ಮನರಂಜನೆ

ದೇವರು ಒಳ್ಳೆಯವರನ್ನು ಕೈಬಿಡಲ್ಲ; ದರ್ಶನ್‍ ಬಗ್ಗೆ ಮಾಲಾಶ್ರೀ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಬಳ್ಳಾರಿ ಸೆಂಟ್ರಲ್‍ ಜೂಲ್‍ ಸೇರಿರುವ ನಟ ದರ್ಶನ್‍ ಅವರ ಪರವಾಗಿ ಕನ್ನಡ ಚಿತ್ರರಂಗದ ಸಾಕಷ್ಟು ನಟ-ನಟಿಯರು ನಿಂತಿದ್ದಾರೆ. ಇದೀಗ ಹಿರಿಯ ನಟಿ ಮಾಲಾಶ್ರೀ ಸಹ ದರ್ಶನ್‍ ಪರ ಮಾತನಾಡಿದ್ದು, ದರ್ಶನ್‍ ಬಹಳ ಒಳ್ಳೆಯವರು ಮತ್ತು ದೇವರು ಒಳ್ಳೆಯವರನ್ನು ಯಾವತ್ತೂ ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ.

ಶುಕ್ರವಾರ ಮಧ್ಯಾಹ್ನ, ‘ಮೆಜೆಸ್ಟಿಕ್‍ 2’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಮಾತನಾಡಿರುವ ಅವರು, ‘ನನಗೆ ಗೊತ್ತಿರುವ ದರ್ಶನ್‍ ಬೇರೆ. ಅವರೊಬ್ಬ ಜಂಟಲ್‍ಮ್ಯಾನನ್‍. ಅವರಿಗೆ ಬಹಳ ಒಳ್ಳೆಯ ವ್ಯಕ್ತಿತ್ವ ಇದೆ. ನಾನು ಅವರನ್ನು ‘ಕಲಾಸಿಪಾಳ್ಯ’ ಚಿತ್ರದಿಂದ ಬಲ್ಲೆ. ಅದು ನಮ್ಮ ನಿರ್ಮಾಣದ ಚಿತ್ರ. ಅದರಲ್ಲಿ ದರ್ಶನ್ ನಟಿಸಿದ್ದರು. ಆಗ ಅವರು ಹೇಗಿದ್ದರೋ, ‘ಕಾಟೇರ’ ಚಿತ್ರದಲ್ಲೂ ಅದೇ ರೀತಿ ಇದ್ದರು. ಅವರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ’ ಎಂದರು.

‘ಕಾಟೇರ’ ಚಿತ್ರದ ಮೂಲಕ ತಮ್ಮ ಮಗಳು ಆರಾಧನಾಳನ್ನು ಪರಿಚಯಿಸಿದ ಕುರಿತು ಮಾತನಾಡಿದ ಮಾಲಾಶ್ರೀ, ‘ಆ ಚಿತ್ರದಲ್ಲಿ ಆರಾಧನಾಳನ್ನು ಅವರು ಪರಿಚಯಿಸಿದಾಗ ಥ್ಯಾಂಕ್ಸ್ ಹೇಳಿದ್ದೆ. ಅದಕ್ಕವರು, ಆರಾಧನಾ ಜೊತೆಗೆ ನಟಿಸುತ್ತಿರುವುದು ತಮ್ಮ ಅದೃಷ್ಟ ಎಂದು ಹೇಳಿದ್ದರು. ನಮ್ಮ ಜೊತೆಗೆ ಇರುವಾಗ ತುಂಬಾ ಚೆನ್ನಾಗಿ ನಡೆದುಕೊಂಡಿದ್ದಾರೆ, ತುಂಬಾ ಗೌರವ ತೋರಿದ್ದಾರೆ’ ಎಂದರು.

ತಮಗೆ ದೇವರ ಮೇಲೆ ಬಹಳ ನಂಬಿಕೆ ಎಂದು ಈ ಸಂದರ್ಭದಲ್ಲಿ ಹೇಳಿದ ಮಾಲಾಶ್ರೀ, ‘ದೇವರು ಯಾವತ್ತೂ ಒಳ್ಳೆಯವರನ್ನು ಕೈಬಿಡುವುದಿಲ್ಲ. ಈ ಪ್ರಕರಣದ ಬಗ್ಗೆ ನನಗೆ ನಿಜವಾಗಲೂ ಗೊತ್‍ತಿಲ್ಲ. ನನಗೆ ಗೊತ್‍ತಿರುವ ದರ್ಶನ್ ಬೇರೆ. ಅವರ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ದರ್ಶನ್‍ ಮೇಲೆ ಅದೆಷ್ಟು ಅಭಿಮಾನ ಇಟ್ಟಿದ್ದಾರೋ, ನನಗೆ ಮತ್ತು ಆರಾಧನಾಗೆ ಅಷ್ಟೇ ಅಭಿಮಾನವಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ’ ಎಂದರು.

ರಾಮು ನಿರ್ದೇಶನದ ‘ಮೆಜೆಸ್ಟಿಕ್‍ 2’ ಚಿತ್ರದಲ್ಲಿ ಮಾಲಾಶ್ರೀ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಭರತ್‍ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ನಾಯಕಿಯಾಗಿ ಸಂಹಿತಾ ವಿನ್ಯಾ ನಟಿಸಿದ್ದಾರೆ. ಹಿರಿಯ ನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿನು ಮನಸು ಸಂಗೀತ ಮತ್ತು ವೀನಸ್‍ ಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

30 mins ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

32 mins ago

ಓದುಗರ ಪತ್ರ: ಯುದ್ಧದ ಉನ್ಮಾದದಿಂದ ಹೊರಬರಲಿ

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…

34 mins ago

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

3 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

3 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

4 hours ago