ಮನರಂಜನೆ

ಹನಿಮೂನ್ ‍ಮುಗಿಸಿ ಬೇಗ ಬನ್ನಿ: ಹೀರೋಗಳಿಗೆ ಹಂಸಲೇಖ ಕರೆ

ಕನ್ನಡ ಚಿತ್ರರಂಗದಲ್ಲಿ ಪ್ಯಾನ್‍ ಇಂಡಿಯಾ ಹುಚ್ಚು ಆಳವಾಗಿ ಬೇರೂರುತ್ತಿದೆ. ‘ಕೆಜಿಎಫ್‍’ ಮತ್ತು ‘ಕಾಂತಾರ’ ಚಿತ್ರಗಳ ಯಶಸ್ಸಿನ ನಂತರ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಹೀರೋಗಳಾಗುವುದಕ್ಕೆ ಪ್ರಯತ್ನ ನಡೆಸಿದ್ದಾರೆ. ಅದಕ್ಕಾಗಿ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಇದರಿಂದ ದೊಡ್ಡ ಹೀರೋಗಳ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಪ್ರೇಕ್ಷಕರು ಸಹ ಚಿತ್ರಮಂದಿರಗಳತ್ತ ಬರುತ್ತಿಲ್ಲ. ಹಾಗಾಗಿ, ಹೀರೋಗಳಿಗೆ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡಿ, ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವಂತೆ ಮಾಡಿ ಎಂದು ಚಿತ್ರಮಂದಿರದವರು ಸೇರಿ ಹಲವರು ಮನವಿ ಮಾಡುತ್ತಿದ್ದಾರೆ. ಈಗ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಸಹ ಧ್ವನಿಗೂಡಿಸಿದ್ದಾರೆ.

ಸೋಮವಾರ ಸಂಜೆ ‘ಗೌರಿ’ ಚಿತ್ರದ ಹಾಡು ಬಿಡುಗಡೆ ಸಮಾರಂಭವಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಈ ಪ್ಯಾನ್‍ ಇಂಡಿಯಾ ಎಂಬ ಹುಚ್ಚಿನಿಂದಾಗಿ ಕನ್ನಡದ ಸ್ಟಾರ್‍ಗಳಿಗೆ ಕನ್ನಡದ ಬೇರುಗಳು ಕಟ್‍ ಆಗಿದೆ ಎಂದು ಹೇಳಿದ್ದಾರೆ.

‘ಇವರೆಲ್ಲಾ ಭಾರತದಾದ್ಯಂತ ಖ್ಯಾತ ನಾಯಕರಾಗುತ್ತಾರೆ ಅನ್ನೋದು ಒಂದು ಭ್ರಮೆ. ದಕ್ಷಿಣದಲ್ಲಿ ಯಾರಾದರೂ ಸುಂದರ ನಾಯಕಿಯರಿದ್ದರೆ, ಅವರು ಉತ್ತರ ಭಾರತದಲ್ಲಿ 20 ವರ್ಷ ಬದುಕಬಹುದೇ ಹೊರತು, ರಜನಿಕಾಂತ್‍ ಆಗಲೀ, ಕಮಲ್‍ ಹಾಸನ್‍, ಮೋಹನ್ ಲಾಲ್‍, ಮಮ್ಮೂಟ್ಟಿ ಮುಂತಾದವರು ಅದೆಷ್ಟೇ ಪ್ರತಿಭಾವಂತರಿದ್ದರೂ ಮುಂಬೈನಲ್ಲಿ ಎರಡು ವರ್ಷ ಇರೋಕೆ ಆಗಲ್ಲ. ಒಂದೋ, ಎರಡೋ ಸಿನಿಮಾ ಮುಗಿಸಿ ವಾಪಸ್ಸು ಬಂದುಬಿಡ್ತಾರೆ. ನಮ್ಮ ಹೀರೋಗಳು ಹನಿಮೂನ್‍ ತರಹ ಹೋಗಿ ಪ್ಯಾನ್ ಇಂಡಿಯಾ ಎಲ್ಲಾ ಸುತ್ತಾಡಿಕೊಂಡು ಬರಬಹುದು. ಅದೆಲ್ಲಿ ಸುತ್ತಿದರೂ ಕೊನೆಗೆ ಕನ್ನಡಕ್ಕೆ ಬರಲೇ ಬೇಕು’ ಎಂದರು.

ಕನ್ನಡ ಚಿತ್ರರಂಗದ ಮಹತ್ವದ ಕುರಿತು ಮಾತನಾಡಿದ ಅವರು, ‘ಈ ದೇಶದಲ್ಲಿ ಎಷ್ಟೊಂದು ಪ್ರಾದೇಶಿಕ ಭಾಷೆಗಳಿವೆ, ಎಷ್ಟೊಂದು ಪ್ರಾದೇಶಿಕ ಚಿತ್ರರಂಗಗಳಿವೆ. ಅದರಲ್ಲಿ ಕೇಳೋದಕ್ಕೆ ಬಹಳ ಅರ್ಥಗಭಿತವಾದ ಶೀರ್ಷಿಕೆ ಎಂದರೆ ಅದು ಸ್ಯಾಂಡಲ್‍ವುಡ್‍. ಅದನ್ನು ನಾವು ಅಚ್ಚ ಕನ್ನಡದಲ್ಲಿ ಚಂದನವನ ಅಂತ ಕರೆಯುತ್ತೇವೆ. ಸ್ಯಾಂಡಲ್‍ವುಡ್‍ನ್ನು ಬೇರೆ ಯಾವುದಾದರೂ ಭಾಷೆಗಳ ವುಡ್‍ಗಳ ಜೊತೆಗೆ ಹೋಲಿಸುವುದಕ್ಕೆ ಸಾಧ್ಯವಾ? ಬಾಲಿವುಡ್‍, ಕಾಲಿವುಡ್‍ ಏನೇನೋ ಇದೆ. ಅದ್ಯಾವುದರ ಜೊತೆಗೆ ಹೋಲಿಕೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಏಕೆಂದರೆ, ಸ್ಯಾಂಡಲ್‍ವುಡ್‍ ಅಂದರೆ ಅದೊಂದು ಪರಿಮಳ. ಗಂಧದ ಪರಿಮಳ. ಅದಕ್ಕೆ ಗಂಧದ ಮರದ ಗುಣಗಳಿವೆ. ಗಂಧದ ಮರ ಸುತ್ತ ಬೇರೆ 20-30 ಗಿಡಗಳ ಸಸಿ ನೆಟ್ಟರೆ ಮಾತ್ರ ಅದು ಉಳಿಯುತ್ತೆ. ಎಲ್ಲರೊಳಗೂ ಒಳಗೊಂಡು ಬೆಳೆಯುವುದೇ ಸ್ಯಾಂಡಲ್‍ವುಡ್‍’ ಎಂದರು.

ಕನ್ನಡ ಚಿತ್ರರಂಗಕ್ಕೊಂದು ದೊಡ್ಡ ಪರಂಪರೆಯೇ ಇದೆ ಎಂದು ಅರ್ಥ ಮಾಡಿಸಿದ ಅವರು, ‘ಒಬ್ಬರೇ ಬೆಳೆಯುವುದಲ್ಲ. ಎಲ್ಲರ ಜೊತೆಗೆ ಬೆಳೆಯುವುದು ಮುಖ್ಯ. ಇದಕ್ಕೊಂದು ಪರಂಪರೆ ಇದೆ. ಭಾಷೆಯಿಂದಲೇ ಕನ್ನಡ ಚಿತ್ರರಂಗವನ್ನು ಬೆಳೆಸಿದ ದೊಡ್ಡ ಪರಂಪರೆ ಇದೆ. ಆ ಪರಂಪರೆಯಿಂದ ಬಂದು ಪ್ಯಾನ್‍ ಇಂಡಿಯಾ ಅಂತ ಹೋದರೆ ಸ್ವಲ್ಪ ವ್ಯಾಪಾರ ಜಾಸ್ತಿ ಆಗುತ್ತೆ. ಬಾಡಿ, ದಾಡಿ ಬೆಳೆಯಬಹುದು. ಅದು ಬಿಟ್ಟು ಬೇರೇನೂ ಆಗುವುದಿಲ್ಲ. ಹಾಗಾಗಿ, ಮೊದಲು ಇಲ್ಲಿಗೆ ಚಿತ್ರ ಮಾಡಿ’ ಎಂದು ಅರ್ಥ ಮಾಡಿಸಿದರು.

ಭೂಮಿಕಾ

Recent Posts

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

14 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

58 mins ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

1 hour ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

10 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

10 hours ago