ಮನರಂಜನೆ

ಗುರುನಂದನ್‍ ಈಗ ‘ಮಿಸ್ಟರ್ ಜಾಕ್‍’; ಹುಟ್ಟುಹಬ್ಬಕ್ಕೆ ಟೀಸರ್ ಬಿಡುಗಡೆ

ಗುರುನಂದನ್‍ ಅಭಿನಯದ ಹೊಸ ಚಿತ್ರವೊಂದು ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿದ್ದು ನೆನಪಿರಬಹುದು. ಈ ಚಿತ್ರವನ್ನು ಅವರು ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಅಶ್ವಿನಿ ಪುನೀತ್‍ ರಾಜಕುಮಾರ್ ಚಾಲನೆ ನೀಡಿದ್ದರು. ಇದೀಗ ಚಿತ್ರದ ಶೇ. 75ರಷ್ಟು ಭಾಗದ ಚಿತ್ರೀಕರಣ ಮುಗಿದಿದ್ದು, ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲಾಗಿದೆ.

ಈ ಚಿತ್ರಕ್ಕೆ ‘ಮಿಸ್ಟರ್‍ ಜಾಕ್‍’ ಎಂಬ ಹೆಸರನ್ನು ಇಡಲಾಗಿದೆ. ಇತ್ತೀಚೆಗೆ ಗುರುನಂದನ್‍ ಹುಟ್ಟುಹಬ್ಬವ್ನು ಆಚರಿಸಿಕೊಂಡಿದ್ದು, ಅವರಿಗೆ ಶುಭ ಕೋರುವ ಶೀರ್ಷಿಕೆ ಟೀಸರ್‍ ಬಬಡುಗಡೆ ಮಾಡಲಾಗಿದೆ. ಜೊತೆಗೆ ಕೇಕ್‍ ಕತ್ತರಿಸುವ ಮೂಲಕ ಗುರುನಂದನ್‍ ಹುಟ್ಟುಹಬ್ಬವನ್ನೂ ಆಚರಿಸಲಾಗಿದೆ.

‘ಮಿಸ್ಟರ್‍ ಜಾಕ್‍’ ಚಿತ್ರವನ್ನು ಮಂಡಿಮನೆ ಟಾಕೀಸ್‍ ಬ್ಯಾನರ್‍ ಅಡಿ ಗುರುನಂದನ್‍ ಮತ್ತು ಸ್ನೇಹಿತರು ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಸುಮಂತ್‍ ಗೌಡ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರದೇಶನ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಸುಮಂತ್‍ ಗೌಡ ‘ಇಲ್ಲಿ ನಾಯಕನ ಹೆಸರು ಜಾನಕಿರಾಮ್‍. ಸಾಮಾನ್ಯವಾಗಿ stand-up comedianಗಳು ತಮ್ಮ ಹೆಸರುಗಳನ್ನು ಚಿಕ್ಕದಾಗಿ ಇಟ್ಟುಕೊಳ್ಳುತ್ತಾರೆ. ಹಾಗಾಗಿ, ನಾಯಕ ಇಲ್ಲಿ ತನ್ನನ್ನು ತಾನು ‘ಮಿಸ್ಟರ್ ಜ್ಯಾಕ್‍’ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುತ್ತಿರುತ್ತಾನೆ. ಇದೊಂದು ರೊಮ್ಯಾಂಟಿಕ್‍ ಕಾಮಿಡಿ ಮತ್ತು ಫ್ಯಾಮಿಲಿ ಡ್ರಾಮಾ. ಗುರುನಂದನ್‍ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನವನ್ನು ಚಿತ್ರದಲ್ಲಿ ಮಾಡುತ್ತಿದ್ದೇವೆ’ ಎಂದರು.

ಚಿತ್ರದ ಕುರಿತು ಮಾತನಾಡುವ ಗುರುನಂದನ್‍, ’ ಹಾಸ್ಯ ಮಾಡುವವರ ಹಿಂದಿನ ಕಥೆ ಇದು. ಇಲ್ಲಿ ನಾಯಕ ಒಬ್ಬ stand-up comedian ಆಗಿ ಕೆಲಸ ಮಾಡುತ್ತಿರುತ್ತಾನೆ. ಅವನ ಹಿಂದಿನ ನೋವನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮಲ್ಲಿ ಏನೇ ನೋವಿದ್ದರೂ, ಅದನ್ನು ಹೊರಗೆ ತೋರಿಸದೇ, ಎಲ್ಲರನ್ನೂ ನಗಿಸುವುದು, ದೊಡ್ಡ ಸವಾಲಿನ ಕೆಲಸ. ಅದನ್ನು ಈ ಚಿತ್ರದಲ್ಲಿ ಮಾಡುವ ಪ್ರಯತ್ನ ಮಾಡಿದ್ದೇನೆ’ ಎಂದರು ಗುರುನಂದನ್‍.

‘ಮಿಸ್ಟರ್ ಜಾಕ್’ ಚಿತ್ರದಲ್ಲಿ ಗುರುನಂದನ್‍ಗೆ ‘ಹರಿಕಥೆ ಅಲ್ಲ ಗಿರಿಕಥೆ’ ಖ್ಯಾತಿಯ ತೇಜಸ್ವಿನಿ ಪೂಣಚ್ಛ ನಟಿಸುತ್ತಿದ್ದಾರೆ. ಮಿಕ್ಕಂತೆ ಮಿತ್ರ, ಧರ್ಮಣ್ಣ ಕಡೂರು, ಗೋಪಾಲಕೃಷ್ಣ ದೇಶಪಾಂಡೆ, ಗಿರಿ, ಸುಷ್ಮಿತಾ ಮುಂತಾದವರು ನಟಿಸುತ್ತಿದ್ದಾರೆ. ಕಾರ್ತಿಕ್‍ ಪತ್ಥಾರ್‍ ಮುಂತಾದ ಜನಪ್ರಿಯ stand-up comedianಗಳು ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ಚಿತ್ರಕ್ಕೆ ಈಗಾಗಲೇ ಬೆಂಗಳೂರು ಸುತ್ತಮುತ್ತ ಶೇ. 75ರಷ್ಟು ಚಿತ್ರೀಕರಣ ಮುಗಿಸಿದ್ದೇವೆ. ಕೊನೆಯ ಹಂತದ ಚಿತ್ರೀಕರಣ ಜನವರಿ ಮೊದಲ ವಾರದಿಂದ ಶುರುವಾಗಲಿದೆ. ಚಿತ್ರಕ್ಕೆ ಕಿರಣ್ ರವೀಂದ್ರನಾಥ್‍ ಸಂಗೀತ ಸಂಯೋಜಿಸುತ್ತಿದ್ದು, ಶಿವಸೇನ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago