ಈ ಹಿಂದೆ ʼಲವ್ ಇನ್ ಮಂಡ್ಯʼ ಚಿತ್ರ ನಿರ್ದೇಶಿಸಿದ್ದ ಅರಸು ಅಂತಾರೆ ಈಗ ಹೊಸ ಸಿನಿಮಾ ನಿರ್ದೇಶನಕ್ಕೆ ಕೈಹಾಕಿದ್ದು, ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸುತ್ತಿದ್ದಾರೆ.
ಈ ಚಿತ್ರದಲ್ಲಿ ಗಣೇಶ್ಗೆ ಜೋಡಿಯಾಗಿ ತೆಲುಗಿನ ʼಹನುಮಾನ್ʼ ಚಿತ್ರದಲ್ಲಿ ನಟಿಸಿದ್ದ ಅಮೃತಾ ಅಯ್ಯರ್ ನಟಿಸುತ್ತಿದ್ದು, ಈ ಚಿತ್ರದೊಂದಿಗೆ ಸ್ಯಾಂಡಲ್ವುಡ್ ಪ್ರವೇಶಿಸಿದ್ದಾರೆ.
ಬಹಳ ಹಿಂದೆಯೇ ಅರಸು ಅಂತಾರೆ ಈ ಕಥೆ ಹೇಳಿದ್ದರು. ಮುಂದೂಡತ್ತಲೇ ಬಂದಿದೆ. ಈಗ ಈ ಸಿನಿಮಾಗೆ ಕಾಲ ಕೂಡಿ ಬಂದಿದೆ. ಹಾಸ್ಯಮಯ ಕಥೆಯೊಂದಿಗೆ ಕುಟುಂಬವೇ ಕುಳಿತು ನೋಡಬಹುದಾದ ಚಿತ್ರವಾಗಲಿದೆ ಎಂದು ಗಣೇಶ್ ಹೇಳಿದರು.
ಒಂದು ಸಿನಿಮಾ ಹಿಟ್ ಕೊಟ್ಟ ಮೇಲೆ ಮತ್ತೊಂದು ಚಿತ್ರಕ್ಕೆ ಇಷ್ಟು ಸಮಯ ತೆಗೆದುಕೊಂಡೆ. ಚಿತ್ರದ ಶೀರ್ಷಿಕೆ ಮುಂತಾದ ವಿವರಗಳನ್ನು ಮುಂದಿನ ಹಂತದಲ್ಲಿ ನೀಡುತ್ತೇವೆ ಎಂದು ನಿರ್ದೇಶಕ ಅರಸು ಅಂತಾರೆ ತಿಳಿಸಿದರು.
ಈ ಚಿತ್ರಕ್ಕೆ ರವಿಕುಮಾರ್ ಭದ್ರವಾತಿ ಬಂಡವಾಳ ಹೂಡಿದ್ದು, ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಚ್ ಸುಧಿ ಮುಂತಾದವರು ಚಿತ್ರದಲ್ಲಿದ್ದಾರೆ. ಸುಜ್ಞಾನ್ ಛಾಯಾಚಿತ್ರಗ್ರಹಣ, ಅಕ್ಷಯ್ ಸಂಕಲನ ಚಿತ್ರಕ್ಕಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…