ಮನರಂಜನೆ

ಹನಿಮೂನ್ ‍ಮುಗಿಸಿ ಬೇಗ ಬನ್ನಿ: ಹೀರೋಗಳಿಗೆ ಹಂಸಲೇಖ ಕರೆ

ಕನ್ನಡ ಚಿತ್ರರಂಗದಲ್ಲಿ ಪ್ಯಾನ್‍ ಇಂಡಿಯಾ ಹುಚ್ಚು ಆಳವಾಗಿ ಬೇರೂರುತ್ತಿದೆ. ‘ಕೆಜಿಎಫ್‍’ ಮತ್ತು ‘ಕಾಂತಾರ’ ಚಿತ್ರಗಳ ಯಶಸ್ಸಿನ ನಂತರ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಹೀರೋಗಳಾಗುವುದಕ್ಕೆ ಪ್ರಯತ್ನ ನಡೆಸಿದ್ದಾರೆ. ಅದಕ್ಕಾಗಿ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಇದರಿಂದ ದೊಡ್ಡ ಹೀರೋಗಳ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಪ್ರೇಕ್ಷಕರು ಸಹ ಚಿತ್ರಮಂದಿರಗಳತ್ತ ಬರುತ್ತಿಲ್ಲ. ಹಾಗಾಗಿ, ಹೀರೋಗಳಿಗೆ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡಿ, ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವಂತೆ ಮಾಡಿ ಎಂದು ಚಿತ್ರಮಂದಿರದವರು ಸೇರಿ ಹಲವರು ಮನವಿ ಮಾಡುತ್ತಿದ್ದಾರೆ. ಈಗ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಸಹ ಧ್ವನಿಗೂಡಿಸಿದ್ದಾರೆ.

ಸೋಮವಾರ ಸಂಜೆ ‘ಗೌರಿ’ ಚಿತ್ರದ ಹಾಡು ಬಿಡುಗಡೆ ಸಮಾರಂಭವಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಈ ಪ್ಯಾನ್‍ ಇಂಡಿಯಾ ಎಂಬ ಹುಚ್ಚಿನಿಂದಾಗಿ ಕನ್ನಡದ ಸ್ಟಾರ್‍ಗಳಿಗೆ ಕನ್ನಡದ ಬೇರುಗಳು ಕಟ್‍ ಆಗಿದೆ ಎಂದು ಹೇಳಿದ್ದಾರೆ.

‘ಇವರೆಲ್ಲಾ ಭಾರತದಾದ್ಯಂತ ಖ್ಯಾತ ನಾಯಕರಾಗುತ್ತಾರೆ ಅನ್ನೋದು ಒಂದು ಭ್ರಮೆ. ದಕ್ಷಿಣದಲ್ಲಿ ಯಾರಾದರೂ ಸುಂದರ ನಾಯಕಿಯರಿದ್ದರೆ, ಅವರು ಉತ್ತರ ಭಾರತದಲ್ಲಿ 20 ವರ್ಷ ಬದುಕಬಹುದೇ ಹೊರತು, ರಜನಿಕಾಂತ್‍ ಆಗಲೀ, ಕಮಲ್‍ ಹಾಸನ್‍, ಮೋಹನ್ ಲಾಲ್‍, ಮಮ್ಮೂಟ್ಟಿ ಮುಂತಾದವರು ಅದೆಷ್ಟೇ ಪ್ರತಿಭಾವಂತರಿದ್ದರೂ ಮುಂಬೈನಲ್ಲಿ ಎರಡು ವರ್ಷ ಇರೋಕೆ ಆಗಲ್ಲ. ಒಂದೋ, ಎರಡೋ ಸಿನಿಮಾ ಮುಗಿಸಿ ವಾಪಸ್ಸು ಬಂದುಬಿಡ್ತಾರೆ. ನಮ್ಮ ಹೀರೋಗಳು ಹನಿಮೂನ್‍ ತರಹ ಹೋಗಿ ಪ್ಯಾನ್ ಇಂಡಿಯಾ ಎಲ್ಲಾ ಸುತ್ತಾಡಿಕೊಂಡು ಬರಬಹುದು. ಅದೆಲ್ಲಿ ಸುತ್ತಿದರೂ ಕೊನೆಗೆ ಕನ್ನಡಕ್ಕೆ ಬರಲೇ ಬೇಕು’ ಎಂದರು.

ಕನ್ನಡ ಚಿತ್ರರಂಗದ ಮಹತ್ವದ ಕುರಿತು ಮಾತನಾಡಿದ ಅವರು, ‘ಈ ದೇಶದಲ್ಲಿ ಎಷ್ಟೊಂದು ಪ್ರಾದೇಶಿಕ ಭಾಷೆಗಳಿವೆ, ಎಷ್ಟೊಂದು ಪ್ರಾದೇಶಿಕ ಚಿತ್ರರಂಗಗಳಿವೆ. ಅದರಲ್ಲಿ ಕೇಳೋದಕ್ಕೆ ಬಹಳ ಅರ್ಥಗಭಿತವಾದ ಶೀರ್ಷಿಕೆ ಎಂದರೆ ಅದು ಸ್ಯಾಂಡಲ್‍ವುಡ್‍. ಅದನ್ನು ನಾವು ಅಚ್ಚ ಕನ್ನಡದಲ್ಲಿ ಚಂದನವನ ಅಂತ ಕರೆಯುತ್ತೇವೆ. ಸ್ಯಾಂಡಲ್‍ವುಡ್‍ನ್ನು ಬೇರೆ ಯಾವುದಾದರೂ ಭಾಷೆಗಳ ವುಡ್‍ಗಳ ಜೊತೆಗೆ ಹೋಲಿಸುವುದಕ್ಕೆ ಸಾಧ್ಯವಾ? ಬಾಲಿವುಡ್‍, ಕಾಲಿವುಡ್‍ ಏನೇನೋ ಇದೆ. ಅದ್ಯಾವುದರ ಜೊತೆಗೆ ಹೋಲಿಕೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಏಕೆಂದರೆ, ಸ್ಯಾಂಡಲ್‍ವುಡ್‍ ಅಂದರೆ ಅದೊಂದು ಪರಿಮಳ. ಗಂಧದ ಪರಿಮಳ. ಅದಕ್ಕೆ ಗಂಧದ ಮರದ ಗುಣಗಳಿವೆ. ಗಂಧದ ಮರ ಸುತ್ತ ಬೇರೆ 20-30 ಗಿಡಗಳ ಸಸಿ ನೆಟ್ಟರೆ ಮಾತ್ರ ಅದು ಉಳಿಯುತ್ತೆ. ಎಲ್ಲರೊಳಗೂ ಒಳಗೊಂಡು ಬೆಳೆಯುವುದೇ ಸ್ಯಾಂಡಲ್‍ವುಡ್‍’ ಎಂದರು.

ಕನ್ನಡ ಚಿತ್ರರಂಗಕ್ಕೊಂದು ದೊಡ್ಡ ಪರಂಪರೆಯೇ ಇದೆ ಎಂದು ಅರ್ಥ ಮಾಡಿಸಿದ ಅವರು, ‘ಒಬ್ಬರೇ ಬೆಳೆಯುವುದಲ್ಲ. ಎಲ್ಲರ ಜೊತೆಗೆ ಬೆಳೆಯುವುದು ಮುಖ್ಯ. ಇದಕ್ಕೊಂದು ಪರಂಪರೆ ಇದೆ. ಭಾಷೆಯಿಂದಲೇ ಕನ್ನಡ ಚಿತ್ರರಂಗವನ್ನು ಬೆಳೆಸಿದ ದೊಡ್ಡ ಪರಂಪರೆ ಇದೆ. ಆ ಪರಂಪರೆಯಿಂದ ಬಂದು ಪ್ಯಾನ್‍ ಇಂಡಿಯಾ ಅಂತ ಹೋದರೆ ಸ್ವಲ್ಪ ವ್ಯಾಪಾರ ಜಾಸ್ತಿ ಆಗುತ್ತೆ. ಬಾಡಿ, ದಾಡಿ ಬೆಳೆಯಬಹುದು. ಅದು ಬಿಟ್ಟು ಬೇರೇನೂ ಆಗುವುದಿಲ್ಲ. ಹಾಗಾಗಿ, ಮೊದಲು ಇಲ್ಲಿಗೆ ಚಿತ್ರ ಮಾಡಿ’ ಎಂದು ಅರ್ಥ ಮಾಡಿಸಿದರು.

ಭೂಮಿಕಾ

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

48 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

59 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago