ಬಾಲಿವುಡ್ನಲ್ಲಿ ಸದಾ ಆಕ್ಟೀವ್ ಆಗಿರುವ ಜೋಡಿ ಎಂದರೆ ರಿತೇಶ್ ದೇಶ್ಮುಖ್ ಹಾಗೂ ಜೆನಿಲಿಯಾ ಡಿಸೋಜಾ ಜೋಡಿ. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿ ಬಿಔನ್ ಅಂಗಳದಲ್ಲಿನ ಕ್ಯೂಟ್ ಕಪಲ್ ಎಂದೇ ಹೆಸರಾಗಿದ್ದಾರೆ.
ಸದಾ ಒಂದಿಲ್ಲೊಂದು ವಿಚಾರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಈ ಜೋಡಿ ಈಗ ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಲೆಬ್ರೆಟಿ ಜೋಡಿಯು ತಮ್ಮ ಅಂಗಾಂಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದು, ಎಲ್ಲಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ರಿತೇಶ್ ಹಾಗೂ ಜೆನಿಲಿಯಾ ಜೋಡಿ ತಮ್ಮ ಅಂಗಾಂಗಳನ್ನು ದಾನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಈ ಜೋಡಿಗೆ ಧನ್ಯವಾದ ಹೇಳಿದ್ದಾರೆ.
ಈ ಜೋಡಿಯ ನಿರ್ಧಾರದ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸ್ಥೆ, “ಜುಲೈನಲ್ಲಿ ನಡೆಯುತ್ತಿರುವ ಅಂಗಾಂಗ ದಾನದ ತಿಂಗಳಿನಲ್ಲಿ ತಮ್ಮ ಅಂಗಾಂಗಗಳನ್ನು ದಾನ ಮಾಡಲು ವಾಗ್ದಾನ ಮಾಡಿದ ಬಾಲಿವುಡ್ ತಾರೆ ದಂಪತಿಗಳಾದ ರಿತೇಶ್ ದೇಶಮುಖ್ ಮತ್ತು ಜೆನಿಲಿಯಾ ಅವರಿಗೆ ಧನ್ಯವಾದಗಳು. ಅವರ ಗೆಸ್ಚರ್ ಇತರರನ್ನು ಉದಾತ್ತ ಕಾರಣದೊಂದಿಗೆ ಸಂಪರ್ಕಿಸಲು ಪ್ರೇರೇಪಿಸುತ್ತದೆ” ಎಂದು ಬರೆದುಕೊಂಡು ಬಿಟೌನ್ ಜೋಡಿವ ವಾಗ್ದಾನದ ವೀಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…