Golden Star Ganesh new film Django Krishnamurthy film Updates
ಈಗಾಗಲೇ ಗಣೇಶ್ ಅಭಿನಯದ ಹೊಸ ಚಿತ್ರದ ಮುಹೂರ್ತ ಕೆಲವು ತಿಂಗಳುಗಳ ಹಿಂದೆಯೇ ಆಗಿದ್ದು, ಚಿತ್ರದ ಒಂದು ಹಂತದ ಚಿತ್ರೀಕರಣ ಸಹ ಆಗಿದೆ. ಆದರೆ, ಚಿತ್ರತಂಡ ಮಾತ್ರ ಇದುವರೆಗೂ ಚಿತ್ರದ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಇಂದು ಗಣೇಶ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಹೆಸರನ್ನು ಅನಾವರಣ ಮಾಡಲಾಗಿದ್ದು, ಚಿತ್ರಕ್ಕೆ ‘ಡಿಜಾಂಗೋ ಕೃಷ್ಣಮೂರ್ತಿ’ ಎಂಬ ಹೆಸರನ್ನು ಇಡಲಾಗಿದೆ.
ಎಸ್.ಎನ್.ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್.ಸಿ. ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಅರಸು ಅಂತಾರೆ ನಿರ್ದೇಶಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ ಅನಾವರಣವು ಗಣೇಶ್ ಹುಟ್ಟುಹಬ್ಬದ ಪ್ರಯುಕ್ತ ಆಗಿದೆ. ಚಿತ್ರತಂಡವು ಚಿತ್ರದ ಹೆಸರು ಅನಾವರಣ ಮಾಡುವುದರ ಜೊತೆಗೆ, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗಣೇಶ್ ಅವರಿಗೆ ಶುಭ ಕೋರಿದೆ.
‘ಡಿಜಾಂಗೋ ಕೃಷ್ಣಮೂರ್ತಿ’ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದ್ದು, ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ.
ಈ ಚಿತ್ರದಲ್ಲಿ ಗಣೇಶ್ಗೆ ನಾಯಕಿಯಾಗಿ ‘ಹನುಮಾನ್’ ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಅರುಣ ಬಾಲರಾಜ್ ಮುಂತಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ, ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ. ರಾವ್ ಸಂಕಲನವಿದೆ.
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…