ಮನರಂಜನೆ

ಮನಸ್ಸಿನ ಅಂಧಕಾರವನ್ನು ಅನ್ವೇಷಿಸುವ ‘ಗ್ರೀನ್’ ಸದ್ಯದಲ್ಲೇ ತೆರೆಗೆ

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಕಲಾಜಿಕಲ್‍ ಥ್ರಿಲ್ಲರ್‍ ಚಿತ್ರಗಳು ಹೆಚ್ಚಾಗಿವೆ. ಮನಸ್ಸಿನ ವಿವಿಧ ಮುಖಗಳನ್ನು ಪರಿಚಯಿಸುವ ಚಿತ್ರಗಳು ಹೆಚ್ಚು ಹೆಚ್ಚು ಬಿಡುಗಡೆಯಾಗುತ್ತಿವೆ. ಈ ಸಾಲಿಗೆ ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಸಹ ಒಂದು.

ಈಗಾಗಲೇ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜೊತೆಗೆ ಪ್ರಶಂಸೆಯನ್ನು ಗಳಿಸಿರುವ ಹಾಗೂ ಸೈಕಲಾಜಿಕಲ್ ಮೈಂಡ್ ಬೆಂಡಿಂಗ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಆರ್.ಜೆ. ವಿಕ್ಕಿ, ವಿಶ್ವನಾಥ್ ಮಾಂಡಲಿಕ, ಶಿವ ಮಂಜು ಮುಂತಾದವರು ನಟಿಸಿದ್ದಾರೆ.

‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರವಾಗಿದ್ದು, ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ನಾಯಕನ ಕಥೆ ಹೇಳುತ್ತದೆ. ಆ ರಾಕ್ಷಸ ಕ್ರಮೇಣ ಮನಸ್ಸುನ್ನು ನಿಯಂತ್ರಣವನ್ನು ತೆಗೆದುಕೊಳ್ಳುತ್ತಿದ್ದಂತೆ, ನಾಯಕ ಭಯ ಮತ್ತು ಗೊಂದಲದ ವ್ಯೂಹದಲ್ಲಿ ಸಿಲುಕುತ್ತಾನೆ. ಈ ಆಂತರಿಕ ಹೋರಾಟದ ನಡುವೆ, ಚಿತ್ರದ ಕಥಾನಾಯಕನು ತಾನು ನಿಜವಾಗಿಯೂ ಯಾರು ಎಂಬುದನ್ನು ಹುಡುಕಲು ಪ್ರಯತ್ನಿಸುತ್ತಾನೆ. ತನ್ನೊಳಗಿನ ರಾಕ್ಷಸನು ತನ್ನ ಇಡೀ ಜೀವನವನ್ನೇ ಸಂಪೂರ್ಣವಾಗಿ ನುಂಗುವ ಮೊದಲು ನೆರವು ಹುಡುಕುವ ಮಹತ್ವವನ್ನು ಚಿತ್ರವು ಒತ್ತಿಹೇಳುತ್ತದೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರಾಜ್‍ ವಿಜಯ್‍, ‘ನಮ್ಮ ಕರಾಳ ಆಲೋಚನೆಗಳನ್ನು ಎದುರಿಸುವ ಮತ್ತು ಅವು ಮೇಲುಗೈ ಸಾಧಿಸುವ ಮೊದಲು ಸಹಾಯವನ್ನು ಪಡೆಯುವ ಮಹತ್ವವನ್ನು ನಾನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅನುಭವಿಸುವ ಆಂತರಿಕ ಹೋರಾಟಗಳು ಮತ್ತು ಅದನ್ನು ಜಯಿಸಲು ಬೇಕಾದ ಧೈರ್ಯದ ಮಹತ್ವವನ್ನು ಒತ್ತಿಹೇಳುತ್ತದೆ’ ಎನ್ನುತ್ತಾರೆ.

‘ಗ್ರೀನ್‍’ ಚಿತ್ರಕ್ಕೆ ಕೆ‌‌. ಮಧುಸೂದನ್ ಛಾಯಾಗ್ರಹಣ ಹಾಗೂ ಶಕ್ತಿ ಸ್ಯಾಕ್ ಅವರ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago