ಬಾಲಿವುಡ್ನಲ್ಲಿ ಸದಾ ಆಕ್ಟೀವ್ ಆಗಿರುವ ಜೋಡಿ ಎಂದರೆ ರಿತೇಶ್ ದೇಶ್ಮುಖ್ ಹಾಗೂ ಜೆನಿಲಿಯಾ ಡಿಸೋಜಾ ಜೋಡಿ. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿ ಬಿಔನ್ ಅಂಗಳದಲ್ಲಿನ ಕ್ಯೂಟ್ ಕಪಲ್ ಎಂದೇ ಹೆಸರಾಗಿದ್ದಾರೆ.
ಸದಾ ಒಂದಿಲ್ಲೊಂದು ವಿಚಾರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಈ ಜೋಡಿ ಈಗ ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಲೆಬ್ರೆಟಿ ಜೋಡಿಯು ತಮ್ಮ ಅಂಗಾಂಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದು, ಎಲ್ಲಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ರಿತೇಶ್ ಹಾಗೂ ಜೆನಿಲಿಯಾ ಜೋಡಿ ತಮ್ಮ ಅಂಗಾಂಗಳನ್ನು ದಾನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಈ ಜೋಡಿಗೆ ಧನ್ಯವಾದ ಹೇಳಿದ್ದಾರೆ.
ಈ ಜೋಡಿಯ ನಿರ್ಧಾರದ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸ್ಥೆ, “ಜುಲೈನಲ್ಲಿ ನಡೆಯುತ್ತಿರುವ ಅಂಗಾಂಗ ದಾನದ ತಿಂಗಳಿನಲ್ಲಿ ತಮ್ಮ ಅಂಗಾಂಗಗಳನ್ನು ದಾನ ಮಾಡಲು ವಾಗ್ದಾನ ಮಾಡಿದ ಬಾಲಿವುಡ್ ತಾರೆ ದಂಪತಿಗಳಾದ ರಿತೇಶ್ ದೇಶಮುಖ್ ಮತ್ತು ಜೆನಿಲಿಯಾ ಅವರಿಗೆ ಧನ್ಯವಾದಗಳು. ಅವರ ಗೆಸ್ಚರ್ ಇತರರನ್ನು ಉದಾತ್ತ ಕಾರಣದೊಂದಿಗೆ ಸಂಪರ್ಕಿಸಲು ಪ್ರೇರೇಪಿಸುತ್ತದೆ” ಎಂದು ಬರೆದುಕೊಂಡು ಬಿಟೌನ್ ಜೋಡಿವ ವಾಗ್ದಾನದ ವೀಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…