ಮನರಂಜನೆ

ಯಾವುದೇ ಜಾನರ್‍ಗೂ ಸಲ್ಲದ ‘ಹಚ್ಚೆ’ ಚಿತ್ರದ ಹಾಡು ಬಿಡುಗಡೆ

ಒಂದೊಂದು ಚಿತ್ರ ಒಂದೊಂದು ಜಾನರ್‍ಗೆ ಸೇರಿರುತ್ತದೆ. ಆದರೆ, ಹೊಸಬರ ‘ಹಚ್ಚೆ’ ಚಿತ್ರವು ಯಾವೊಂದು ಜಾನರ್‍ಗೂ ಸೇರುವ ಚಿತ್ರವಲ್ಲವಂತೆ. ಕಾರಣ, ಇದರಲ್ಲಿ ಎಲ್ಲಾ ರೀತಿಯ ಭಾವನೆಗಳಿದ್ದು, ಯಾವುದೋ ಒಂದು ಶೈಲಿಗೆ ಸೇರಿಸಲು ಅಸಾಧ್ಯ ಎನ್ನುತ್ತಾರೆ ನಿರ್ದೇಶಕ ಯಶೋಧರ. ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ.

ಅಶ್ವ ಫಿಲಂಸ್ ಲಾಂಛನದಲ್ಲಿ ಯಶೋಧರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಅಭಿಮನ್ಯು ನಾಯಕನಾಗಿ ನಟಿಸಿರುವ ‘ಹಚ್ಚೆ’ ಚಿತ್ರದ ‘ವಿಘ್ನೇಶ್ವರಾಯ …’ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಿರ್ದೇಶಕರೇ ಬರೆದಿದ್ದು, ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ಶಿವಂ ಈ ಹಾಡನ್ನು ಹಾಡಿದ್ದಾರೆ.

‘ಹಚ್ಚೆ’ ಚಿತ್ರದ ಕುರಿತು ಮಾತನಾಡುವ ಯಶೋಧರ, ‘ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ್ದೇವೆ. ಚಿತ್ರದ ಹೆಸರಿನಲ್ಲೇ ಒಂದು ಕುತೂಹಲವಿದೆ. ಆ ಹೆಸರು ಚಿತ್ರಕ್ಕೆ ಇಟ್ಟಿರುವುದು ಏಕೆ ಎನ್ನುವುದರ ಬಗ್ಗೆ ಚಿತ್ರದಲ್ಲಿ ತಿಳಿಸಿದ್ದೇವೆ. ಇದು ಒಂದು ಜಾನರ್‍ನ ಚಿತ್ರವಲ್ಲ. ಲವ್, ಸೆಂಟಿಮೆಂಟ್, ಸಸ್ಪೆನ್ಸ್, ಥ್ರಿಲ್ಲರ್ … ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಅಭಿಮನ್ಯು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಆದರೆ, ಅವರ ಅಭಿನಯ ನೋಡಿದವರು ಮೊದಲ ಚಿತ್ರ ಅಂತ ಹೇಳುವುದಿಲ್ಲ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ‌. ಮುಂದಿನ ಎರಡು ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ’ ಎಂದರು.

ಮೂಲತಃ ಮೈಸೂರಿನವರಾದ ಅಭಿಮನ್ಯು, ರಂಗಭೂಮಿಯಲ್ಲಿ ತೊಡಗಿಸಿಕೊಂಡವರಂತೆ. ‘ಸಾಕಷ್ಟು ಜನಪ್ರಿಯ ನಾಟಕಗಳಲ್ಲಿ ಅಭಿನಯಿಸಿದ್ದೇನೆ. ‘ಅಂಜನಿ ಪುತ್ರ’ ಸೇರಿದಂತೆ ಅನೇಕ ಚಿತ್ರಗಳಲ್ಲೂ ಸಹ ಕಲಾವಿದನಾಗಿ ನಟಿಸಿದ್ದೇನೆ. ನನ್ನ ಪ್ರತಿಭೆ ಗುರುತಿಸಿ ಯಶೋಧರ ಅವರು ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿದ್ದಾರೆ. ನನ್ನ ಪಾತ್ರ ಚೆನ್ನಾಗಿದೆ’ ಎಂದರು.

‘ಹಚ್ಚೆ’ ಚಿತ್ರದಲ್ಲಿ ಆದ್ಯಪ್ರಿಯಾ ಮತ್ತು ಅನುಪ್ರೇಮ ನಾಯಕಿಯರಾಗಿ ನಟಿಸಿದ್ದು, ವಿವೇಕ್‍ ಚಕ್ರವರ್ತಿ ಸಂಗೀತ, ಯಾಸಿನ್‍ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

17 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

19 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

20 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

23 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

27 mins ago