ಮನರಂಜನೆ

ಈ ಸ್ವಾತಂತ್ರ್ಯೋತ್ಸವಕ್ಕೆ ‘ಗೌರಿ’ ವರ್ಷಸ್‍ ‘ಕೃಷ್ಣ’ ವರ್ಸಸ್ ‘ಪೌಡರ್’

ಕನ್ನಡದಲ್ಲಿ ನಿರೀಕ್ಷಿತ ಚಿತ್ರಗಳು ಬರುತ್ತಿಲ್ಲ, ಬರೀ ಹೊಸಬರ ಚಿತ್ರಗಳು ಬಿಡುಗಡೆಯಾಗುತ್ತಿವೆ ಎಂಬ ಪ್ರೇಕ್ಷಕರ ಬೇಸರದ ನಡುವೆಯೇ, ಈ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೂರು ನಿರೀಕ್ಷಿತ ಚಿತ್ರಗಳು ಬಿಡುಗಡೆಯಾಗುತ್ತಿವೆ. ಪ್ರಮುಖವಾಗಿ, ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ‘ಗೌರಿ’, ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ದಿಗಂತ್‍ ಅಭಿನಯದ ‘ಪೌಡರ್’ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಮೊದಲು ಈ ದಿನಾಂಕದಂದು ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ವಿಳಂಬವಾಗಿ, ಚಿತ್ರದ ಕೆಲಸಗಳು ಅಂದುಕೊಂಡಂತೆ ಮುಗಿಯದ ಕಾರಣ, ಚಿತ್ರವನ್ನು ಸೆಪ್ಟೆಂಬರ್‍ ತಿಂಗಳಿಗೆ ಮುಂದೂಡಲಾಗಿದೆ. ಅದೇ ದಿನ ರೋಹಿತ್‍ ಶೆಟ್ಟಿ ನಿರ್ದೇಶನದ, ಅಜಯ್‍ ದೇವಗನ್‍ ಅಭಿನಯದ ‘ಸಿಂಗಂ ಅಗೇನ್‍’ ಮತ್ತು ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’ ಚಿತ್ರಗಳನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡಗಳು ಘೋಷಿಸಿದ್ದವು. ಆದರೆ, ಕೆಲಸಗಳು ಮುಗಿಯದ ಕಾರಣ ಅವೆರಡೂ ಚಿತ್ರಗಳ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಹೀಗೆ ನಿರೀಕ್ಷಿತ ಚಿತ್ರಗಳು ಮುಂದಕ್ಕೆ ಹೋದ ಕಾರಣ, ಆ ಜಾಗಕ್ಕೆ ಇನ್ನಷ್ಟು ಚಿತ್ರಗಳು ಬಂದು ಸೇರಿಕೊಂಡಿದವೆ. ಕನ್ನಡದಿಂದ ‘ಗೌರಿ’, ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಪೌಡರ್’ ಚಿತ್ರಗಳಿದ್ದರೆ, ತೆಲುಗಿನಲ್ಲಿ ರಾಮ್‍ ಪೋತಿನೇನಿ ಅಭಿನಯದ ‘ಡಬಲ್‍ ಇಸ್ಮಾರ್ಟ್’ ಮತ್ತು ರವಿತೇಜ ಅಭಿನಯದ ‘ಮಿಸ್ಟರ್ ಬಚ್ಚನ್‍’ ಚಿತ್ರಗಳಿವೆ. ಇನ್ನು ತಮಿಳಿನಿಂದ ವಿಕ್ರಮ್‍ ಅಭಿನಯದ ‘ತಂಗಾಳನ್‍’ ಮತ್ತು ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳಿನಲ್ಲಿ ಮೊದಲ ಬಾರಿಗೆ ನಿರ್ಮಿಸಿರುವ ಕೀರ್ತಿ ಸುರೇಶ್‍ ಅಭಿನಯದ ‘ರಘು ತಥಾ’ ಚಿತ್ರಗಳಿವೆ. ಹಿಂದಿಯಲ್ಲಿ ಅಕ್ಷಯ್‍ ಕುಮಾರ್ ಅಭಿನಯದ ‘ಖೇಲ್‍ ಖೇಲ್‍ ಮೇ’, ಜಾನ್‍ ಅಬ್ರಹಾಂ ಅಭಿನಯದ ‘ವೇದ’ ಮತ್ತು ರಾಜಕುಮಾರ್ ರಾವ್‍ ಅಭಿನಯದ ‘ಸ್ತ್ರೀ 2’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿವೆ.

ಇವೆಲ್ಲವೂ ದೊಡ್ಡ ಚಿತ್ರಗಳ ಪಟ್ಟಿಯಷ್ಟೇ. ಇದಲ್ಲದೆ ಸಣ್ಣ ಚಿತ್ರಗಳು ಅದೆಷ್ಟು ಬಿಡುಗಡೆಯಾಗುತ್ತವೋ ಗೊತ್ತಿಲ್ಲ. ಈ ಪಟ್ಟಿಯಲ್ಲಿ 10 ಪ್ಲಸ್ ಚಿತ್ರಗಳು ಸಿಗುತ್ತವೆ. ಇಷ್ಟೊಂದು ಚಿತ್ರಗಳು ಒಂದೇ ದಿನ ಬಿಡುಗಡೆ ಆಗುತ್ತಿರುವುದಕ್ಕೂ ಕಾರಣವಿದೆ. ಪ್ರಮುಖವಾಗಿ, ಸ್ವಾತಂತ್ರ್ಯ ದಿನ ಗುರುವಾರದಂದು ಬರುತ್ತದೆ. ಶುಕ್ರವಾರವೊಂದು ರಜೆ ಹಾಕಿಕೊಂಡರೆ, ಶನಿವಾರ ಮತ್ತು ಭಾನುವಾರ ಸೇರಿ ನಾಲ್ಕು ದಿನಗಳು ಸಿಗುತ್ತವೆ. ಹೀಗೆ ಲಾಂಗ್‍ ವೀಕೆಂಡ್‍ ಇರುವುದರಿಂದ ಹಲವು ಚಿತ್ರಗಳು ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿವೆ.

ಭೂಮಿಕಾ

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

14 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

22 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

22 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

22 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

22 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

22 hours ago