘ಯುವರ್ಸ್ ಸಿನ್ಸಿಯರ್ಲಿ ರಾಮ್‍’ ಹಾಗೂ ‘ಪಿನಾಕ’ ಚಿತ್ರಗಳ ಹೊರಾಂಗಣ ಚಿತ್ರೀಕರಣಗಳಲ್ಲಿ ಭಾಗವಹಿಸಬೇಕಿರುವ ಕಾರಣ, ಜುಲೈ.02ರಂದು ನಾನು ನಿಮ್ಮೆಲ್ಲರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬ ನನಗೆ ಮತ್ತೊಂದಿಲ್ಲ. ಆದ ಕಾರಣ ಯಾರೂ ಮನೆಯ ಬಳಿ ಬರದೆ, ಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ತಾವುಗಳು ಇದ್ದಲ್ಲಿಂದಲೇ ನನಗೆ ಆಶಿಸಿ, ಆಶೀರ್ವದಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago