ಮನರಂಜನೆ

ಹನಿಮೂನ್ ‍ಮುಗಿಸಿ ಬೇಗ ಬನ್ನಿ: ಹೀರೋಗಳಿಗೆ ಹಂಸಲೇಖ ಕರೆ

ಕನ್ನಡ ಚಿತ್ರರಂಗದಲ್ಲಿ ಪ್ಯಾನ್‍ ಇಂಡಿಯಾ ಹುಚ್ಚು ಆಳವಾಗಿ ಬೇರೂರುತ್ತಿದೆ. ‘ಕೆಜಿಎಫ್‍’ ಮತ್ತು ‘ಕಾಂತಾರ’ ಚಿತ್ರಗಳ ಯಶಸ್ಸಿನ ನಂತರ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಹೀರೋಗಳಾಗುವುದಕ್ಕೆ ಪ್ರಯತ್ನ ನಡೆಸಿದ್ದಾರೆ. ಅದಕ್ಕಾಗಿ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಇದರಿಂದ ದೊಡ್ಡ ಹೀರೋಗಳ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಪ್ರೇಕ್ಷಕರು ಸಹ ಚಿತ್ರಮಂದಿರಗಳತ್ತ ಬರುತ್ತಿಲ್ಲ. ಹಾಗಾಗಿ, ಹೀರೋಗಳಿಗೆ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡಿ, ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವಂತೆ ಮಾಡಿ ಎಂದು ಚಿತ್ರಮಂದಿರದವರು ಸೇರಿ ಹಲವರು ಮನವಿ ಮಾಡುತ್ತಿದ್ದಾರೆ. ಈಗ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಸಹ ಧ್ವನಿಗೂಡಿಸಿದ್ದಾರೆ.

ಸೋಮವಾರ ಸಂಜೆ ‘ಗೌರಿ’ ಚಿತ್ರದ ಹಾಡು ಬಿಡುಗಡೆ ಸಮಾರಂಭವಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಈ ಪ್ಯಾನ್‍ ಇಂಡಿಯಾ ಎಂಬ ಹುಚ್ಚಿನಿಂದಾಗಿ ಕನ್ನಡದ ಸ್ಟಾರ್‍ಗಳಿಗೆ ಕನ್ನಡದ ಬೇರುಗಳು ಕಟ್‍ ಆಗಿದೆ ಎಂದು ಹೇಳಿದ್ದಾರೆ.

‘ಇವರೆಲ್ಲಾ ಭಾರತದಾದ್ಯಂತ ಖ್ಯಾತ ನಾಯಕರಾಗುತ್ತಾರೆ ಅನ್ನೋದು ಒಂದು ಭ್ರಮೆ. ದಕ್ಷಿಣದಲ್ಲಿ ಯಾರಾದರೂ ಸುಂದರ ನಾಯಕಿಯರಿದ್ದರೆ, ಅವರು ಉತ್ತರ ಭಾರತದಲ್ಲಿ 20 ವರ್ಷ ಬದುಕಬಹುದೇ ಹೊರತು, ರಜನಿಕಾಂತ್‍ ಆಗಲೀ, ಕಮಲ್‍ ಹಾಸನ್‍, ಮೋಹನ್ ಲಾಲ್‍, ಮಮ್ಮೂಟ್ಟಿ ಮುಂತಾದವರು ಅದೆಷ್ಟೇ ಪ್ರತಿಭಾವಂತರಿದ್ದರೂ ಮುಂಬೈನಲ್ಲಿ ಎರಡು ವರ್ಷ ಇರೋಕೆ ಆಗಲ್ಲ. ಒಂದೋ, ಎರಡೋ ಸಿನಿಮಾ ಮುಗಿಸಿ ವಾಪಸ್ಸು ಬಂದುಬಿಡ್ತಾರೆ. ನಮ್ಮ ಹೀರೋಗಳು ಹನಿಮೂನ್‍ ತರಹ ಹೋಗಿ ಪ್ಯಾನ್ ಇಂಡಿಯಾ ಎಲ್ಲಾ ಸುತ್ತಾಡಿಕೊಂಡು ಬರಬಹುದು. ಅದೆಲ್ಲಿ ಸುತ್ತಿದರೂ ಕೊನೆಗೆ ಕನ್ನಡಕ್ಕೆ ಬರಲೇ ಬೇಕು’ ಎಂದರು.

ಕನ್ನಡ ಚಿತ್ರರಂಗದ ಮಹತ್ವದ ಕುರಿತು ಮಾತನಾಡಿದ ಅವರು, ‘ಈ ದೇಶದಲ್ಲಿ ಎಷ್ಟೊಂದು ಪ್ರಾದೇಶಿಕ ಭಾಷೆಗಳಿವೆ, ಎಷ್ಟೊಂದು ಪ್ರಾದೇಶಿಕ ಚಿತ್ರರಂಗಗಳಿವೆ. ಅದರಲ್ಲಿ ಕೇಳೋದಕ್ಕೆ ಬಹಳ ಅರ್ಥಗಭಿತವಾದ ಶೀರ್ಷಿಕೆ ಎಂದರೆ ಅದು ಸ್ಯಾಂಡಲ್‍ವುಡ್‍. ಅದನ್ನು ನಾವು ಅಚ್ಚ ಕನ್ನಡದಲ್ಲಿ ಚಂದನವನ ಅಂತ ಕರೆಯುತ್ತೇವೆ. ಸ್ಯಾಂಡಲ್‍ವುಡ್‍ನ್ನು ಬೇರೆ ಯಾವುದಾದರೂ ಭಾಷೆಗಳ ವುಡ್‍ಗಳ ಜೊತೆಗೆ ಹೋಲಿಸುವುದಕ್ಕೆ ಸಾಧ್ಯವಾ? ಬಾಲಿವುಡ್‍, ಕಾಲಿವುಡ್‍ ಏನೇನೋ ಇದೆ. ಅದ್ಯಾವುದರ ಜೊತೆಗೆ ಹೋಲಿಕೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಏಕೆಂದರೆ, ಸ್ಯಾಂಡಲ್‍ವುಡ್‍ ಅಂದರೆ ಅದೊಂದು ಪರಿಮಳ. ಗಂಧದ ಪರಿಮಳ. ಅದಕ್ಕೆ ಗಂಧದ ಮರದ ಗುಣಗಳಿವೆ. ಗಂಧದ ಮರ ಸುತ್ತ ಬೇರೆ 20-30 ಗಿಡಗಳ ಸಸಿ ನೆಟ್ಟರೆ ಮಾತ್ರ ಅದು ಉಳಿಯುತ್ತೆ. ಎಲ್ಲರೊಳಗೂ ಒಳಗೊಂಡು ಬೆಳೆಯುವುದೇ ಸ್ಯಾಂಡಲ್‍ವುಡ್‍’ ಎಂದರು.

ಕನ್ನಡ ಚಿತ್ರರಂಗಕ್ಕೊಂದು ದೊಡ್ಡ ಪರಂಪರೆಯೇ ಇದೆ ಎಂದು ಅರ್ಥ ಮಾಡಿಸಿದ ಅವರು, ‘ಒಬ್ಬರೇ ಬೆಳೆಯುವುದಲ್ಲ. ಎಲ್ಲರ ಜೊತೆಗೆ ಬೆಳೆಯುವುದು ಮುಖ್ಯ. ಇದಕ್ಕೊಂದು ಪರಂಪರೆ ಇದೆ. ಭಾಷೆಯಿಂದಲೇ ಕನ್ನಡ ಚಿತ್ರರಂಗವನ್ನು ಬೆಳೆಸಿದ ದೊಡ್ಡ ಪರಂಪರೆ ಇದೆ. ಆ ಪರಂಪರೆಯಿಂದ ಬಂದು ಪ್ಯಾನ್‍ ಇಂಡಿಯಾ ಅಂತ ಹೋದರೆ ಸ್ವಲ್ಪ ವ್ಯಾಪಾರ ಜಾಸ್ತಿ ಆಗುತ್ತೆ. ಬಾಡಿ, ದಾಡಿ ಬೆಳೆಯಬಹುದು. ಅದು ಬಿಟ್ಟು ಬೇರೇನೂ ಆಗುವುದಿಲ್ಲ. ಹಾಗಾಗಿ, ಮೊದಲು ಇಲ್ಲಿಗೆ ಚಿತ್ರ ಮಾಡಿ’ ಎಂದು ಅರ್ಥ ಮಾಡಿಸಿದರು.

ಭೂಮಿಕಾ

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

2 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

4 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

5 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

5 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

5 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

5 hours ago