ಮನರಂಜನೆ

ಸಂದೇಶ್‍ ನಾಗರಾಜ್‍ 80; ಮೈಸೂರಿನಲ್ಲಿ ಆ.31ರಂದು ಬೃಹತ್‍ ಕಾರ್ಯಕ್ರಮ

ಕನ್ನಡ ಚಿತ್ರರಂಗಕ್ಕೆ ‘ಮಣ್ಣಿನ ದೋಣಿ’, ‘ಮುಸುಕು’ ‘ಮೊಮ್ಮಗ’, ‘ಮೇಘ ಬಂತು ಮೇಘ’, ‘ಸಿಂಗಾರೆವ್ವ’, ‘ಚಂದ್ರೋದಯ’, ‘ಗೌಡ್ರು’, ‘ಪ್ರಿನ್ಸ್’, ‘ಐರಾವತ’, ‘ಘೋಸ್ಟ್’ ಮುಂತಾದ ಚಿತ್ರಗಳನ್ನು ಹಲವು ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ, ಮಾಜಿ ಎಂ.ಎಲ್.ಸಿ ಸಂದೇಶ್ ನಾಗರಾಜ್ ಈಗ 80ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಆಗಸ್ಟ್ 16, ಸಂದೇಶ ನಾಗರಾಜ್ ಅವರು 79 ಪೂರೈಸುತ್ತಿದ್ದು, 80ನೇ ವಸಂತಕ್ಕೆ ಕಾಲಿಡಲಿದ್ದಾರೆ. ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವರ ಕುಟುಂಬ ಮುಂದಾಗಿದೆ. ಆಗಸ್ಟ್ 31ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ದೊಡ್ಡಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಟರಾದ ಶಿವರಾಜಕುಮಾರ್, ಸುದೀಪ್ ಸೇರಿದಂತೆ ಚಿತ್ರರಂಗದ ಹಲವಾರು ಕಲಾವಿದರು, ತಂತ್ರಜ್ಞರು ಹಾಗೂ ರಾಜಕೀಯ ಮುಖಂಡರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಆಗಸ್ಟ್.31ರಂದು ಮುಂಜಾನೆ 11 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಅವರಿಂದ ಮನರಂಜನಾ ಕಾರ್ಯಕ್ರಮ ಇರಲಿದೆ. ಇದೇ ಸಂದರ್ಭದಲ್ಲಿ ಸಂದೇಶ್‍ ನಾಗರಾಜ್‍ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗುತ್ತದೆ. ಅಂದು ಸುಮಾರು 50,000 ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ರಮದ ಕುರಿತು ಮಾತನಾಡುವ ನಾಗರಾಜ್‍ ಅವರ ಮಗ ಸಂದೇಶ್‍, ‘ಸಂದೇಶ ಕಂಬೈನ್ಸ್ ಹಾಗೂ ಸಂದೇಶ್ ಪ್ರೊಡಕ್ಷನ್ಸ್ ಮೂಲಕ ನಮ್ಮ ತಂದೆ ಹಲವಾರು ಯಶಸ್ವಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈಗ ನಾನು ಒಂದಿಷ್ಟು ಸಿನಿಮಾ ನಿರ್ಮಿಸುತ್ತಿದ್ದು, ಕಳೆದ 30 ವರ್ಷಗಳಲ್ಲಿ 34 ಸಿನಿಮಾ ನಿರ್ಮಿಸಲಾಗಿದೆ. ‘ಮಣ್ಣಿನ ದೋಣಿ’ ಚಿತ್ರದಿಂದ ಶುರುವಾದ ನಮ್ಮ ಸಿನಿಮಾ ಜರ್ನಿ ಈಗಲೂ ಮುಂದುವರೆದಿದೆ. ಚಿತ್ರರಂಗವಲ್ಲದೆ, ರಾಜಕೀಯ, ಉದ್ಯಮದಲ್ಲೂ ಯಶಸ್ಸಿನ ಮೆಟ್ಟಿಲು ಏರಿದ್ದಾರೆ’ ಎಂದು ಹೇಳಿದರು.

ಸಂದೇಶ್ ನಾಗರಾಜ್ ಅವರ ಮಗಳು ಬೃಂದಾ ಮಾತನಾಡಿ, ‘ಆಗಸ್ಟ್ 16 ಅವರ ಹುಟ್ಟುಹಬ್ಬ. ಅಂದು ನಾವೆಲ್ಲಾ ಫ್ಯಾಮಿಲಿ ಸೇರಿ ಆಚರಣೆ ಮಾಡುತ್ತೇವೆ. ಅಂದು ಪೂಜೆ, ಹೋಮ ಇರುವುದರಿಂದ ಆಗಸ್ಟ್ 31ರಂದು ಸಾರ್ವಜನಿಕವಾಗಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ’ ಎಂದರು.

ಆಂದೋಲನ ಡೆಸ್ಕ್

Recent Posts

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

6 mins ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

27 mins ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

58 mins ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

1 hour ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

2 hours ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

2 hours ago