ಈ ಹಿಂದೆ ʼಲವ್ ಇನ್ ಮಂಡ್ಯʼ ಚಿತ್ರ ನಿರ್ದೇಶಿಸಿದ್ದ ಅರಸು ಅಂತಾರೆ ಈಗ ಹೊಸ ಸಿನಿಮಾ ನಿರ್ದೇಶನಕ್ಕೆ ಕೈಹಾಕಿದ್ದು, ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸುತ್ತಿದ್ದಾರೆ.
ಈ ಚಿತ್ರದಲ್ಲಿ ಗಣೇಶ್ಗೆ ಜೋಡಿಯಾಗಿ ತೆಲುಗಿನ ʼಹನುಮಾನ್ʼ ಚಿತ್ರದಲ್ಲಿ ನಟಿಸಿದ್ದ ಅಮೃತಾ ಅಯ್ಯರ್ ನಟಿಸುತ್ತಿದ್ದು, ಈ ಚಿತ್ರದೊಂದಿಗೆ ಸ್ಯಾಂಡಲ್ವುಡ್ ಪ್ರವೇಶಿಸಿದ್ದಾರೆ.
ಬಹಳ ಹಿಂದೆಯೇ ಅರಸು ಅಂತಾರೆ ಈ ಕಥೆ ಹೇಳಿದ್ದರು. ಮುಂದೂಡತ್ತಲೇ ಬಂದಿದೆ. ಈಗ ಈ ಸಿನಿಮಾಗೆ ಕಾಲ ಕೂಡಿ ಬಂದಿದೆ. ಹಾಸ್ಯಮಯ ಕಥೆಯೊಂದಿಗೆ ಕುಟುಂಬವೇ ಕುಳಿತು ನೋಡಬಹುದಾದ ಚಿತ್ರವಾಗಲಿದೆ ಎಂದು ಗಣೇಶ್ ಹೇಳಿದರು.
ಒಂದು ಸಿನಿಮಾ ಹಿಟ್ ಕೊಟ್ಟ ಮೇಲೆ ಮತ್ತೊಂದು ಚಿತ್ರಕ್ಕೆ ಇಷ್ಟು ಸಮಯ ತೆಗೆದುಕೊಂಡೆ. ಚಿತ್ರದ ಶೀರ್ಷಿಕೆ ಮುಂತಾದ ವಿವರಗಳನ್ನು ಮುಂದಿನ ಹಂತದಲ್ಲಿ ನೀಡುತ್ತೇವೆ ಎಂದು ನಿರ್ದೇಶಕ ಅರಸು ಅಂತಾರೆ ತಿಳಿಸಿದರು.
ಈ ಚಿತ್ರಕ್ಕೆ ರವಿಕುಮಾರ್ ಭದ್ರವಾತಿ ಬಂಡವಾಳ ಹೂಡಿದ್ದು, ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಚ್ ಸುಧಿ ಮುಂತಾದವರು ಚಿತ್ರದಲ್ಲಿದ್ದಾರೆ. ಸುಜ್ಞಾನ್ ಛಾಯಾಚಿತ್ರಗ್ರಹಣ, ಅಕ್ಷಯ್ ಸಂಕಲನ ಚಿತ್ರಕ್ಕಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…