ಕೋವಿಡ್ಗೂ ಮುನ್ನ ಜಯಂತ್ ಕಾಯ್ಕಿಣಿ ಅವರ ಕಥೆಯನ್ನಾಧರಿಸಿ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರ ಮಾಡಿದ್ದರು ಪದ್ಮಶ್ರೀ ಪುರಸ್ಕೃತ ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ. ಆ ನಂತರ ಅವರು ಯಾವೊಂದು ಚಿತ್ರವನ್ನೂ ನಿರ್ದೇಶಿಸಿರಲಿಲ್ಲ. ಬಹುಶಃ ಅದೇ ತಮ್ಮ ಕೊನೆಯ ಚಿತ್ರವಾಗುವ ಸಾಧ್ಯತೆ ಇದೆ ಎಂಬರ್ಥದಲ್ಲಿ ಮಾತನಾಡಿದ್ದರು. ಹೀಗಿರುವಾಗಲೇ, ಅವರು ಒಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ. ಅದೇ ‘ಆಕಾಶ ಮತ್ತು ಬೆಕ್ಕು’.
‘ಆಕಾಶ ಮತ್ತು ಬೆಕ್ಕು’, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ಅವರ ಕಥೆಯನ್ನಾಧರಿಸಿದ ಚಿತ್ರ. ಈ ಕಥೆಯನ್ನು ಕಾಸರವಳ್ಳಿ ಅವರು ಸಿನಿಮಾ ಮಾಡುವುದಕ್ಕೆ ಹೊರಟಿದ್ದಾರೆ. ತೀರ್ಥಹಳ್ಳಿಯ ಒಂದಿಷ್ಟು ಸಮಾನ ಮನಸ್ಕರು ಸೇರಿ ಈ ಚಿತ್ರವನ್ನು ಕ್ರೌಡ್ ಫಂಡಿಂಗ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಅನ್ವೇಷಣೆ ಚಿತ್ರ ಸಂಸ್ಥೆ ಎಂಬ ಚಿತ್ರ ನಿರ್ಮಾಣ ಸಂಸ್ಥೆಯಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಈ ಚಿತ್ರದಲ್ಲಿ ಬಹಳಷ್ಟು ತೀರ್ಥಹಳ್ಳಿಯ ಪ್ರತಿಭೆಗಳು ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರಕ್ಕೆ ಆಡಿಷನ್ ಮೂಲಕ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ, ಈ ಚಿತ್ರದ ಕಥೆ ಬರೆದಿರುವವರು, ಕಲಾವಿದರು ಮತ್ತು ತಂತ್ರಜ್ಞರು ಎಲ್ಲರೂ ತೀರ್ಥಹಳ್ಳಿ ತಾಲ್ಲೂಕಿನವರು ಎನ್ನುವುದು ವಿಶೇಷ. ಶಮಿತಾ ಮಲ್ನಾಡ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.
ಅನಂತಮೂರ್ತಿ ಅವರ ‘ಘಟಶ್ರಾದ್ಧ’ ಕಥೆಯನ್ನು ಚಿತ್ರ ಮಾಡುವ ಮೂಲಕ ನಿರ್ದೇಶಕರಾದವರು ಕಾಸರವಳ್ಳಿ. ಆ ನಂತರ ಬೇರೆ ಸಾಹಿತಿಗಳ ಕಥೆ ಮತ್ತು ಕಾದಂಬರಿಗಳನ್ನಾಧರಿಸಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಈಗ ಬಹಳ ವರ್ಷಗಳ ನಂತರ ಅನಂತಮೂರ್ತಿ ಅವರ ಇನ್ನೊಂದು ಕಥೆಯನ್ನು ಚಿತ್ರ ಮಾಡುತ್ತಿದ್ದಾರೆ.
‘ಆಕಾಶ ಮತ್ತು ಬೆಕ್ಕು’ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ಏಳರಂದು ಪ್ರಾರಂಭವಾಗಲಿದ್ದು, ತೀರ್ಥಹಳ್ಳಿಯ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…