ಮನರಂಜನೆ

ಹನಿಮೂನ್ ‍ಮುಗಿಸಿ ಬೇಗ ಬನ್ನಿ: ಹೀರೋಗಳಿಗೆ ಹಂಸಲೇಖ ಕರೆ

ಕನ್ನಡ ಚಿತ್ರರಂಗದಲ್ಲಿ ಪ್ಯಾನ್‍ ಇಂಡಿಯಾ ಹುಚ್ಚು ಆಳವಾಗಿ ಬೇರೂರುತ್ತಿದೆ. ‘ಕೆಜಿಎಫ್‍’ ಮತ್ತು ‘ಕಾಂತಾರ’ ಚಿತ್ರಗಳ ಯಶಸ್ಸಿನ ನಂತರ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಹೀರೋಗಳಾಗುವುದಕ್ಕೆ ಪ್ರಯತ್ನ ನಡೆಸಿದ್ದಾರೆ. ಅದಕ್ಕಾಗಿ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಇದರಿಂದ ದೊಡ್ಡ ಹೀರೋಗಳ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಪ್ರೇಕ್ಷಕರು ಸಹ ಚಿತ್ರಮಂದಿರಗಳತ್ತ ಬರುತ್ತಿಲ್ಲ. ಹಾಗಾಗಿ, ಹೀರೋಗಳಿಗೆ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡಿ, ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವಂತೆ ಮಾಡಿ ಎಂದು ಚಿತ್ರಮಂದಿರದವರು ಸೇರಿ ಹಲವರು ಮನವಿ ಮಾಡುತ್ತಿದ್ದಾರೆ. ಈಗ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಸಹ ಧ್ವನಿಗೂಡಿಸಿದ್ದಾರೆ.

ಸೋಮವಾರ ಸಂಜೆ ‘ಗೌರಿ’ ಚಿತ್ರದ ಹಾಡು ಬಿಡುಗಡೆ ಸಮಾರಂಭವಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಈ ಪ್ಯಾನ್‍ ಇಂಡಿಯಾ ಎಂಬ ಹುಚ್ಚಿನಿಂದಾಗಿ ಕನ್ನಡದ ಸ್ಟಾರ್‍ಗಳಿಗೆ ಕನ್ನಡದ ಬೇರುಗಳು ಕಟ್‍ ಆಗಿದೆ ಎಂದು ಹೇಳಿದ್ದಾರೆ.

‘ಇವರೆಲ್ಲಾ ಭಾರತದಾದ್ಯಂತ ಖ್ಯಾತ ನಾಯಕರಾಗುತ್ತಾರೆ ಅನ್ನೋದು ಒಂದು ಭ್ರಮೆ. ದಕ್ಷಿಣದಲ್ಲಿ ಯಾರಾದರೂ ಸುಂದರ ನಾಯಕಿಯರಿದ್ದರೆ, ಅವರು ಉತ್ತರ ಭಾರತದಲ್ಲಿ 20 ವರ್ಷ ಬದುಕಬಹುದೇ ಹೊರತು, ರಜನಿಕಾಂತ್‍ ಆಗಲೀ, ಕಮಲ್‍ ಹಾಸನ್‍, ಮೋಹನ್ ಲಾಲ್‍, ಮಮ್ಮೂಟ್ಟಿ ಮುಂತಾದವರು ಅದೆಷ್ಟೇ ಪ್ರತಿಭಾವಂತರಿದ್ದರೂ ಮುಂಬೈನಲ್ಲಿ ಎರಡು ವರ್ಷ ಇರೋಕೆ ಆಗಲ್ಲ. ಒಂದೋ, ಎರಡೋ ಸಿನಿಮಾ ಮುಗಿಸಿ ವಾಪಸ್ಸು ಬಂದುಬಿಡ್ತಾರೆ. ನಮ್ಮ ಹೀರೋಗಳು ಹನಿಮೂನ್‍ ತರಹ ಹೋಗಿ ಪ್ಯಾನ್ ಇಂಡಿಯಾ ಎಲ್ಲಾ ಸುತ್ತಾಡಿಕೊಂಡು ಬರಬಹುದು. ಅದೆಲ್ಲಿ ಸುತ್ತಿದರೂ ಕೊನೆಗೆ ಕನ್ನಡಕ್ಕೆ ಬರಲೇ ಬೇಕು’ ಎಂದರು.

ಕನ್ನಡ ಚಿತ್ರರಂಗದ ಮಹತ್ವದ ಕುರಿತು ಮಾತನಾಡಿದ ಅವರು, ‘ಈ ದೇಶದಲ್ಲಿ ಎಷ್ಟೊಂದು ಪ್ರಾದೇಶಿಕ ಭಾಷೆಗಳಿವೆ, ಎಷ್ಟೊಂದು ಪ್ರಾದೇಶಿಕ ಚಿತ್ರರಂಗಗಳಿವೆ. ಅದರಲ್ಲಿ ಕೇಳೋದಕ್ಕೆ ಬಹಳ ಅರ್ಥಗಭಿತವಾದ ಶೀರ್ಷಿಕೆ ಎಂದರೆ ಅದು ಸ್ಯಾಂಡಲ್‍ವುಡ್‍. ಅದನ್ನು ನಾವು ಅಚ್ಚ ಕನ್ನಡದಲ್ಲಿ ಚಂದನವನ ಅಂತ ಕರೆಯುತ್ತೇವೆ. ಸ್ಯಾಂಡಲ್‍ವುಡ್‍ನ್ನು ಬೇರೆ ಯಾವುದಾದರೂ ಭಾಷೆಗಳ ವುಡ್‍ಗಳ ಜೊತೆಗೆ ಹೋಲಿಸುವುದಕ್ಕೆ ಸಾಧ್ಯವಾ? ಬಾಲಿವುಡ್‍, ಕಾಲಿವುಡ್‍ ಏನೇನೋ ಇದೆ. ಅದ್ಯಾವುದರ ಜೊತೆಗೆ ಹೋಲಿಕೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಏಕೆಂದರೆ, ಸ್ಯಾಂಡಲ್‍ವುಡ್‍ ಅಂದರೆ ಅದೊಂದು ಪರಿಮಳ. ಗಂಧದ ಪರಿಮಳ. ಅದಕ್ಕೆ ಗಂಧದ ಮರದ ಗುಣಗಳಿವೆ. ಗಂಧದ ಮರ ಸುತ್ತ ಬೇರೆ 20-30 ಗಿಡಗಳ ಸಸಿ ನೆಟ್ಟರೆ ಮಾತ್ರ ಅದು ಉಳಿಯುತ್ತೆ. ಎಲ್ಲರೊಳಗೂ ಒಳಗೊಂಡು ಬೆಳೆಯುವುದೇ ಸ್ಯಾಂಡಲ್‍ವುಡ್‍’ ಎಂದರು.

ಕನ್ನಡ ಚಿತ್ರರಂಗಕ್ಕೊಂದು ದೊಡ್ಡ ಪರಂಪರೆಯೇ ಇದೆ ಎಂದು ಅರ್ಥ ಮಾಡಿಸಿದ ಅವರು, ‘ಒಬ್ಬರೇ ಬೆಳೆಯುವುದಲ್ಲ. ಎಲ್ಲರ ಜೊತೆಗೆ ಬೆಳೆಯುವುದು ಮುಖ್ಯ. ಇದಕ್ಕೊಂದು ಪರಂಪರೆ ಇದೆ. ಭಾಷೆಯಿಂದಲೇ ಕನ್ನಡ ಚಿತ್ರರಂಗವನ್ನು ಬೆಳೆಸಿದ ದೊಡ್ಡ ಪರಂಪರೆ ಇದೆ. ಆ ಪರಂಪರೆಯಿಂದ ಬಂದು ಪ್ಯಾನ್‍ ಇಂಡಿಯಾ ಅಂತ ಹೋದರೆ ಸ್ವಲ್ಪ ವ್ಯಾಪಾರ ಜಾಸ್ತಿ ಆಗುತ್ತೆ. ಬಾಡಿ, ದಾಡಿ ಬೆಳೆಯಬಹುದು. ಅದು ಬಿಟ್ಟು ಬೇರೇನೂ ಆಗುವುದಿಲ್ಲ. ಹಾಗಾಗಿ, ಮೊದಲು ಇಲ್ಲಿಗೆ ಚಿತ್ರ ಮಾಡಿ’ ಎಂದು ಅರ್ಥ ಮಾಡಿಸಿದರು.

ಭೂಮಿಕಾ

Recent Posts

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

10 mins ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

1 hour ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

1 hour ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

3 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

3 hours ago