ಮನರಂಜನೆ

ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಮುಂದಾಗಬೇಕು: ಬರಗೂರು ರಾಮಚಂದ್ರಪ್ಪ

ಡಾ.ಬರಗೂರು ರಾಮಚಂದ್ರಪ್ಪ ನಿರ್ದೇಶನದ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೇ ಕೆಲವು ವರ್ಷಗಳೇ ಆಗಿವೆ. ಈಗ ಅವರ ‘ಸ್ವಪ್ನ ಮಂಟಪ’ ಚಿತ್ರವು ಇದೇ ಜುಲೈ. 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ ‘ಸ್ವಪ್ನ ಮಂಟಪ’ ಚಿತರದಲ್ಲಿ ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಮುಂತಾದವರು ನಟಿಸಿದ್ದು, ಈ ಚಿತ್ರವು ಬರಗೂರರ ಜನಪ್ರಿಯ ಕಾದಂಬರಿಯನ್ನು ಆಧರಿಸಿದೆ. ಆ ಕಥೆಗೆ ಬರಗೂರರೇ ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ರಚಿಸಿ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿರುವ ಅವರು, ‘ನಾನು 25 ವರ್ಷಗಳ ಹಿಂದೆ ಬರೆದಿದ್ದ ‘ಸ್ವಪ್ನ ಮಂಟಪ’ ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪ’ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವುದೇ ಚಿತ್ರದ ಪ್ರಮುಖ ಕಥಾಹಂದರ. ಚಿತ್ರದ ನಾಯಕ – ನಾಯಕಿಯಾಗಿ ವಿಜಯ್ ರಾಘವೇಂದ್ರ, ರಂಜನಿ‌ ರಾಘವನ್ ಅಭಿನಯಿಸಿದ್ದು, ಇಬ್ಬರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡಿದೆ’ ಎಂದರು.

ಇಂತಹ ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಪ್ರತಿ ಜಿಲ್ಲೆಯಲ್ಲೂ 150 ಆಸನಗಳ ಚಿತ್ರಮಂದಿರಗಳನ್ನು ತೆರೆಯಬೇಕು ಎನ್ನುವ ಡಾ. ಬರಗೂರು ರಾಮಚಂದ್ರಪ್ಪ, ‘150 ಆಸನಗಳ ಜೊತೆಗೆ ಟಿಕೆಟ್ ದರ 100 ರೂಪಾಯಿಗಳನ್ನು ಮೀರಬಾರದು. ಆಗ ಹೆಚ್ಚಿನ ಜನರು ಸಿನಿಮಾ ನೋಡಲು ಮುಂದೆ ಬರುತ್ತಾರೆ. ಈ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ನಾನು ಕೆಲವು ದಿನಗಳ ಹಿಂದೆ ಕೊಟ್ಟಿದ್ದೇನೆ. ಸರ್ಕಾರ ಆದಷ್ಟು ಬೇಗ ಈ ಕಾರ್ಯ ಮಾಡಿದರೆ ಚಿತ್ರರಂಗಕ್ಕೆ ಅನುಕೂಲವಾಗುತ್ತದೆ’ ಎಂದರು.

ಪ್ರತಿಯೊಬ್ಬ ನಟನಿಗೂ ಇಂತಹ ಒಬ್ಬ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಇರುತ್ತದೆ ಎಂದ ವಿಜಯ್‍ ರಾಘವೇಂದ್ರ, ‘ನನಗೂ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ಈ ಚಿತ್ರದಲ್ಲಿ ಒಂದು ಹಾಡು ಕೂಡ ಹಾಡಿದ್ದೇನೆ’ ಎಂದರು.

‘ಸ್ವಪ್ನ ಮಂಟಪ’ ಚಿತ್ರಕ್ಕೆ ಶಮಿತಾ ಮಲ್ನಾಡ್‍ ಸಂಗೀತ ಮತ್ತು ನಾಗರಾಜ್‍ ಆದವಾನಿ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ರಜನಿ, ರಾಜಪ್ಪ ದಳವಾಯಿ, ಮೈಸೂರು ಮಂಜುಳ, ಶಿವಲಿಂಗ ಪ್ರಸಾದ್, ಸುಂದರ್‍ ರಾಜ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

13 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

13 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

14 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

14 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

14 hours ago