ಮನರಂಜನೆ

ಮಹಿಳೆಯರಿಗೂ ಸಮಾನ ಆದ್ಯತೆ ನೀಡಿ: ನಟಿ ರಮ್ಯ

ಬೆಂಗಳೂರು: ಹೀರೋಗಳಂತೆಯೇ ಮಹಿಳೆಯರಿಗೂ ಸಂಭಾವನೆ ವಿಚಾರದಲ್ಲಿ ಸಮಾನ ಆದ್ಯತೆ ನೀಡಬೇಕು ಎಂದು ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ ಹೇಳಿದ್ದಾರೆ.

ನಗರದಲ್ಲಿ ನಡೆದ 16ನೇ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಹೀರೋಗಳ ಸಮವಾಗಿ ಹೀರೋಯಿನ್‌ಗಳು ಕೂಡ ಕೆಲಸ ಮಾಡುತ್ತಾರೆ. ಆದರೆ, ಇಬ್ಬರ ನಡುವಿನ ಸಂಭಾವನೆ ವಿಚಾರದಲ್ಲಿ ಬಹಳಷ್ಟು ವ್ಯತ್ಯಾಸವಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನನ್ನ ಜೊತೆ ಆಕ್ಟ್‌ ಮಾಡಿದ ಹೊಸಬರು ಈಗ ಸೂಪರ್‌ಸ್ಟಾರ್ಸ್‌ ಆಗಿದ್ದಾರೆ. ಆಗ ನನಗಿಂತ ಕಡಿಮೆ ಸಂಭಾವನೆ ಪಡೆಯುತ್ತಿದ್ದ ನಟರು, ಒಂದು ಸಿನಿಮಾದ ನಂತರ ನನಗಿಂತ 50 ರಷ್ಟು ಹೆಚ್ಚಿನ ಸಂಭಾವನೆ ಪಡೆಯುತಿದ್ದಾರೆ ಎಂದರು.

ಹೀರೊ ಜೊತೆ ಒಟ್ಟಿಗೆ ಕೆಲಸ ಮಾಡಿ ಹಿಟ್‌ ಕೊಟ್ಟಿರುತ್ತೇವೆ. ಅವರಿಗೆ ಕೋಟಿ ಕೋಟಿ ಸಂಭಾವನೆ ಇದ್ದರೆ, ನಮಗೆ ಕೋಟಿ ತಲುಪುವುದಕ್ಕೂ ಕಷ್ಟಪಡುತ್ತಿದ್ದೇವೆ. ಇದು ಒಂದು ಕ್ಷೇತ್ರದಲ್ಲಿ ಅಲ್ಲ ಎಲ್ಲಾ ಕ್ಷೇತ್ರದಲ್ಲೂ ಇದೆ ರೀತಿಯ ಸಮಸ್ಯೆಯಿದೆ. ಮಹಿಳಾ ಕಲಾವಿದರಿಗೂ ಆದ್ಯತೆ ನೀಡಿ ಎಂದು ಅಸಮಾಧಾನ ಹೊರಹಾಕಿದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

46 mins ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

1 hour ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

14 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

15 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

15 hours ago