ಮನರಂಜನೆ

ಗುರುಪ್ರಸಾದ್ ಕೊನೆಯ ಸಿನಿಮಾ ಬಿಡುಗಡೆಗೆ ರೆಡಿ; ಫೆ. 21ಕ್ಕೆ ತೆರೆಗೆ

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್‍, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು ಆ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಚಿತ್ರಕ್ಕೆ ‘ಎದ್ದೇಳು ಮಂಜುನಾಥ 2’ ಎಂಬ ಹೆಸರನ್ನು ಇಡಲಾಗಿದ್ದು, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಥವಾ ಇದು ಆ ಚಿತ್ರದ ಮುಂದುವರೆದ ಭಾಗವಲ್ಲ. ಬದಲಿಗೆ ಇನ್ನೊಂದು ಆವೃತ್ತಿ ಎನ್ನಬಹುದು. ಫೆಬ್ರವರಿ 21ರಂದು ಚಿತ್ರ ಬಿಡುಗಡೆಯಾಗುತತಿದ್ದು, ಈ ಚಿತ್ರದಲ್ಲಿ ಗುರುಪ್ರಸಾದ್‍ ಜೊತೆಗೆ ರಚಿತಾ ಮಹಾಲಕ್ಷ್ಮೀ, ಶರತ್‍ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ.

ಇತ್ತೀಚೆಗೆ, ‘ಎದ್ದೇಳು ಮಂಜುನಾಥ 2’ ಚಿತ್ರದ ‘ಕಿತ್ತೋದ ಪ್ರೇಮ …’ ಎಂಬ ಹಾಡು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಗುರುಪ್ರಸಾದ್‍ ಸಾಹಿತ್ಯ ರಚಿಸಿದ್ದು, ಅನೂಪ್‍ ಸೀಳಿನ್‍ ಸಂಗೀತ ಸಂಯೋಜಿಸಿದ್ದಾರೆ. ನವೀನ್‍ ಸಜ್ಜು ಹಾಡಿದ್ದಾರೆ. ಇನ್ನು, ಈ ಮೂವರೂ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಹಾಡು ಬಿಡುಗಡೆ ನಂತರ ಮಾತನಾಡಿದ ಶರತ್ ಲೋಹಿತಾಶ್ವ, ‘ನಾನು ಗುರುಪ್ರಸಾದ್‍ ಅವರನ್ನು ಅಭಿಮಾನಿಯಾಗಿ ನೋಡಿದ್ದೆ. ಅವರ ಚಿತ್ರಗಳಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿರಲಿಲ್ಲ. ಪ್ರತಿಯೊಬ್ಬ ಕಲಾವಿದರಿಗೂ ಒಬ್ಬ ಒಳ್ಳೆಯ ನಿರ್ದೇಶಕರ ಜೊತೆ ಕೆಲಸ‌ ಮಾಡಬೇಕು ಎಂಬ ಆಸೆ ಇರುತ್ತದೆ. ಆ ಆಸೆ ನನಗೂ ಇತ್ತು. ಆ ಆಸೆ ಗುರುಪ್ರಸಾದ್ ಅವರ ಕೊನೆಯ ಚಿತ್ರದಲ್ಲಿ ಈಡೇರಿದೆ’ ಎಂದರು.

ನಾಯಕಿ ರಚಿತಾ ಮಹಾಲಕ್ಷ್ಮಿ ಮಾತನಾಡಿ, ‘ನಾನು ‘ರಂಗನಾಯಕ’ ಚಿತ್ರಕ್ಕೂ ಮೊದಲೇ ಈ ಚಿತ್ರದಲ್ಲಿ ನಟಿಸಿದ್ದೆ. 2020ನಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಿದ್ದೆವು. ಗುರುಪ್ರಸಾದ್ ಅವರ ನಿರ್ದೇಶನದಲ್ಲಿ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ’ ಎಂದರು.

‘ಎದ್ದೇಳು ಮಂಜುನಾಥ 2’ ಚಿತ್ರವನ್ನು ರಾಮ್ ಮೂವೀಸ್, ಗುರುಪ್ರಸಾದ್ inc ಹಾಗೂ ಫ್ರೆಂಡ್ಸ್ ಫೋರ್ಮ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರದಿಂದ ಬರುವ ಲಾಭದ ಶೇ. 50ರಷ್ಟು ಭಾಗವನ್ನು ಗುರುಪ್ರಸಾದ್ ಅವರ ಮಗಳಾದ ನಗು ಶರ್ಮಾ ಭವಿಷ್ಯಕ್ಕೆ ಮೀಸಲಿಡಲಾಗುವುದು.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

6 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

8 hours ago