ಮನರಂಜನೆ

ಈ ಸ್ವಾತಂತ್ರ್ಯೋತ್ಸವಕ್ಕೆ ‘ಗೌರಿ’ ವರ್ಷಸ್‍ ‘ಕೃಷ್ಣ’ ವರ್ಸಸ್ ‘ಪೌಡರ್’

ಕನ್ನಡದಲ್ಲಿ ನಿರೀಕ್ಷಿತ ಚಿತ್ರಗಳು ಬರುತ್ತಿಲ್ಲ, ಬರೀ ಹೊಸಬರ ಚಿತ್ರಗಳು ಬಿಡುಗಡೆಯಾಗುತ್ತಿವೆ ಎಂಬ ಪ್ರೇಕ್ಷಕರ ಬೇಸರದ ನಡುವೆಯೇ, ಈ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೂರು ನಿರೀಕ್ಷಿತ ಚಿತ್ರಗಳು ಬಿಡುಗಡೆಯಾಗುತ್ತಿವೆ. ಪ್ರಮುಖವಾಗಿ, ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ‘ಗೌರಿ’, ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ದಿಗಂತ್‍ ಅಭಿನಯದ ‘ಪೌಡರ್’ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಮೊದಲು ಈ ದಿನಾಂಕದಂದು ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ವಿಳಂಬವಾಗಿ, ಚಿತ್ರದ ಕೆಲಸಗಳು ಅಂದುಕೊಂಡಂತೆ ಮುಗಿಯದ ಕಾರಣ, ಚಿತ್ರವನ್ನು ಸೆಪ್ಟೆಂಬರ್‍ ತಿಂಗಳಿಗೆ ಮುಂದೂಡಲಾಗಿದೆ. ಅದೇ ದಿನ ರೋಹಿತ್‍ ಶೆಟ್ಟಿ ನಿರ್ದೇಶನದ, ಅಜಯ್‍ ದೇವಗನ್‍ ಅಭಿನಯದ ‘ಸಿಂಗಂ ಅಗೇನ್‍’ ಮತ್ತು ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’ ಚಿತ್ರಗಳನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡಗಳು ಘೋಷಿಸಿದ್ದವು. ಆದರೆ, ಕೆಲಸಗಳು ಮುಗಿಯದ ಕಾರಣ ಅವೆರಡೂ ಚಿತ್ರಗಳ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಹೀಗೆ ನಿರೀಕ್ಷಿತ ಚಿತ್ರಗಳು ಮುಂದಕ್ಕೆ ಹೋದ ಕಾರಣ, ಆ ಜಾಗಕ್ಕೆ ಇನ್ನಷ್ಟು ಚಿತ್ರಗಳು ಬಂದು ಸೇರಿಕೊಂಡಿದವೆ. ಕನ್ನಡದಿಂದ ‘ಗೌರಿ’, ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಪೌಡರ್’ ಚಿತ್ರಗಳಿದ್ದರೆ, ತೆಲುಗಿನಲ್ಲಿ ರಾಮ್‍ ಪೋತಿನೇನಿ ಅಭಿನಯದ ‘ಡಬಲ್‍ ಇಸ್ಮಾರ್ಟ್’ ಮತ್ತು ರವಿತೇಜ ಅಭಿನಯದ ‘ಮಿಸ್ಟರ್ ಬಚ್ಚನ್‍’ ಚಿತ್ರಗಳಿವೆ. ಇನ್ನು ತಮಿಳಿನಿಂದ ವಿಕ್ರಮ್‍ ಅಭಿನಯದ ‘ತಂಗಾಳನ್‍’ ಮತ್ತು ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳಿನಲ್ಲಿ ಮೊದಲ ಬಾರಿಗೆ ನಿರ್ಮಿಸಿರುವ ಕೀರ್ತಿ ಸುರೇಶ್‍ ಅಭಿನಯದ ‘ರಘು ತಥಾ’ ಚಿತ್ರಗಳಿವೆ. ಹಿಂದಿಯಲ್ಲಿ ಅಕ್ಷಯ್‍ ಕುಮಾರ್ ಅಭಿನಯದ ‘ಖೇಲ್‍ ಖೇಲ್‍ ಮೇ’, ಜಾನ್‍ ಅಬ್ರಹಾಂ ಅಭಿನಯದ ‘ವೇದ’ ಮತ್ತು ರಾಜಕುಮಾರ್ ರಾವ್‍ ಅಭಿನಯದ ‘ಸ್ತ್ರೀ 2’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿವೆ.

ಇವೆಲ್ಲವೂ ದೊಡ್ಡ ಚಿತ್ರಗಳ ಪಟ್ಟಿಯಷ್ಟೇ. ಇದಲ್ಲದೆ ಸಣ್ಣ ಚಿತ್ರಗಳು ಅದೆಷ್ಟು ಬಿಡುಗಡೆಯಾಗುತ್ತವೋ ಗೊತ್ತಿಲ್ಲ. ಈ ಪಟ್ಟಿಯಲ್ಲಿ 10 ಪ್ಲಸ್ ಚಿತ್ರಗಳು ಸಿಗುತ್ತವೆ. ಇಷ್ಟೊಂದು ಚಿತ್ರಗಳು ಒಂದೇ ದಿನ ಬಿಡುಗಡೆ ಆಗುತ್ತಿರುವುದಕ್ಕೂ ಕಾರಣವಿದೆ. ಪ್ರಮುಖವಾಗಿ, ಸ್ವಾತಂತ್ರ್ಯ ದಿನ ಗುರುವಾರದಂದು ಬರುತ್ತದೆ. ಶುಕ್ರವಾರವೊಂದು ರಜೆ ಹಾಕಿಕೊಂಡರೆ, ಶನಿವಾರ ಮತ್ತು ಭಾನುವಾರ ಸೇರಿ ನಾಲ್ಕು ದಿನಗಳು ಸಿಗುತ್ತವೆ. ಹೀಗೆ ಲಾಂಗ್‍ ವೀಕೆಂಡ್‍ ಇರುವುದರಿಂದ ಹಲವು ಚಿತ್ರಗಳು ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿವೆ.

ಭೂಮಿಕಾ

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

5 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

5 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

6 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

6 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

6 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

7 hours ago