ಕನ್ನಡ ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಹುಚ್ಚು ಆಳವಾಗಿ ಬೇರೂರುತ್ತಿದೆ. ‘ಕೆಜಿಎಫ್’ ಮತ್ತು ‘ಕಾಂತಾರ’ ಚಿತ್ರಗಳ ಯಶಸ್ಸಿನ ನಂತರ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಹೀರೋಗಳಾಗುವುದಕ್ಕೆ ಪ್ರಯತ್ನ ನಡೆಸಿದ್ದಾರೆ. ಅದಕ್ಕಾಗಿ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಇದರಿಂದ ದೊಡ್ಡ ಹೀರೋಗಳ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಪ್ರೇಕ್ಷಕರು ಸಹ ಚಿತ್ರಮಂದಿರಗಳತ್ತ ಬರುತ್ತಿಲ್ಲ. ಹಾಗಾಗಿ, ಹೀರೋಗಳಿಗೆ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡಿ, ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವಂತೆ ಮಾಡಿ ಎಂದು ಚಿತ್ರಮಂದಿರದವರು ಸೇರಿ ಹಲವರು ಮನವಿ ಮಾಡುತ್ತಿದ್ದಾರೆ. ಈಗ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಸಹ ಧ್ವನಿಗೂಡಿಸಿದ್ದಾರೆ.
ಸೋಮವಾರ ಸಂಜೆ ‘ಗೌರಿ’ ಚಿತ್ರದ ಹಾಡು ಬಿಡುಗಡೆ ಸಮಾರಂಭವಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಈ ಪ್ಯಾನ್ ಇಂಡಿಯಾ ಎಂಬ ಹುಚ್ಚಿನಿಂದಾಗಿ ಕನ್ನಡದ ಸ್ಟಾರ್ಗಳಿಗೆ ಕನ್ನಡದ ಬೇರುಗಳು ಕಟ್ ಆಗಿದೆ ಎಂದು ಹೇಳಿದ್ದಾರೆ.
‘ಇವರೆಲ್ಲಾ ಭಾರತದಾದ್ಯಂತ ಖ್ಯಾತ ನಾಯಕರಾಗುತ್ತಾರೆ ಅನ್ನೋದು ಒಂದು ಭ್ರಮೆ. ದಕ್ಷಿಣದಲ್ಲಿ ಯಾರಾದರೂ ಸುಂದರ ನಾಯಕಿಯರಿದ್ದರೆ, ಅವರು ಉತ್ತರ ಭಾರತದಲ್ಲಿ 20 ವರ್ಷ ಬದುಕಬಹುದೇ ಹೊರತು, ರಜನಿಕಾಂತ್ ಆಗಲೀ, ಕಮಲ್ ಹಾಸನ್, ಮೋಹನ್ ಲಾಲ್, ಮಮ್ಮೂಟ್ಟಿ ಮುಂತಾದವರು ಅದೆಷ್ಟೇ ಪ್ರತಿಭಾವಂತರಿದ್ದರೂ ಮುಂಬೈನಲ್ಲಿ ಎರಡು ವರ್ಷ ಇರೋಕೆ ಆಗಲ್ಲ. ಒಂದೋ, ಎರಡೋ ಸಿನಿಮಾ ಮುಗಿಸಿ ವಾಪಸ್ಸು ಬಂದುಬಿಡ್ತಾರೆ. ನಮ್ಮ ಹೀರೋಗಳು ಹನಿಮೂನ್ ತರಹ ಹೋಗಿ ಪ್ಯಾನ್ ಇಂಡಿಯಾ ಎಲ್ಲಾ ಸುತ್ತಾಡಿಕೊಂಡು ಬರಬಹುದು. ಅದೆಲ್ಲಿ ಸುತ್ತಿದರೂ ಕೊನೆಗೆ ಕನ್ನಡಕ್ಕೆ ಬರಲೇ ಬೇಕು’ ಎಂದರು.
