ಮನರಂಜನೆ

ಈ ಬಾರಿಯೂ ಅಭಿಮಾನಿಗಳ ಜೊತೆಗೆ ಗಣೇಶ್‍ ಹುಟ್ಟುಹಬ್ಬವಿಲ್ಲ

‘ಗೋಲ್ಡನ್‍ ಸ್ಟಾರ್‍’ ಗಣೇಶ್ ಇಂದು (ಜುಲೈ 02) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯಾದರೂ ಅವರು ತಮ್ಮ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಹುಟ್ಟುಹಬ್ಬದ ದಿನದಂದು ತಾವು ತಮ್ಮ ಮನೆಯಲ್ಲಿ ಇರದಿರುವುದರಿಂದ ಮನಗೆ ಬರದೆ, ಇದ್ದಲ್ಲಿ ಹರಸಿ, ಹಾರೈಸಿ ಎಂದು ಕೇಳಿಕೊಂಡಿದ್ದಾರೆ.

ಗಣೇಶ್‍ ಕಳೆದ ಕೆಲವು ವರ್ಷಗಳಿಂದ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿಲ್ಲ. ಹುಟ್ಟುಹಬ್ಬದ ದಿನದಂದು ಗಣೇಶ್‍ ಅವರನ್ನು ಭೇಟಿ ಮಾಡಬೇಕೆಂದು ಅಭಿಮಾನಿಗಳು ಸಹ ಹಂಬಲಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಗಣೇಶ್‍ ಅವರನ್ನು ಹುಟ್ಟುಹಬ್ಬದ ದಿನ ಭೇಟಿ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಈ ವರ್ಷವಾದರೂ ಅದು ಸಾಧ್ಯವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದರು.

ಆದರೆ, ಅದು ಈ ವರ್ಷವೂ ಸಾಧ್ಯವಿಲ್ಲ. ಈ ಕುರಿತು ಸ್ವತಃ ಗಣೇಶ್‍ ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಷಯವನ್ನು ಹೇಳಿಕೊಂಡಿದ್ದಾರೆ. ‘ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ. ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ . ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ,ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೇ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ್’ ಎಂದು ಗಣೇಶ್‍ ಬರೆದುಕೊಂಡಿದ್ದಾರೆ.

ಇನ್ನು ಗಣೇಶ್‍ ಅಭಿನಯದ 41ನೇ ಚಿತ್ರವಾದ ‘ಕೃಷ್ಣಂ ಪ್ರಣಯ ಸಖಿ’ ಇದೇ ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಗಣೇಶ್‍ಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಪ್ರಶಾಂತ್ ರುದ್ರಪ್ಪ ನಿರ್ಮಿಸಿದರೆ, ಶ್ರೀನಿವಾಸರಾಜು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಗಣೇಶ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡದಿಂದ ಹಾಡು ಅಥವಾ ಟೀಸರ್ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಭೂಮಿಕಾ

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago