‘ಭೈರತಿ ರಣಗಲ್’ ಚಿತ್ರದ ಯಶಸ್ಸಿನ ನಂತರ ಗೀತಾ ಶಿವರಾಜಕುಮಾರ್ ಅವರ ಗೀತಾ ಪಿಕ್ಚರ್ಸ್ ಸಂಸ್ಥೆಯು, ಶಿವರಾಜಕುಮಾರ್ ಅಭಿನಯದಲ್ಲಿ ‘ಎ ಫಾರ್ ಆನಂದ್’ ಎಂಬ ಚಿತ್ರವನ್ನು ನಿರ್ಮಿಸುವುದಾಗಿ ಘೋಷಣೆ ಮಾಡಿತ್ತು. ಅದಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಗೀತಾ ಪಿಕ್ಚರ್ಸ್ ಸಂಸ್ಥೆಯಿಂದ ಇನ್ನೊಂದು ಹೊಸ ಚಿತ್ರದ ಘೋಷಣೆಯಾಗಿದೆ.
ಡಿ. 6, ಪಾರ್ವತಮ್ಮ ರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಗೀತಾ ಪಿಕ್ಚರ್ಸ್ನ ನಾಲ್ಕನೇ ಚಿತ್ರವನ್ನು ಘೋಷಿಸಲಾಗಿದೆ. ಈ ಚಿತ್ರದಲ್ಲಿ ಧೀರನ್ ರಾಮ್ಕುಮಾರ್ ನಾಯಕನಾಗಿ ನಟಿಸಿದರೆ, ‘ಶಾಖಾಹಾರಿ’ ಚಿತ್ರವನ್ನು ನಿರ್ದೇಶಿಸಿದ್ದ ಸಂದೀಪ್ ಸುಂಕದ್ ನಿರ್ದೇಶನ ಮಾಡುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ಸಂದೀಪ್ ಸುಂಕದ್, ‘ಕೆಲವು ತಿಂಗಳುಗಳಿಂದ ಕಥೆಯ ಚರ್ಚೆ ನಡೆಯುತ್ತಿತ್ತು. ಕಥೆಯನ್ನು ಶಿವಣ್ಣ ಮತ್ತು ಗೀತಾ ಶಿವರಾಜಕುಮಾರ್ ಅವರಿಗೆ ಹೇಳಿದಾಗ, ಅವರಿಗೆ ತುಂಬಾ ಇಷ್ಟವಾಯಿತು. ಕೇವಲ ಕೆಲವೇ ದಿನಗಳಲ್ಲಿ ಅವರು ಈ ಚಿತ್ರವನ್ನು ನಿರ್ಮಿಸಲು ಮುಂದಾದರು. ಇಂಥಾ ದೊಡ್ಡ ಬ್ಯಾನರ್ ಜೊತೆ ಎಷ್ಟೋ ನಿರ್ದೇಸಕರಿಗೆ ಕೆಲಸ ಮಾಡುವ ಆಸೆಯಿರುತ್ತದೆ. ನನ್ನ ಎರಡನೇ ಸಿನಿಮಾಗೆ ಇಂಥದ್ದೊಂದು ಅವಕಾಶ ಸಿಕ್ಕಿದ್ದನ್ನು ಪದಗಳಲ್ಲಿ ಹೇಳುವುದು ಕಷ್ಟ’ ಎಂದರು.
ಧೀರನ್ ರಾಮ್ಕುಮಾರ್ ಮಾತನಾಡಿ, ‘ಕಳೆದ ಕೆಲವು ವರ್ಷಗಳಲ್ಲಿ ಹಲವಾರು ಆಫರ್ಗಳು ಬಂದರೂ, ನಾನು ಧೈರ್ಯವಾಗಿ ನಿರಾಕರಿಸಿ, ನನ್ನ ಮೇಲೆ ಕೆಲಸ ಮಾಡಲು ಸಮಯ ತೆಗೆದುಕೊಂಡೆ. ನನ್ನ ಎರಡನೇ ಸಿನಿಮಾ ನನ್ನ ಪ್ರತಿಭೆ ತೋರಿಸುವ ಅವಕಾಶವಾಗಬೇಕು ಅನ್ನೋ ಆಸೆ ಇತ್ತು. ಸಂದೀಪ್ ಅವರು ಕಥೆ ಹೇಳಿದಾಗ ಖುಷಿಯಾಯ್ತು. ‘ಶಾಖಾಹಾರಿ’ ಚಿತ್ರವು ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ OTT ಮೂಲಕ ದೊಡ್ಡ ಹೆಸರು ಮಾಡಿತ್ತು. ಇಂಥಾ ತಂಡದ ಜೊತೆಗೆ ಕೆಲಸ ಮಾಡುವುದು ನನಗೆ ಸಂತೋಷ’ ಎಂದರು.
ಸದ್ಯಕ್ಕೆ ಚಿತ್ರವನ್ನು ಘೋಷಿಸವ ಪೋಸ್ಟರ್ ಮಾತ್ರ ಬಿಡುಗಡೆಯಾಗಿದ್ದು, ಚಿತ್ರದ ಉಳಿದ ವಿಷಯಗಳು ಸದ್ಯದಲ್ಲೇ ಬಹಿರಂಗವಾಗಲಿದೆ. ಚಿತ್ರಕ್ಕೆ ಜನವರಿಯಲ್ಲಿ ಚಿತ್ರೀಕರಣ ಪರಾರಂಭವಾಗುವ ಸಾಧ್ಯತೆ ಇದೆ.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…