ಮನರಂಜನೆ

ಗುರುಪ್ರಸಾದ್ ಕೊನೆಯ ಸಿನಿಮಾ ಬಿಡುಗಡೆಗೆ ರೆಡಿ; ಫೆ. 21ಕ್ಕೆ ತೆರೆಗೆ

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್‍, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು ಆ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಚಿತ್ರಕ್ಕೆ ‘ಎದ್ದೇಳು ಮಂಜುನಾಥ 2’ ಎಂಬ ಹೆಸರನ್ನು ಇಡಲಾಗಿದ್ದು, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಥವಾ ಇದು ಆ ಚಿತ್ರದ ಮುಂದುವರೆದ ಭಾಗವಲ್ಲ. ಬದಲಿಗೆ ಇನ್ನೊಂದು ಆವೃತ್ತಿ ಎನ್ನಬಹುದು. ಫೆಬ್ರವರಿ 21ರಂದು ಚಿತ್ರ ಬಿಡುಗಡೆಯಾಗುತತಿದ್ದು, ಈ ಚಿತ್ರದಲ್ಲಿ ಗುರುಪ್ರಸಾದ್‍ ಜೊತೆಗೆ ರಚಿತಾ ಮಹಾಲಕ್ಷ್ಮೀ, ಶರತ್‍ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ.

ಇತ್ತೀಚೆಗೆ, ‘ಎದ್ದೇಳು ಮಂಜುನಾಥ 2’ ಚಿತ್ರದ ‘ಕಿತ್ತೋದ ಪ್ರೇಮ …’ ಎಂಬ ಹಾಡು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಗುರುಪ್ರಸಾದ್‍ ಸಾಹಿತ್ಯ ರಚಿಸಿದ್ದು, ಅನೂಪ್‍ ಸೀಳಿನ್‍ ಸಂಗೀತ ಸಂಯೋಜಿಸಿದ್ದಾರೆ. ನವೀನ್‍ ಸಜ್ಜು ಹಾಡಿದ್ದಾರೆ. ಇನ್ನು, ಈ ಮೂವರೂ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಹಾಡು ಬಿಡುಗಡೆ ನಂತರ ಮಾತನಾಡಿದ ಶರತ್ ಲೋಹಿತಾಶ್ವ, ‘ನಾನು ಗುರುಪ್ರಸಾದ್‍ ಅವರನ್ನು ಅಭಿಮಾನಿಯಾಗಿ ನೋಡಿದ್ದೆ. ಅವರ ಚಿತ್ರಗಳಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿರಲಿಲ್ಲ. ಪ್ರತಿಯೊಬ್ಬ ಕಲಾವಿದರಿಗೂ ಒಬ್ಬ ಒಳ್ಳೆಯ ನಿರ್ದೇಶಕರ ಜೊತೆ ಕೆಲಸ‌ ಮಾಡಬೇಕು ಎಂಬ ಆಸೆ ಇರುತ್ತದೆ. ಆ ಆಸೆ ನನಗೂ ಇತ್ತು. ಆ ಆಸೆ ಗುರುಪ್ರಸಾದ್ ಅವರ ಕೊನೆಯ ಚಿತ್ರದಲ್ಲಿ ಈಡೇರಿದೆ’ ಎಂದರು.

ನಾಯಕಿ ರಚಿತಾ ಮಹಾಲಕ್ಷ್ಮಿ ಮಾತನಾಡಿ, ‘ನಾನು ‘ರಂಗನಾಯಕ’ ಚಿತ್ರಕ್ಕೂ ಮೊದಲೇ ಈ ಚಿತ್ರದಲ್ಲಿ ನಟಿಸಿದ್ದೆ. 2020ನಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಿದ್ದೆವು. ಗುರುಪ್ರಸಾದ್ ಅವರ ನಿರ್ದೇಶನದಲ್ಲಿ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ’ ಎಂದರು.

‘ಎದ್ದೇಳು ಮಂಜುನಾಥ 2’ ಚಿತ್ರವನ್ನು ರಾಮ್ ಮೂವೀಸ್, ಗುರುಪ್ರಸಾದ್ inc ಹಾಗೂ ಫ್ರೆಂಡ್ಸ್ ಫೋರ್ಮ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರದಿಂದ ಬರುವ ಲಾಭದ ಶೇ. 50ರಷ್ಟು ಭಾಗವನ್ನು ಗುರುಪ್ರಸಾದ್ ಅವರ ಮಗಳಾದ ನಗು ಶರ್ಮಾ ಭವಿಷ್ಯಕ್ಕೆ ಮೀಸಲಿಡಲಾಗುವುದು.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

4 mins ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

41 mins ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

2 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

3 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

3 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

3 hours ago