ಮನರಂಜನೆ

ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಮುಂದಾಗಬೇಕು: ಬರಗೂರು ರಾಮಚಂದ್ರಪ್ಪ

ಡಾ.ಬರಗೂರು ರಾಮಚಂದ್ರಪ್ಪ ನಿರ್ದೇಶನದ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೇ ಕೆಲವು ವರ್ಷಗಳೇ ಆಗಿವೆ. ಈಗ ಅವರ ‘ಸ್ವಪ್ನ ಮಂಟಪ’ ಚಿತ್ರವು ಇದೇ ಜುಲೈ. 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ ‘ಸ್ವಪ್ನ ಮಂಟಪ’ ಚಿತರದಲ್ಲಿ ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಮುಂತಾದವರು ನಟಿಸಿದ್ದು, ಈ ಚಿತ್ರವು ಬರಗೂರರ ಜನಪ್ರಿಯ ಕಾದಂಬರಿಯನ್ನು ಆಧರಿಸಿದೆ. ಆ ಕಥೆಗೆ ಬರಗೂರರೇ ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ರಚಿಸಿ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿರುವ ಅವರು, ‘ನಾನು 25 ವರ್ಷಗಳ ಹಿಂದೆ ಬರೆದಿದ್ದ ‘ಸ್ವಪ್ನ ಮಂಟಪ’ ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪ’ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವುದೇ ಚಿತ್ರದ ಪ್ರಮುಖ ಕಥಾಹಂದರ. ಚಿತ್ರದ ನಾಯಕ – ನಾಯಕಿಯಾಗಿ ವಿಜಯ್ ರಾಘವೇಂದ್ರ, ರಂಜನಿ‌ ರಾಘವನ್ ಅಭಿನಯಿಸಿದ್ದು, ಇಬ್ಬರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡಿದೆ’ ಎಂದರು.

ಇಂತಹ ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಪ್ರತಿ ಜಿಲ್ಲೆಯಲ್ಲೂ 150 ಆಸನಗಳ ಚಿತ್ರಮಂದಿರಗಳನ್ನು ತೆರೆಯಬೇಕು ಎನ್ನುವ ಡಾ. ಬರಗೂರು ರಾಮಚಂದ್ರಪ್ಪ, ‘150 ಆಸನಗಳ ಜೊತೆಗೆ ಟಿಕೆಟ್ ದರ 100 ರೂಪಾಯಿಗಳನ್ನು ಮೀರಬಾರದು. ಆಗ ಹೆಚ್ಚಿನ ಜನರು ಸಿನಿಮಾ ನೋಡಲು ಮುಂದೆ ಬರುತ್ತಾರೆ. ಈ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ನಾನು ಕೆಲವು ದಿನಗಳ ಹಿಂದೆ ಕೊಟ್ಟಿದ್ದೇನೆ. ಸರ್ಕಾರ ಆದಷ್ಟು ಬೇಗ ಈ ಕಾರ್ಯ ಮಾಡಿದರೆ ಚಿತ್ರರಂಗಕ್ಕೆ ಅನುಕೂಲವಾಗುತ್ತದೆ’ ಎಂದರು.

ಪ್ರತಿಯೊಬ್ಬ ನಟನಿಗೂ ಇಂತಹ ಒಬ್ಬ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಇರುತ್ತದೆ ಎಂದ ವಿಜಯ್‍ ರಾಘವೇಂದ್ರ, ‘ನನಗೂ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ಈ ಚಿತ್ರದಲ್ಲಿ ಒಂದು ಹಾಡು ಕೂಡ ಹಾಡಿದ್ದೇನೆ’ ಎಂದರು.

‘ಸ್ವಪ್ನ ಮಂಟಪ’ ಚಿತ್ರಕ್ಕೆ ಶಮಿತಾ ಮಲ್ನಾಡ್‍ ಸಂಗೀತ ಮತ್ತು ನಾಗರಾಜ್‍ ಆದವಾನಿ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ರಜನಿ, ರಾಜಪ್ಪ ದಳವಾಯಿ, ಮೈಸೂರು ಮಂಜುಳ, ಶಿವಲಿಂಗ ಪ್ರಸಾದ್, ಸುಂದರ್‍ ರಾಜ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago