ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಎದುರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಏಪ್ರಿಲ್ 14 ರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಹಲವು ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಈ ಪ್ರಕರಣವನ್ನು ಮುಂಬೈ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ದುಷ್ಕರ್ಮಿಗಳು ಹಾರಿಸಿರುವ ಕೆಲ ಗುಂಡುಗಳು ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ಗೂ ತಗುಲಿವೆ. ಈ ಗುಂಡಿನ ದಾಳಿಗೆ ವಿದೇಶಿ ಪಿಸ್ತೂಲ್ ಅನ್ನು ಬಳಕೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳ ಹುಡುಕಾಟ ಮುಂದುವರಿಸಿದ್ದಾರೆ.
ಈ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರಿಗೆ ಬೈಕ್, ಪನ್ವೆಲ್ ಪ್ರದೇಶದ ನಿವಾಸಿಯೊಬ್ಬರ ಹೆಸರಿನಲ್ಲಿ ನೋಂದಣಿ ಆಗಿರುವುದು ತಿಳಿದುಬಂದಿದೆ. ಬೈಕ್ ಮಾಲೀಕನ ನೆಲೆ ಪತ್ತೆಹಚ್ಚಿದ ಪೋಲಿಸರು ವಿಚಾರಣೆಗೆ ಒಳಪಡಿಸಿದರು. ದುಷ್ಕರ್ಮಿಗಳು ಚರ್ಚ್ ಬಳಿ ಬೈಕ್ ಬಿಟ್ಟು, ಸ್ವಲ್ಪ ದೂರ ನಡೆದುಕೊಂಡು ಹೋಗಿದ್ದಾರೆ. ಬಳಿಕ ಆಟೋ ಮೂಲಕ ಬಾಂದ್ರಾ ರೈಲ್ವೆ ನಿಲ್ದಾಣ ತಲುಪಿ, ಅಲ್ಲಿಂದ ರೈಲಿನಲ್ಲಿ ಸಾಂತಾಕ್ರೂಜ್ ನಿಲ್ದಾಣದಲಿ ಇಳಿದಿದ್ದಾರೆ. ಅಲ್ಲಿಂದ ನಡೆದುಕೊಂಡು ಹೋಗಿರುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ ಅನ್ವಯ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಗುಂಡಿನ ದಾಳಿ ಕೃತ್ಯಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ.
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…