ಮನರಂಜನೆ

ಸೆಟ್ಟೇರಿತು ‘ಹಲ್ಕಾ ಡಾನ್’; ಸಾಯಿಕುಮಾರ್ ಫ್ಯಾನ್‍ ಆದ ಪ್ರಮೋದ್‍

‘ಭುವನಂ ಗಗನಂ’ ನಂತರ ಪ್ರಮೋದ್‍ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್‍ ಹೊಸದೊಂದು ಚಿತ್ರದೊಂದಿಗೆ ಬರುತ್ತಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ.

‘ಟಗರು’ ಮತ್ತು ‘ಸಲಗ ಚಿತ್ರಗಳನ್ನು ನಿರ್ಮಿಸಿರುವ ಕೆ.ಪಿ. ಶ್ರೀಕಾಂತ್ ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ವೀನಸ್ ಎಂಟರ್‌ಟೈನರ್ ಬ್ಯಾನರ್ ಅಡಿಯಲ್ಲಿ‌ ಅವರು ‘ಹಲ್ಕಾ ಡಾನ್‍’ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದಲ್ಲಿ ಪ್ರಮೋದ್‍ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ‘ಸಾಯಿಕುಮಾರ್ ಫ್ಯಾನ್‍’ ಎಂಬ ಅಡಿಬರಹ ಇದೆ.

ಇತ್ತೀಚೆಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದ್ದು, ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್, ಸುದೀಪ್‍, ರಚಿತಾ ರಾಮ್, ‘ದುನಿಯಾ’ ವಿಜಯ್, ವಿನಯ್ ರಾಜಕುಮಾರ್, ನಿರ್ದೇಶಕ ಆರ್. ಚಂದ್ರು ಸೇರಿದಂತೆ ಸೇರಿದಂತೆ ಹಲವರು ಚಿತ್ರತಂಡಕ್ಕೆ ಶುಭಕೋರಿದರು. ಈ ಸಂದರ್ಭದಲ್ಲಿ ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿಕುಮಾರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇದನ್ನು ಓದಿ: ‘ಹರ್ಕ್ಯುಲಸ್’ ಆದ ವಿರಾಟ್‍; ಮಾಸ್‍ ಹೀರೋ ಆಗಿ ಬದಲಾಗಲು ಪ್ರಯತ್ನ

ಈ ಚಿತ್ರಕ್ಕೆ ಚಲ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಕುರಿತು ಮಾತನಾಡುವ ಅವರು, ‘ಇದೊಂದು ಡಾರ್ಕ್ ಕಾಮಿಡಿ ಜಾನರ್‍ನ ಕಥೆ. ಹಲ್ಕಾ ಡಾನ್‍ ಎಂದರೆ ನಾಯಕನ ಹೆಸರು. ಮುಂದಿನ ತಿಂಗಳಿನಿಂದ ಈ ಚಿತ್ರದ ಚಿತ್ರೀಕರಣ ನಡೆಯಲಿದೆ. ಪ್ರಮೋದ್‍ಗೆ ಗಂಭೀರವಾಗಿಯೇ ನಗಿಸುವ ಶಕ್ತಿ ಇದೆ. ಅದೇ ಕಾರಣಕ್ಕೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ನಾನು ಸಾಯಿಕುಮಾರ್ ಅವರ ಅಭಿಮಾನಿ. ಈ ಚಿತ್ರದಲ್ಲಿ ಅವರೂ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಚಿತ್ರರಂಗಕ್ಕೆ ಸಂಬಂಧಿಸಿದ ಕಥೆಯಲ್ಲ. ಪ್ರತಿಯೊಬ್ಬರೂ ಇನ್ನೊಬ್ಬರಿಗೆ ಅಭಿಮಾನಿಯಾಗಿರುತ್ತಾರೆ. ಅಂಥ ಅಭಿಮಾನಿಯ ಕಥೆ ಇದು’ ಎಂದರು.

ನಾಯಕ ಪ್ರಮೋದ್ ಮಾತನಾಡಿ, ‘ನಾನು ಐದಾರು ಬಾರಿ ಈ ಸಿನಿಮಾದ ಕಥೆ ಕೇಳಿದ್ದೇನೆ. ಚಲ ಬಹಳ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ. ನನ್ನ ಸಿನಿಮಾ ಪ್ರಯಾಣದಲ್ಲಿ ಈ ಚಿತ್ರ ಒಳ್ಳೆಯ ಹೆಸರು ತಂದುಕೊಡುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ‘ಹಲ್ಕಾ ಡಾನ್’ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದ್ದು, ಪ್ರಮೋದ್‍ಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ನಟಿಸುತ್ತಿದ್ದು, ಮಿಕ್ಕಂತೆ ಸಾಯಿಕುಮಾರ್‍, ರಮೇಶ್ ಇಂದಿರಾ, ಜ್ಯೋತಿ ರೈ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

5 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

5 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

6 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

6 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

6 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

6 hours ago