ಮನರಂಜನೆ

ಸೆಟ್ಟೇರಿತು ‘ಹಲ್ಕಾ ಡಾನ್’; ಸಾಯಿಕುಮಾರ್ ಫ್ಯಾನ್‍ ಆದ ಪ್ರಮೋದ್‍

‘ಭುವನಂ ಗಗನಂ’ ನಂತರ ಪ್ರಮೋದ್‍ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್‍ ಹೊಸದೊಂದು ಚಿತ್ರದೊಂದಿಗೆ ಬರುತ್ತಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ.

‘ಟಗರು’ ಮತ್ತು ‘ಸಲಗ ಚಿತ್ರಗಳನ್ನು ನಿರ್ಮಿಸಿರುವ ಕೆ.ಪಿ. ಶ್ರೀಕಾಂತ್ ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ವೀನಸ್ ಎಂಟರ್‌ಟೈನರ್ ಬ್ಯಾನರ್ ಅಡಿಯಲ್ಲಿ‌ ಅವರು ‘ಹಲ್ಕಾ ಡಾನ್‍’ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದಲ್ಲಿ ಪ್ರಮೋದ್‍ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ‘ಸಾಯಿಕುಮಾರ್ ಫ್ಯಾನ್‍’ ಎಂಬ ಅಡಿಬರಹ ಇದೆ.

ಇತ್ತೀಚೆಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದ್ದು, ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್, ಸುದೀಪ್‍, ರಚಿತಾ ರಾಮ್, ‘ದುನಿಯಾ’ ವಿಜಯ್, ವಿನಯ್ ರಾಜಕುಮಾರ್, ನಿರ್ದೇಶಕ ಆರ್. ಚಂದ್ರು ಸೇರಿದಂತೆ ಸೇರಿದಂತೆ ಹಲವರು ಚಿತ್ರತಂಡಕ್ಕೆ ಶುಭಕೋರಿದರು. ಈ ಸಂದರ್ಭದಲ್ಲಿ ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿಕುಮಾರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇದನ್ನು ಓದಿ: ‘ಹರ್ಕ್ಯುಲಸ್’ ಆದ ವಿರಾಟ್‍; ಮಾಸ್‍ ಹೀರೋ ಆಗಿ ಬದಲಾಗಲು ಪ್ರಯತ್ನ

ಈ ಚಿತ್ರಕ್ಕೆ ಚಲ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಕುರಿತು ಮಾತನಾಡುವ ಅವರು, ‘ಇದೊಂದು ಡಾರ್ಕ್ ಕಾಮಿಡಿ ಜಾನರ್‍ನ ಕಥೆ. ಹಲ್ಕಾ ಡಾನ್‍ ಎಂದರೆ ನಾಯಕನ ಹೆಸರು. ಮುಂದಿನ ತಿಂಗಳಿನಿಂದ ಈ ಚಿತ್ರದ ಚಿತ್ರೀಕರಣ ನಡೆಯಲಿದೆ. ಪ್ರಮೋದ್‍ಗೆ ಗಂಭೀರವಾಗಿಯೇ ನಗಿಸುವ ಶಕ್ತಿ ಇದೆ. ಅದೇ ಕಾರಣಕ್ಕೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ನಾನು ಸಾಯಿಕುಮಾರ್ ಅವರ ಅಭಿಮಾನಿ. ಈ ಚಿತ್ರದಲ್ಲಿ ಅವರೂ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಚಿತ್ರರಂಗಕ್ಕೆ ಸಂಬಂಧಿಸಿದ ಕಥೆಯಲ್ಲ. ಪ್ರತಿಯೊಬ್ಬರೂ ಇನ್ನೊಬ್ಬರಿಗೆ ಅಭಿಮಾನಿಯಾಗಿರುತ್ತಾರೆ. ಅಂಥ ಅಭಿಮಾನಿಯ ಕಥೆ ಇದು’ ಎಂದರು.

ನಾಯಕ ಪ್ರಮೋದ್ ಮಾತನಾಡಿ, ‘ನಾನು ಐದಾರು ಬಾರಿ ಈ ಸಿನಿಮಾದ ಕಥೆ ಕೇಳಿದ್ದೇನೆ. ಚಲ ಬಹಳ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ. ನನ್ನ ಸಿನಿಮಾ ಪ್ರಯಾಣದಲ್ಲಿ ಈ ಚಿತ್ರ ಒಳ್ಳೆಯ ಹೆಸರು ತಂದುಕೊಡುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ‘ಹಲ್ಕಾ ಡಾನ್’ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದ್ದು, ಪ್ರಮೋದ್‍ಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ನಟಿಸುತ್ತಿದ್ದು, ಮಿಕ್ಕಂತೆ ಸಾಯಿಕುಮಾರ್‍, ರಮೇಶ್ ಇಂದಿರಾ, ಜ್ಯೋತಿ ರೈ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

8 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

10 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

10 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

14 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

19 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

19 hours ago