ಮನರಂಜನೆ

ದೇವರು ಒಳ್ಳೆಯವರನ್ನು ಕೈಬಿಡಲ್ಲ; ದರ್ಶನ್‍ ಬಗ್ಗೆ ಮಾಲಾಶ್ರೀ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಬಳ್ಳಾರಿ ಸೆಂಟ್ರಲ್‍ ಜೂಲ್‍ ಸೇರಿರುವ ನಟ ದರ್ಶನ್‍ ಅವರ ಪರವಾಗಿ ಕನ್ನಡ ಚಿತ್ರರಂಗದ ಸಾಕಷ್ಟು ನಟ-ನಟಿಯರು ನಿಂತಿದ್ದಾರೆ. ಇದೀಗ ಹಿರಿಯ ನಟಿ ಮಾಲಾಶ್ರೀ ಸಹ ದರ್ಶನ್‍ ಪರ ಮಾತನಾಡಿದ್ದು, ದರ್ಶನ್‍ ಬಹಳ ಒಳ್ಳೆಯವರು ಮತ್ತು ದೇವರು ಒಳ್ಳೆಯವರನ್ನು ಯಾವತ್ತೂ ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ.

ಶುಕ್ರವಾರ ಮಧ್ಯಾಹ್ನ, ‘ಮೆಜೆಸ್ಟಿಕ್‍ 2’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಮಾತನಾಡಿರುವ ಅವರು, ‘ನನಗೆ ಗೊತ್ತಿರುವ ದರ್ಶನ್‍ ಬೇರೆ. ಅವರೊಬ್ಬ ಜಂಟಲ್‍ಮ್ಯಾನನ್‍. ಅವರಿಗೆ ಬಹಳ ಒಳ್ಳೆಯ ವ್ಯಕ್ತಿತ್ವ ಇದೆ. ನಾನು ಅವರನ್ನು ‘ಕಲಾಸಿಪಾಳ್ಯ’ ಚಿತ್ರದಿಂದ ಬಲ್ಲೆ. ಅದು ನಮ್ಮ ನಿರ್ಮಾಣದ ಚಿತ್ರ. ಅದರಲ್ಲಿ ದರ್ಶನ್ ನಟಿಸಿದ್ದರು. ಆಗ ಅವರು ಹೇಗಿದ್ದರೋ, ‘ಕಾಟೇರ’ ಚಿತ್ರದಲ್ಲೂ ಅದೇ ರೀತಿ ಇದ್ದರು. ಅವರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ’ ಎಂದರು.

‘ಕಾಟೇರ’ ಚಿತ್ರದ ಮೂಲಕ ತಮ್ಮ ಮಗಳು ಆರಾಧನಾಳನ್ನು ಪರಿಚಯಿಸಿದ ಕುರಿತು ಮಾತನಾಡಿದ ಮಾಲಾಶ್ರೀ, ‘ಆ ಚಿತ್ರದಲ್ಲಿ ಆರಾಧನಾಳನ್ನು ಅವರು ಪರಿಚಯಿಸಿದಾಗ ಥ್ಯಾಂಕ್ಸ್ ಹೇಳಿದ್ದೆ. ಅದಕ್ಕವರು, ಆರಾಧನಾ ಜೊತೆಗೆ ನಟಿಸುತ್ತಿರುವುದು ತಮ್ಮ ಅದೃಷ್ಟ ಎಂದು ಹೇಳಿದ್ದರು. ನಮ್ಮ ಜೊತೆಗೆ ಇರುವಾಗ ತುಂಬಾ ಚೆನ್ನಾಗಿ ನಡೆದುಕೊಂಡಿದ್ದಾರೆ, ತುಂಬಾ ಗೌರವ ತೋರಿದ್ದಾರೆ’ ಎಂದರು.

ತಮಗೆ ದೇವರ ಮೇಲೆ ಬಹಳ ನಂಬಿಕೆ ಎಂದು ಈ ಸಂದರ್ಭದಲ್ಲಿ ಹೇಳಿದ ಮಾಲಾಶ್ರೀ, ‘ದೇವರು ಯಾವತ್ತೂ ಒಳ್ಳೆಯವರನ್ನು ಕೈಬಿಡುವುದಿಲ್ಲ. ಈ ಪ್ರಕರಣದ ಬಗ್ಗೆ ನನಗೆ ನಿಜವಾಗಲೂ ಗೊತ್‍ತಿಲ್ಲ. ನನಗೆ ಗೊತ್‍ತಿರುವ ದರ್ಶನ್ ಬೇರೆ. ಅವರ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ದರ್ಶನ್‍ ಮೇಲೆ ಅದೆಷ್ಟು ಅಭಿಮಾನ ಇಟ್ಟಿದ್ದಾರೋ, ನನಗೆ ಮತ್ತು ಆರಾಧನಾಗೆ ಅಷ್ಟೇ ಅಭಿಮಾನವಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ’ ಎಂದರು.

ರಾಮು ನಿರ್ದೇಶನದ ‘ಮೆಜೆಸ್ಟಿಕ್‍ 2’ ಚಿತ್ರದಲ್ಲಿ ಮಾಲಾಶ್ರೀ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಭರತ್‍ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ನಾಯಕಿಯಾಗಿ ಸಂಹಿತಾ ವಿನ್ಯಾ ನಟಿಸಿದ್ದಾರೆ. ಹಿರಿಯ ನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿನು ಮನಸು ಸಂಗೀತ ಮತ್ತು ವೀನಸ್‍ ಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…

2 mins ago

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

1 hour ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

2 hours ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

3 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

3 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

3 hours ago