ಮನರಂಜನೆ

ನವೆಂಬರ್.14ಕ್ಕೆ ಬಿಡುಗಡೆಯಾಗಲಿದೆ ‘ಸಿಂಪಲ್’ ಸುನಿ ನಿರ್ದೇಶನದ ‘ಗತವೈಭವ’

‘ಸಿಂಪಲ್‍’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್‍’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈ ಪೈಕಿ ‘ಗತವೈಭವ’ ಮೊದಲು ಬಿಡುಗಡೆಯಾಗುತ್ತಿದ್ದು, ಚಿತ್ರವು ನವೆಂಬರ್‍ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಗತವೈಭವ’ ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವ ಸಲುವಾಗಿ ಸುನಿ ಮಾಧ್ಯಮದವರ ಎದುರು ಬಂದಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗತವೈಭವ’ ನಾನು ಬಹಳ ಗಂಭೀರವಾಗಿ ತೆಗೆದುಕೊಂಡ ಚಿತ್ರ. ನನ್ನ ಬ್ಯಾನರ್‌ನಡಿ ಮಾಡಬೇಕು ಎಂದುಕೊಂಡ ಸಿನಿಮಾ ಇದು. ದುಶ್ಯಂತ್ ಈ ಪ್ರಾಜೆಕ್ಟ್ ಮಾಡಬೇಕು ಎಂದು ಬರೆದಿತ್ತು. ಅದಕ್ಕೆ ಇದು ಅವರ ಅಭಿನಯದಲ್ಲಿ ಮೂಡಿಬಂದಿದೆ. ಈ ಚಿತ್ರಕ್ಕೆ ನಾಲ್ಕು ಸಿನಿಮಾ ಮಾಡಿದಷ್ಟು ಈ ಜರ್ನಿ ಆಗಿದೆ. ಅಂದುಕೊಂಡ ರೀತಿ ‘ಗತವೈಭವ’ ಮೂಡಿ ಬಂದಿದೆ. ಕೆಲವು ಸಿನಿಮಾ ಪ್ರಚಾರ ಮಾಡಿ ತೆರೆಗೆ ಬರುತ್ತವೆ. ಈ ಚಿತ್ರ ರಿಲೀಸ್ ಆದರೆ ಪ್ರಚಾರವಾಗುತ್ತವೆ. ಈ ಚಿತ್ರದಲ್ಲಿ ಮನರಂಜನೆ, ಎಮೋಷನ್ ಎಲ್ಲವೂ ಇದೆ’ ಎಂದರು.

ಇದನ್ನೂ ಓದಿ:-ಕರೂರು ಕಾಲ್ತುಳಿತ ದುರಂತ ಪ್ರಕರಣ ನಡೆಯಲು ಡಿಎಂಕೆ ಸರ್ಕಾರವೇ ನೇರ ಕಾರಣ: ಆರ್.‌ಅಶೋಕ್‌ ಆರೋಪ

ನಟ ದುಶ್ಯಂತ್ ಮಾತನಾಡಿ, ‘ನೂರು ದಿನಕ್ಕೂ ಹೆಚ್ಚು ಕಾಲ ಶೂಟಿಂಗ್ ಮಾಡಿದ್ದೇವೆ. ಪೋರ್ಚುಗಲ್ ಚಿತ್ರೀಕರಣ ಮಾಡಿದ್ದೇವೆ. ಗ್ರಾಫಿಕ್ ಕಾರಣದಿಂದ ಸಿನಿಮಾ ತಡವಾಯ್ತು. ನಮ್ಮ ನಿರೀಕ್ಷೆಗೂ‌ ಮೀರಿದಷ್ಟು ಚಿತ್ರ ಚೆನ್ನಾಗಿ ಬಂದಿದೆ. ಸುನಿ ಇದುವರೆಗೂ ಒಂಬತ್ತು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದು ಅವರ 10ನೇ ಸಿನಿಮಾ. ಅವರು 10 ಸಿನಿಮಾಗಳಲ್ಲೇ ಇದು ಬೆಸ್ಟ್ ಸಿನಿಮಾವಾಗಲಿದೆ. ಆಶಿಕಾ ಅವರ ವೃತ್ತಿಜೀವನದಲ್ಲೂ ಇದು ಬೆಸ್ಟ್ ಚಿತ್ರ ಎನಿಸಿಕೊಳ್ಳಲಿದೆ. ನವೆಂಬರ್.14ಕ್ಕೆ ‘ಗತವೈಭವ’ ತೆರೆಗೆ ಬರಲಿದೆ. ಅಕ್ಟೋಬರ್‌ನಲ್ಲಿ ಹಾಡುಗಳನ್ನು ರಿಲೀಸ್ ಮಾಡುವ ಯೋಚನೆ ಇದೆ ಎಂದರು.

ಆಶಿಕಾ ರಂಗನಾಥ್‍ಗೆ ‘ಗತವೈಭವ’ ವಿಶೇಷವಾದ ಸಿನಿಮಾ ಆಗಲಿದೆಯಮತೆ. ತಂಜಾವೂರಿನಲ್ಲಿ ಶೂಟಿಂಗ್ ಸಮಯದಲ್ಲಿ ಕೇಳಿದ ಕಥೆ. ತುಂಬಾ ಎಂಜಾಯ್ ಮಾಡಿಕೊಂಡು ಕಥೆ ಕೇಳಿದೆ. ಕಥೆ ಹೊಸದಾಗಿದೆ. ಪ್ರತಿಯೊಬ್ಬ ಕಲಾವಿದರು ಈ ರೀತಿ ಪಾತ್ರ ಸಿಗಲು ಅದೃಷ್ಟ ಮಾಡಿರಬೇಕು. ನನಗೆ ಚಿತ್ರದಲ್ಲಿ ನಾಲ್ಕು ಲುಕ್ ಇದೆ. ‘ಗತವೈಭವ’ದಲ್ಲಿ ನಟಿಸಿರುವುದು ಬೇರೆಯದ್ದೇ ಅನುಭವ ಎಂದರು.

‘ಗತವೈಭವ’ ಚಿತ್ರವನ್ನು ಸವೇಗರ ಸಿಲ್ವರ್‍ ಸ್ಕ್ರೀನ್ಸ್ ಸಂಸ್ಥೆಯಡಿ ದೀಪಕ್‍ ತಿಮ್ಮಪ್ಪ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ದುಷ್ಯಂತ್‍, ಆಶಿಕಾ ಜೊತೆಗೆ ಸುಧಾ ಬೆಳವಾಡಿ, ಕಿಶನ್‍ ಬೆಳಗಲಿ, ಕೃಷ್ಣ ಹೆಬ್ಬಾಳೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ವಿಲಿಯಂ ಡೇವಿಡ್‍ ಛಾಯಾಗ್ರಹಣ ಮತ್ತು ಜೂಡಾ ಸ್ಯಾಂಡಿ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

3 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

6 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

43 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

56 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

1 hour ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

1 hour ago