ಮನರಂಜನೆ

ಗೀತಾ ಪಿಕ್ಚರ್ಸ್‌ನ ನಾಲ್ಕನೇ ಚಿತ್ರ ಘೋಷಣೆ; ಧೀರನ್ ರಾಮ್‌ಕುಮಾರ್ ನಾಯಕ

‘ಭೈರತಿ ರಣಗಲ್‍’ ಚಿತ್ರದ ಯಶಸ್ಸಿನ ನಂತರ ಗೀತಾ ಶಿವರಾಜಕುಮಾರ್ ಅವರ ಗೀತಾ ಪಿಕ್ಚರ್ಸ್ ಸಂಸ್ಥೆಯು, ಶಿವರಾಜಕುಮಾರ್‍ ಅಭಿನಯದಲ್ಲಿ ‘ಎ ಫಾರ್‍ ಆನಂದ್‍’ ಎಂಬ ಚಿತ್ರವನ್ನು ನಿರ್ಮಿಸುವುದಾಗಿ ಘೋಷಣೆ ಮಾಡಿತ್ತು. ಅದಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಗೀತಾ ಪಿಕ್ಚರ್ಸ್ ಸಂಸ್ಥೆಯಿಂದ ಇನ್ನೊಂದು ಹೊಸ ಚಿತ್ರದ ಘೋಷಣೆಯಾಗಿದೆ.

ಡಿ. 6, ಪಾರ್ವತಮ್ಮ ರಾಜಕುಮಾರ್‍ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಗೀತಾ ಪಿಕ್ಚರ್ಸ್‍ನ ನಾಲ್ಕನೇ ಚಿತ್ರವನ್ನು ಘೋಷಿಸಲಾಗಿದೆ. ಈ ಚಿತ್ರದಲ್ಲಿ ಧೀರನ್‍ ರಾಮ್‍ಕುಮಾರ್‍ ನಾಯಕನಾಗಿ ನಟಿಸಿದರೆ, ‘ಶಾಖಾಹಾರಿ’ ಚಿತ್ರವನ್ನು ನಿರ್ದೇಶಿಸಿದ್ದ ಸಂದೀಪ್‍ ಸುಂಕದ್‍ ನಿರ್ದೇಶನ ಮಾಡುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಸಂದೀಪ್ ಸುಂಕದ್, ‘ಕೆಲವು ತಿಂಗಳುಗಳಿಂದ ಕಥೆಯ ಚರ್ಚೆ ನಡೆಯುತ್ತಿತ್ತು. ಕಥೆಯನ್ನು ಶಿವಣ್ಣ ಮತ್ತು ಗೀತಾ ಶಿವರಾಜಕುಮಾರ್ ಅವರಿಗೆ ಹೇಳಿದಾಗ, ಅವರಿಗೆ ತುಂಬಾ ಇಷ್ಟವಾಯಿತು. ಕೇವಲ ಕೆಲವೇ ದಿನಗಳಲ್ಲಿ ಅವರು ಈ ಚಿತ್ರವನ್ನು ನಿರ್ಮಿಸಲು ಮುಂದಾದರು. ಇಂಥಾ ದೊಡ್ಡ ಬ್ಯಾನರ್‌ ಜೊತೆ ಎಷ್ಟೋ ನಿರ್ದೇಸಕರಿಗೆ ಕೆಲಸ ಮಾಡುವ ಆಸೆಯಿರುತ್ತದೆ. ನನ್ನ ಎರಡನೇ ಸಿನಿಮಾಗೆ ಇಂಥದ್ದೊಂದು ಅವಕಾಶ ಸಿಕ್ಕಿದ್ದನ್ನು ಪದಗಳಲ್ಲಿ ಹೇಳುವುದು ಕಷ್ಟ’ ಎಂದರು.

ಧೀರನ್ ರಾಮ್‌ಕುಮಾರ್‌ ಮಾತನಾಡಿ, ‘ಕಳೆದ ಕೆಲವು ವರ್ಷಗಳಲ್ಲಿ ಹಲವಾರು ಆಫರ್‌ಗಳು ಬಂದರೂ, ನಾನು ಧೈರ್ಯವಾಗಿ ನಿರಾಕರಿಸಿ, ನನ್ನ ಮೇಲೆ ಕೆಲಸ ಮಾಡಲು ಸಮಯ ತೆಗೆದುಕೊಂಡೆ. ನನ್ನ ಎರಡನೇ ಸಿನಿಮಾ ನನ್ನ ಪ್ರತಿಭೆ ತೋರಿಸುವ ಅವಕಾಶವಾಗಬೇಕು ಅನ್ನೋ ಆಸೆ ಇತ್ತು. ಸಂದೀಪ್ ಅವರು ಕಥೆ ಹೇಳಿದಾಗ ಖುಷಿಯಾಯ್ತು. ‘ಶಾಖಾಹಾರಿ’ ಚಿತ್ರವು ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ OTT ಮೂಲಕ ದೊಡ್ಡ ಹೆಸರು ಮಾಡಿತ್ತು. ಇಂಥಾ ತಂಡದ ಜೊತೆಗೆ ಕೆಲಸ ಮಾಡುವುದು ನನಗೆ ಸಂತೋಷ’ ಎಂದರು.

ಸದ್ಯಕ್ಕೆ ಚಿತ್ರವನ್ನು ಘೋಷಿಸವ ಪೋಸ್ಟರ್‍ ಮಾತ್ರ ಬಿಡುಗಡೆಯಾಗಿದ್ದು, ಚಿತ್ರದ ಉಳಿದ ವಿಷಯಗಳು ಸದ್ಯದಲ್ಲೇ ಬಹಿರಂಗವಾಗಲಿದೆ. ಚಿತ್ರಕ್ಕೆ ಜನವರಿಯಲ್ಲಿ ಚಿತ್ರೀಕರಣ ಪರಾರಂಭವಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

3 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

4 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

4 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

5 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

5 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

5 hours ago