ಡಾ.ಬರಗೂರು ರಾಮಚಂದ್ರಪ್ಪ ನಿರ್ದೇಶನದ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೇ ಕೆಲವು ವರ್ಷಗಳೇ ಆಗಿವೆ. ಈಗ ಅವರ ‘ಸ್ವಪ್ನ ಮಂಟಪ’ ಚಿತ್ರವು ಇದೇ ಜುಲೈ. 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.
ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ ‘ಸ್ವಪ್ನ ಮಂಟಪ’ ಚಿತರದಲ್ಲಿ ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಮುಂತಾದವರು ನಟಿಸಿದ್ದು, ಈ ಚಿತ್ರವು ಬರಗೂರರ ಜನಪ್ರಿಯ ಕಾದಂಬರಿಯನ್ನು ಆಧರಿಸಿದೆ. ಆ ಕಥೆಗೆ ಬರಗೂರರೇ ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ರಚಿಸಿ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರದ ಕುರಿತು ಮಾತನಾಡಿರುವ ಅವರು, ‘ನಾನು 25 ವರ್ಷಗಳ ಹಿಂದೆ ಬರೆದಿದ್ದ ‘ಸ್ವಪ್ನ ಮಂಟಪ’ ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪ’ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವುದೇ ಚಿತ್ರದ ಪ್ರಮುಖ ಕಥಾಹಂದರ. ಚಿತ್ರದ ನಾಯಕ – ನಾಯಕಿಯಾಗಿ ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಅಭಿನಯಿಸಿದ್ದು, ಇಬ್ಬರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡಿದೆ’ ಎಂದರು.
ಇಂತಹ ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಪ್ರತಿ ಜಿಲ್ಲೆಯಲ್ಲೂ 150 ಆಸನಗಳ ಚಿತ್ರಮಂದಿರಗಳನ್ನು ತೆರೆಯಬೇಕು ಎನ್ನುವ ಡಾ. ಬರಗೂರು ರಾಮಚಂದ್ರಪ್ಪ, ‘150 ಆಸನಗಳ ಜೊತೆಗೆ ಟಿಕೆಟ್ ದರ 100 ರೂಪಾಯಿಗಳನ್ನು ಮೀರಬಾರದು. ಆಗ ಹೆಚ್ಚಿನ ಜನರು ಸಿನಿಮಾ ನೋಡಲು ಮುಂದೆ ಬರುತ್ತಾರೆ. ಈ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ನಾನು ಕೆಲವು ದಿನಗಳ ಹಿಂದೆ ಕೊಟ್ಟಿದ್ದೇನೆ. ಸರ್ಕಾರ ಆದಷ್ಟು ಬೇಗ ಈ ಕಾರ್ಯ ಮಾಡಿದರೆ ಚಿತ್ರರಂಗಕ್ಕೆ ಅನುಕೂಲವಾಗುತ್ತದೆ’ ಎಂದರು.
ಪ್ರತಿಯೊಬ್ಬ ನಟನಿಗೂ ಇಂತಹ ಒಬ್ಬ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಇರುತ್ತದೆ ಎಂದ ವಿಜಯ್ ರಾಘವೇಂದ್ರ, ‘ನನಗೂ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ಈ ಚಿತ್ರದಲ್ಲಿ ಒಂದು ಹಾಡು ಕೂಡ ಹಾಡಿದ್ದೇನೆ’ ಎಂದರು.
‘ಸ್ವಪ್ನ ಮಂಟಪ’ ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ಮತ್ತು ನಾಗರಾಜ್ ಆದವಾನಿ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ರಜನಿ, ರಾಜಪ್ಪ ದಳವಾಯಿ, ಮೈಸೂರು ಮಂಜುಳ, ಶಿವಲಿಂಗ ಪ್ರಸಾದ್, ಸುಂದರ್ ರಾಜ್ ಮುಂತಾದವರು ನಟಿಸಿದ್ದಾರೆ.
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…
ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…
ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…
ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…