ಮನರಂಜನೆ

ಸಂದೇಶ್‍ ನಾಗರಾಜ್‍ 80; ಮೈಸೂರಿನಲ್ಲಿ ಆ.31ರಂದು ಬೃಹತ್‍ ಕಾರ್ಯಕ್ರಮ

ಕನ್ನಡ ಚಿತ್ರರಂಗಕ್ಕೆ ‘ಮಣ್ಣಿನ ದೋಣಿ’, ‘ಮುಸುಕು’ ‘ಮೊಮ್ಮಗ’, ‘ಮೇಘ ಬಂತು ಮೇಘ’, ‘ಸಿಂಗಾರೆವ್ವ’, ‘ಚಂದ್ರೋದಯ’, ‘ಗೌಡ್ರು’, ‘ಪ್ರಿನ್ಸ್’, ‘ಐರಾವತ’, ‘ಘೋಸ್ಟ್’ ಮುಂತಾದ ಚಿತ್ರಗಳನ್ನು ಹಲವು ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ, ಮಾಜಿ ಎಂ.ಎಲ್.ಸಿ ಸಂದೇಶ್ ನಾಗರಾಜ್ ಈಗ 80ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಆಗಸ್ಟ್ 16, ಸಂದೇಶ ನಾಗರಾಜ್ ಅವರು 79 ಪೂರೈಸುತ್ತಿದ್ದು, 80ನೇ ವಸಂತಕ್ಕೆ ಕಾಲಿಡಲಿದ್ದಾರೆ. ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವರ ಕುಟುಂಬ ಮುಂದಾಗಿದೆ. ಆಗಸ್ಟ್ 31ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ದೊಡ್ಡಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಟರಾದ ಶಿವರಾಜಕುಮಾರ್, ಸುದೀಪ್ ಸೇರಿದಂತೆ ಚಿತ್ರರಂಗದ ಹಲವಾರು ಕಲಾವಿದರು, ತಂತ್ರಜ್ಞರು ಹಾಗೂ ರಾಜಕೀಯ ಮುಖಂಡರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಆಗಸ್ಟ್.31ರಂದು ಮುಂಜಾನೆ 11 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಅವರಿಂದ ಮನರಂಜನಾ ಕಾರ್ಯಕ್ರಮ ಇರಲಿದೆ. ಇದೇ ಸಂದರ್ಭದಲ್ಲಿ ಸಂದೇಶ್‍ ನಾಗರಾಜ್‍ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗುತ್ತದೆ. ಅಂದು ಸುಮಾರು 50,000 ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ರಮದ ಕುರಿತು ಮಾತನಾಡುವ ನಾಗರಾಜ್‍ ಅವರ ಮಗ ಸಂದೇಶ್‍, ‘ಸಂದೇಶ ಕಂಬೈನ್ಸ್ ಹಾಗೂ ಸಂದೇಶ್ ಪ್ರೊಡಕ್ಷನ್ಸ್ ಮೂಲಕ ನಮ್ಮ ತಂದೆ ಹಲವಾರು ಯಶಸ್ವಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈಗ ನಾನು ಒಂದಿಷ್ಟು ಸಿನಿಮಾ ನಿರ್ಮಿಸುತ್ತಿದ್ದು, ಕಳೆದ 30 ವರ್ಷಗಳಲ್ಲಿ 34 ಸಿನಿಮಾ ನಿರ್ಮಿಸಲಾಗಿದೆ. ‘ಮಣ್ಣಿನ ದೋಣಿ’ ಚಿತ್ರದಿಂದ ಶುರುವಾದ ನಮ್ಮ ಸಿನಿಮಾ ಜರ್ನಿ ಈಗಲೂ ಮುಂದುವರೆದಿದೆ. ಚಿತ್ರರಂಗವಲ್ಲದೆ, ರಾಜಕೀಯ, ಉದ್ಯಮದಲ್ಲೂ ಯಶಸ್ಸಿನ ಮೆಟ್ಟಿಲು ಏರಿದ್ದಾರೆ’ ಎಂದು ಹೇಳಿದರು.

ಸಂದೇಶ್ ನಾಗರಾಜ್ ಅವರ ಮಗಳು ಬೃಂದಾ ಮಾತನಾಡಿ, ‘ಆಗಸ್ಟ್ 16 ಅವರ ಹುಟ್ಟುಹಬ್ಬ. ಅಂದು ನಾವೆಲ್ಲಾ ಫ್ಯಾಮಿಲಿ ಸೇರಿ ಆಚರಣೆ ಮಾಡುತ್ತೇವೆ. ಅಂದು ಪೂಜೆ, ಹೋಮ ಇರುವುದರಿಂದ ಆಗಸ್ಟ್ 31ರಂದು ಸಾರ್ವಜನಿಕವಾಗಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ’ ಎಂದರು.

ಆಂದೋಲನ ಡೆಸ್ಕ್

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

20 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago