ಮನರಂಜನೆ

ಗುರುನಂದನ್‍ ಈಗ ‘ಮಿಸ್ಟರ್ ಜಾಕ್‍’; ಹುಟ್ಟುಹಬ್ಬಕ್ಕೆ ಟೀಸರ್ ಬಿಡುಗಡೆ

ಗುರುನಂದನ್‍ ಅಭಿನಯದ ಹೊಸ ಚಿತ್ರವೊಂದು ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿದ್ದು ನೆನಪಿರಬಹುದು. ಈ ಚಿತ್ರವನ್ನು ಅವರು ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಅಶ್ವಿನಿ ಪುನೀತ್‍ ರಾಜಕುಮಾರ್ ಚಾಲನೆ ನೀಡಿದ್ದರು. ಇದೀಗ ಚಿತ್ರದ ಶೇ. 75ರಷ್ಟು ಭಾಗದ ಚಿತ್ರೀಕರಣ ಮುಗಿದಿದ್ದು, ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲಾಗಿದೆ.

ಈ ಚಿತ್ರಕ್ಕೆ ‘ಮಿಸ್ಟರ್‍ ಜಾಕ್‍’ ಎಂಬ ಹೆಸರನ್ನು ಇಡಲಾಗಿದೆ. ಇತ್ತೀಚೆಗೆ ಗುರುನಂದನ್‍ ಹುಟ್ಟುಹಬ್ಬವ್ನು ಆಚರಿಸಿಕೊಂಡಿದ್ದು, ಅವರಿಗೆ ಶುಭ ಕೋರುವ ಶೀರ್ಷಿಕೆ ಟೀಸರ್‍ ಬಬಡುಗಡೆ ಮಾಡಲಾಗಿದೆ. ಜೊತೆಗೆ ಕೇಕ್‍ ಕತ್ತರಿಸುವ ಮೂಲಕ ಗುರುನಂದನ್‍ ಹುಟ್ಟುಹಬ್ಬವನ್ನೂ ಆಚರಿಸಲಾಗಿದೆ.

‘ಮಿಸ್ಟರ್‍ ಜಾಕ್‍’ ಚಿತ್ರವನ್ನು ಮಂಡಿಮನೆ ಟಾಕೀಸ್‍ ಬ್ಯಾನರ್‍ ಅಡಿ ಗುರುನಂದನ್‍ ಮತ್ತು ಸ್ನೇಹಿತರು ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಸುಮಂತ್‍ ಗೌಡ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರದೇಶನ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಸುಮಂತ್‍ ಗೌಡ ‘ಇಲ್ಲಿ ನಾಯಕನ ಹೆಸರು ಜಾನಕಿರಾಮ್‍. ಸಾಮಾನ್ಯವಾಗಿ stand-up comedianಗಳು ತಮ್ಮ ಹೆಸರುಗಳನ್ನು ಚಿಕ್ಕದಾಗಿ ಇಟ್ಟುಕೊಳ್ಳುತ್ತಾರೆ. ಹಾಗಾಗಿ, ನಾಯಕ ಇಲ್ಲಿ ತನ್ನನ್ನು ತಾನು ‘ಮಿಸ್ಟರ್ ಜ್ಯಾಕ್‍’ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುತ್ತಿರುತ್ತಾನೆ. ಇದೊಂದು ರೊಮ್ಯಾಂಟಿಕ್‍ ಕಾಮಿಡಿ ಮತ್ತು ಫ್ಯಾಮಿಲಿ ಡ್ರಾಮಾ. ಗುರುನಂದನ್‍ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನವನ್ನು ಚಿತ್ರದಲ್ಲಿ ಮಾಡುತ್ತಿದ್ದೇವೆ’ ಎಂದರು.

ಚಿತ್ರದ ಕುರಿತು ಮಾತನಾಡುವ ಗುರುನಂದನ್‍, ’ ಹಾಸ್ಯ ಮಾಡುವವರ ಹಿಂದಿನ ಕಥೆ ಇದು. ಇಲ್ಲಿ ನಾಯಕ ಒಬ್ಬ stand-up comedian ಆಗಿ ಕೆಲಸ ಮಾಡುತ್ತಿರುತ್ತಾನೆ. ಅವನ ಹಿಂದಿನ ನೋವನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮಲ್ಲಿ ಏನೇ ನೋವಿದ್ದರೂ, ಅದನ್ನು ಹೊರಗೆ ತೋರಿಸದೇ, ಎಲ್ಲರನ್ನೂ ನಗಿಸುವುದು, ದೊಡ್ಡ ಸವಾಲಿನ ಕೆಲಸ. ಅದನ್ನು ಈ ಚಿತ್ರದಲ್ಲಿ ಮಾಡುವ ಪ್ರಯತ್ನ ಮಾಡಿದ್ದೇನೆ’ ಎಂದರು ಗುರುನಂದನ್‍.

‘ಮಿಸ್ಟರ್ ಜಾಕ್’ ಚಿತ್ರದಲ್ಲಿ ಗುರುನಂದನ್‍ಗೆ ‘ಹರಿಕಥೆ ಅಲ್ಲ ಗಿರಿಕಥೆ’ ಖ್ಯಾತಿಯ ತೇಜಸ್ವಿನಿ ಪೂಣಚ್ಛ ನಟಿಸುತ್ತಿದ್ದಾರೆ. ಮಿಕ್ಕಂತೆ ಮಿತ್ರ, ಧರ್ಮಣ್ಣ ಕಡೂರು, ಗೋಪಾಲಕೃಷ್ಣ ದೇಶಪಾಂಡೆ, ಗಿರಿ, ಸುಷ್ಮಿತಾ ಮುಂತಾದವರು ನಟಿಸುತ್ತಿದ್ದಾರೆ. ಕಾರ್ತಿಕ್‍ ಪತ್ಥಾರ್‍ ಮುಂತಾದ ಜನಪ್ರಿಯ stand-up comedianಗಳು ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ಚಿತ್ರಕ್ಕೆ ಈಗಾಗಲೇ ಬೆಂಗಳೂರು ಸುತ್ತಮುತ್ತ ಶೇ. 75ರಷ್ಟು ಚಿತ್ರೀಕರಣ ಮುಗಿಸಿದ್ದೇವೆ. ಕೊನೆಯ ಹಂತದ ಚಿತ್ರೀಕರಣ ಜನವರಿ ಮೊದಲ ವಾರದಿಂದ ಶುರುವಾಗಲಿದೆ. ಚಿತ್ರಕ್ಕೆ ಕಿರಣ್ ರವೀಂದ್ರನಾಥ್‍ ಸಂಗೀತ ಸಂಯೋಜಿಸುತ್ತಿದ್ದು, ಶಿವಸೇನ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು

ಪಾಲ್ಘಾರ್:‌ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…

26 mins ago

ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…

44 mins ago

ಗಜಪಡೆಗೂ ತಟ್ಟಿದ ಬಿಸಿಲ ಬೇಗೆ: ನೀರನ್ನರಸಿ ನಿತ್ಯ ದಂಡಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…

53 mins ago

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

2 hours ago

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆ: ಆತಂಕದಲ್ಲಿ ರೈತರು

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ…

2 hours ago

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ…

2 hours ago