ಮನರಂಜನೆ

ಗೀತಾ ಪಿಕ್ಚರ್ಸ್‌ನ ನಾಲ್ಕನೇ ಚಿತ್ರ ಘೋಷಣೆ; ಧೀರನ್ ರಾಮ್‌ಕುಮಾರ್ ನಾಯಕ

‘ಭೈರತಿ ರಣಗಲ್‍’ ಚಿತ್ರದ ಯಶಸ್ಸಿನ ನಂತರ ಗೀತಾ ಶಿವರಾಜಕುಮಾರ್ ಅವರ ಗೀತಾ ಪಿಕ್ಚರ್ಸ್ ಸಂಸ್ಥೆಯು, ಶಿವರಾಜಕುಮಾರ್‍ ಅಭಿನಯದಲ್ಲಿ ‘ಎ ಫಾರ್‍ ಆನಂದ್‍’ ಎಂಬ ಚಿತ್ರವನ್ನು ನಿರ್ಮಿಸುವುದಾಗಿ ಘೋಷಣೆ ಮಾಡಿತ್ತು. ಅದಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಗೀತಾ ಪಿಕ್ಚರ್ಸ್ ಸಂಸ್ಥೆಯಿಂದ ಇನ್ನೊಂದು ಹೊಸ ಚಿತ್ರದ ಘೋಷಣೆಯಾಗಿದೆ.

ಡಿ. 6, ಪಾರ್ವತಮ್ಮ ರಾಜಕುಮಾರ್‍ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಗೀತಾ ಪಿಕ್ಚರ್ಸ್‍ನ ನಾಲ್ಕನೇ ಚಿತ್ರವನ್ನು ಘೋಷಿಸಲಾಗಿದೆ. ಈ ಚಿತ್ರದಲ್ಲಿ ಧೀರನ್‍ ರಾಮ್‍ಕುಮಾರ್‍ ನಾಯಕನಾಗಿ ನಟಿಸಿದರೆ, ‘ಶಾಖಾಹಾರಿ’ ಚಿತ್ರವನ್ನು ನಿರ್ದೇಶಿಸಿದ್ದ ಸಂದೀಪ್‍ ಸುಂಕದ್‍ ನಿರ್ದೇಶನ ಮಾಡುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಸಂದೀಪ್ ಸುಂಕದ್, ‘ಕೆಲವು ತಿಂಗಳುಗಳಿಂದ ಕಥೆಯ ಚರ್ಚೆ ನಡೆಯುತ್ತಿತ್ತು. ಕಥೆಯನ್ನು ಶಿವಣ್ಣ ಮತ್ತು ಗೀತಾ ಶಿವರಾಜಕುಮಾರ್ ಅವರಿಗೆ ಹೇಳಿದಾಗ, ಅವರಿಗೆ ತುಂಬಾ ಇಷ್ಟವಾಯಿತು. ಕೇವಲ ಕೆಲವೇ ದಿನಗಳಲ್ಲಿ ಅವರು ಈ ಚಿತ್ರವನ್ನು ನಿರ್ಮಿಸಲು ಮುಂದಾದರು. ಇಂಥಾ ದೊಡ್ಡ ಬ್ಯಾನರ್‌ ಜೊತೆ ಎಷ್ಟೋ ನಿರ್ದೇಸಕರಿಗೆ ಕೆಲಸ ಮಾಡುವ ಆಸೆಯಿರುತ್ತದೆ. ನನ್ನ ಎರಡನೇ ಸಿನಿಮಾಗೆ ಇಂಥದ್ದೊಂದು ಅವಕಾಶ ಸಿಕ್ಕಿದ್ದನ್ನು ಪದಗಳಲ್ಲಿ ಹೇಳುವುದು ಕಷ್ಟ’ ಎಂದರು.

ಧೀರನ್ ರಾಮ್‌ಕುಮಾರ್‌ ಮಾತನಾಡಿ, ‘ಕಳೆದ ಕೆಲವು ವರ್ಷಗಳಲ್ಲಿ ಹಲವಾರು ಆಫರ್‌ಗಳು ಬಂದರೂ, ನಾನು ಧೈರ್ಯವಾಗಿ ನಿರಾಕರಿಸಿ, ನನ್ನ ಮೇಲೆ ಕೆಲಸ ಮಾಡಲು ಸಮಯ ತೆಗೆದುಕೊಂಡೆ. ನನ್ನ ಎರಡನೇ ಸಿನಿಮಾ ನನ್ನ ಪ್ರತಿಭೆ ತೋರಿಸುವ ಅವಕಾಶವಾಗಬೇಕು ಅನ್ನೋ ಆಸೆ ಇತ್ತು. ಸಂದೀಪ್ ಅವರು ಕಥೆ ಹೇಳಿದಾಗ ಖುಷಿಯಾಯ್ತು. ‘ಶಾಖಾಹಾರಿ’ ಚಿತ್ರವು ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ OTT ಮೂಲಕ ದೊಡ್ಡ ಹೆಸರು ಮಾಡಿತ್ತು. ಇಂಥಾ ತಂಡದ ಜೊತೆಗೆ ಕೆಲಸ ಮಾಡುವುದು ನನಗೆ ಸಂತೋಷ’ ಎಂದರು.

ಸದ್ಯಕ್ಕೆ ಚಿತ್ರವನ್ನು ಘೋಷಿಸವ ಪೋಸ್ಟರ್‍ ಮಾತ್ರ ಬಿಡುಗಡೆಯಾಗಿದ್ದು, ಚಿತ್ರದ ಉಳಿದ ವಿಷಯಗಳು ಸದ್ಯದಲ್ಲೇ ಬಹಿರಂಗವಾಗಲಿದೆ. ಚಿತ್ರಕ್ಕೆ ಜನವರಿಯಲ್ಲಿ ಚಿತ್ರೀಕರಣ ಪರಾರಂಭವಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

3 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

3 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

3 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

3 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

3 hours ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

4 hours ago