ಮನರಂಜನೆ

ಮತ್ತೆ ‘ಜುಗಾರಿ ಕ್ರಾಸ್‍’; ಈ ಬಾರಿ ಗುರುದತ್‍ ಗಾಣಿಗ ನಿರ್ದೇಶನದಲ್ಲಿ…

ಕನ್ನಡದ ಜನಪ್ರಿಯ ಸಾಹಿತಿ ಡಾ.ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನಪ್ರಿಯ ಕಾದಂಬರಿಯಾದ ‘ಜುಗಾರಿ ಕ್ರಾಸ್‍’ನ್ನು ಚಿತ್ರ ಮಾಡಬೇಕೆಂಬುದು ಹಲವರ ಕನಸಾಗಿತ್ತು. ಸುಮಾರು 20 ವರ್ಷಗಳ ಹಿಂದೆಯೇ ನಿರ್ದೇಶಕ ಕೋಡ್ಲು ರಾಮಕೃಷ್ಣ, ಶಿವರಾಜಕುಮಾರ್‍ ಅಭಿನಯದಲ್ಲಿ ಈ ಚಿತ್ರವನ್ನು ತೆರೆಗೆ ತರುವುದಕ್ಕೆ ಮುಂದಾಗಿದ್ದರು. ಆದರೆ, ಚಿತ್ರ ಸೆಟ್ಟೇರಲೇ ಇಲ್ಲ. ಆ ನಂತರ ಚಿರಂಜೀವಿ ಸರ್ಜಾ ಅಭಿನಯದಲ್ಲಿ ಹಿರಿಯ ನಿರ್ದೇಶಕ ಟಿ.ಎಸ್. ನಾಗಾಭರಣ, ಅದೇ ಹೆಸರಿನ ಚಿತ್ರವನ್ನು ಶುರು ಮಾಡಿದ್ದರು. ಚಿತ್ರದ ಮುಹೂರ್ತವಾದರೂ ಅದು ಮುಂದುವರೆಯಲಿಲ್ಲ.

ಈಗ ಈ ಕಾದಂಬರಿಯನ್ನು ‘ಅಂಬಿ ನಿಂಗೆ ವಯಸ್ಸಾಯ್ತೋ’ ಖ್ಯಾತಿಯ ಗುರುದತ್‍ ಗಾಣಿಗ ಕೈಗೆತ್ತಿಕೊಂಡಿದ್ದು, ಚಿತ್ರ ಮಾಡುವುದಕ್ಕೆ ಮುಂದಾಗಿದ್ದಾರೆ. ಭಾನುವಾರ (ಸೆಪ್ಟೆಂಬರ್ 08) ತೇಜಸ್ವಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರವನ್ನು ಘೋಷಿಸುವುದರ ಜೊತೆಗೆ ಮೊದಲ ಪೋಸ್ಟರ್‍ ಸಹ ಬಿಡುಗಡೆ ಮಾಡಿದ್ದಾರೆ.

‘ಜುಗಾರಿ ಕ್ರಾಸ್‍’ ಕಾದಂಬರಿಯನ್ನು ಚಿತ್ರ ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಕನ್ನಡ ಸಾಹಿತ್ಯ ಲೋಕದ ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಈ ‘ಜುಗಾರಿ ಕ್ರಾಸ್’. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ ಹೇಳಿದ್ದಾರೆ ತೇಜಸ್ವಿ.

ಈ ಹಿಂದಿನ ಎರಡು ಪ್ರಯತ್ನಗಳಲ್ಲಿ ಇಬ್ಬರು ಜನಪ್ರಿಯ ನಟರ ಹೆಸರು ಕೇಳಿಬಂದಿತ್ತು. ಆದರೆ, ಈ ‘ಜುಗಾರಿ ಕ್ರಾಸ್‍’ನ ಪ್ರಮುಖ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಈ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ ಮಾಡಲಿದ್ದಾರೆ. ಮಿಕ್ಕ ಕಲಾವಿದರು ಮತ್ತು ತಂತ್ರಜ್ಞರು ಇನ್ನಷ್ಟೇ ಆಯ್ಕೆಯಾಗಬೇಕಿದೆ.

ಸದ್ಯ ಗುರುದತ್‍ ಗಾಣಿಗ, ಪ್ರಜ್ವಲ್‍ ದೇವರಾಜ್‍ ಅಭಿನಯದ ‘ಕರಾವಳಿ’ ಚಿತ್ರವನ್ನು ನಿರ್ದೇಶಿಸಿದ್ದು, ಅದರ ಬಿಡುಗಡೆಯ ನಂತರ ಈ ಚಿತ್ರ ಪ್ರಾರಂಭವಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

12 mins ago

ಇರುವೆ ಕಚ್ಚಿ ಶಿಶು ಸಾವು ಪ್ರಕರಣ ; ವೈದ್ಯರು ಸೇರಿ 7 ಮಂದಿಗೆ ಶೋಕಾಸ್‌ ನೋಟಿಸ್

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…

24 mins ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಗಾಂಧಿ ಆತ್ಮಕತೆಯ ಆಯ್ದ ತುಣುಕು ; ಬಾಲ್ಯ ವಿವಾಹವೆಂಬ ನಾಚಿಕೆಗೇಡಿನ ಸಂಗತಿ

ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…

42 mins ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಐನ್‌ಸ್ಟೀನ್‌ ಕಂಡಂತೆ ಮಹಾತ್ಮ ಗಾಂಧೀಜಿ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…

2 hours ago

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

3 hours ago

ಕರ ಭಾರದ ನಡುವೆ ಘನ ತ್ಯಾಜ್ಯ ವಿಲೇವಾರಿಗೂ ಸೆಸ್‌

ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್‌ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…

3 hours ago