ಈ ಹಿಂದೆ ʼಲವ್ ಇನ್ ಮಂಡ್ಯʼ ಚಿತ್ರ ನಿರ್ದೇಶಿಸಿದ್ದ ಅರಸು ಅಂತಾರೆ ಈಗ ಹೊಸ ಸಿನಿಮಾ ನಿರ್ದೇಶನಕ್ಕೆ ಕೈಹಾಕಿದ್ದು, ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸುತ್ತಿದ್ದಾರೆ.
ಈ ಚಿತ್ರದಲ್ಲಿ ಗಣೇಶ್ಗೆ ಜೋಡಿಯಾಗಿ ತೆಲುಗಿನ ʼಹನುಮಾನ್ʼ ಚಿತ್ರದಲ್ಲಿ ನಟಿಸಿದ್ದ ಅಮೃತಾ ಅಯ್ಯರ್ ನಟಿಸುತ್ತಿದ್ದು, ಈ ಚಿತ್ರದೊಂದಿಗೆ ಸ್ಯಾಂಡಲ್ವುಡ್ ಪ್ರವೇಶಿಸಿದ್ದಾರೆ.
ಬಹಳ ಹಿಂದೆಯೇ ಅರಸು ಅಂತಾರೆ ಈ ಕಥೆ ಹೇಳಿದ್ದರು. ಮುಂದೂಡತ್ತಲೇ ಬಂದಿದೆ. ಈಗ ಈ ಸಿನಿಮಾಗೆ ಕಾಲ ಕೂಡಿ ಬಂದಿದೆ. ಹಾಸ್ಯಮಯ ಕಥೆಯೊಂದಿಗೆ ಕುಟುಂಬವೇ ಕುಳಿತು ನೋಡಬಹುದಾದ ಚಿತ್ರವಾಗಲಿದೆ ಎಂದು ಗಣೇಶ್ ಹೇಳಿದರು.
ಒಂದು ಸಿನಿಮಾ ಹಿಟ್ ಕೊಟ್ಟ ಮೇಲೆ ಮತ್ತೊಂದು ಚಿತ್ರಕ್ಕೆ ಇಷ್ಟು ಸಮಯ ತೆಗೆದುಕೊಂಡೆ. ಚಿತ್ರದ ಶೀರ್ಷಿಕೆ ಮುಂತಾದ ವಿವರಗಳನ್ನು ಮುಂದಿನ ಹಂತದಲ್ಲಿ ನೀಡುತ್ತೇವೆ ಎಂದು ನಿರ್ದೇಶಕ ಅರಸು ಅಂತಾರೆ ತಿಳಿಸಿದರು.
ಈ ಚಿತ್ರಕ್ಕೆ ರವಿಕುಮಾರ್ ಭದ್ರವಾತಿ ಬಂಡವಾಳ ಹೂಡಿದ್ದು, ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಚ್ ಸುಧಿ ಮುಂತಾದವರು ಚಿತ್ರದಲ್ಲಿದ್ದಾರೆ. ಸುಜ್ಞಾನ್ ಛಾಯಾಚಿತ್ರಗ್ರಹಣ, ಅಕ್ಷಯ್ ಸಂಕಲನ ಚಿತ್ರಕ್ಕಿದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…