ಕನ್ನಡ ಚಿತ್ರರಂಗದ ಮಹತ್ವದ ಕುರಿತು ಮಾತನಾಡಿದ ಅವರು, ‘ಈ ದೇಶದಲ್ಲಿ ಎಷ್ಟೊಂದು ಪ್ರಾದೇಶಿಕ ಭಾಷೆಗಳಿವೆ, ಎಷ್ಟೊಂದು ಪ್ರಾದೇಶಿಕ ಚಿತ್ರರಂಗಗಳಿವೆ. ಅದರಲ್ಲಿ ಕೇಳೋದಕ್ಕೆ ಬಹಳ ಅರ್ಥಗಭಿತವಾದ ಶೀರ್ಷಿಕೆ ಎಂದರೆ ಅದು ಸ್ಯಾಂಡಲ್ವುಡ್. ಅದನ್ನು ನಾವು ಅಚ್ಚ ಕನ್ನಡದಲ್ಲಿ ಚಂದನವನ ಅಂತ ಕರೆಯುತ್ತೇವೆ. ಸ್ಯಾಂಡಲ್ವುಡ್ನ್ನು ಬೇರೆ ಯಾವುದಾದರೂ ಭಾಷೆಗಳ ವುಡ್ಗಳ ಜೊತೆಗೆ ಹೋಲಿಸುವುದಕ್ಕೆ ಸಾಧ್ಯವಾ? ಬಾಲಿವುಡ್, ಕಾಲಿವುಡ್ ಏನೇನೋ ಇದೆ. ಅದ್ಯಾವುದರ ಜೊತೆಗೆ ಹೋಲಿಕೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಏಕೆಂದರೆ, ಸ್ಯಾಂಡಲ್ವುಡ್ ಅಂದರೆ ಅದೊಂದು ಪರಿಮಳ. ಗಂಧದ ಪರಿಮಳ. ಅದಕ್ಕೆ ಗಂಧದ ಮರದ ಗುಣಗಳಿವೆ. ಗಂಧದ ಮರ ಸುತ್ತ ಬೇರೆ 20-30 ಗಿಡಗಳ ಸಸಿ ನೆಟ್ಟರೆ ಮಾತ್ರ ಅದು ಉಳಿಯುತ್ತೆ. ಎಲ್ಲರೊಳಗೂ ಒಳಗೊಂಡು ಬೆಳೆಯುವುದೇ ಸ್ಯಾಂಡಲ್ವುಡ್’ ಎಂದರು.
ಕನ್ನಡ ಚಿತ್ರರಂಗಕ್ಕೊಂದು ದೊಡ್ಡ ಪರಂಪರೆಯೇ ಇದೆ ಎಂದು ಅರ್ಥ ಮಾಡಿಸಿದ ಅವರು, ‘ಒಬ್ಬರೇ ಬೆಳೆಯುವುದಲ್ಲ. ಎಲ್ಲರ ಜೊತೆಗೆ ಬೆಳೆಯುವುದು ಮುಖ್ಯ. ಇದಕ್ಕೊಂದು ಪರಂಪರೆ ಇದೆ. ಭಾಷೆಯಿಂದಲೇ ಕನ್ನಡ ಚಿತ್ರರಂಗವನ್ನು ಬೆಳೆಸಿದ ದೊಡ್ಡ ಪರಂಪರೆ ಇದೆ. ಆ ಪರಂಪರೆಯಿಂದ ಬಂದು ಪ್ಯಾನ್ ಇಂಡಿಯಾ ಅಂತ ಹೋದರೆ ಸ್ವಲ್ಪ ವ್ಯಾಪಾರ ಜಾಸ್ತಿ ಆಗುತ್ತೆ. ಬಾಡಿ, ದಾಡಿ ಬೆಳೆಯಬಹುದು. ಅದು ಬಿಟ್ಟು ಬೇರೇನೂ ಆಗುವುದಿಲ್ಲ. ಹಾಗಾಗಿ, ಮೊದಲು ಇಲ್ಲಿಗೆ ಚಿತ್ರ ಮಾಡಿ’ ಎಂದು ಅರ್ಥ ಮಾಡಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…