ಮನರಂಜನೆ

ಓಂಪ್ರಕಾಶ್ ರಾವ್ ನಿರ್ದೇಶನದ ಎರಡು ಚಿತ್ರಗಳಿಗೆ ಹಂಸಲೇಖ ಸಂಗೀತ

ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಮತ್ತೊಮ್ಮೆ ಸಕ್ರಿಯರಾಗಿದ್ದಾರೆ. ಕಳೆದ ವಾರವಷ್ಟೇ ಅವರ ನಿರ್ದೇಶನದ ಮತ್ತು ಸಂಗೀತ ನಿರ್ದೇಶನದ ‘ಓಕೆ’ ಎಂಬ ಚಿತ್ರವು ಸೆಟ್ಟೇರಿತ್ತು. ಇದೀಗ ಹಂಸಲೇಖ ಇನ್ನೂ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸುವುದಕ್ಕೆ ಅಣಿಯಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಓಂಪ್ರಕಾಶ್ ರಾವ್‍ ಮತ್ತು ಹಂಸಲೇಖ ಅವರದ್ದು ಜನಪ್ರಿಯ ಜೋಡಿ. ಓಂಪ್ರಕಾಶ್ ರಾವ್‍ ನಿರ್ದೇಶನದ ‘ಲಾಕಪ್ ಡೆತ್’, ‘ಸಿಂಹದ ಮರಿ’, ‘AK 47’, ‘ಪಾಳೆಗಾರ’ ಮುಂತಾದ ಚಿತ್ರಗಳಿಗೆ ಹಂಸಲೇಖ ಸಂಗೀತ ಸಂಯೋಜಿಸಿದ್ದರು. ಇದೀಗ ‘ಫೀನಿಕ್ಸ್’ ಹಾಗೂ ‘ಗೆರಿಲ್ಲಾ ವಾರ್‌’ ಚಿತ್ರಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಓಂಪ್ರಕಾಶ್ ರಾವ್ ನಿರ್ದೇಶನದ 49 ಹಾಗೂ 50ನೇ ಚಿತ್ರಗಳಾಗಿದೆ.

ಈ ಪೈಕಿ ಚಿತ್ರೀಕರಣ ಮುಕ್ತಾಯ ಹಂತದಲ್ಲಿರುವ ‘ಫೀನಿಕ್ಸ್’ ಚಿತ್ರವನ್ನು ಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಿಸುತ್ತಿದ್ದಾರೆ. ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಎಸ್ತರ್ ನರೋನ್ಹಾ, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ.

‘ಗೆರಿಲ್ಲಾ ವಾರ್’ ಚಿತ್ರವನ್ನು ಎಂ.ಆರ್. ಟಾಕೀಸ್ ಲಾಂಛನದಲ್ಲಿ ನಯನ ಗೌಡ ನಿರ್ಮಿಸುತ್ತಿದ್ದು, ಮಂಡ್ಯ ಲೋಕಿ ನಾಯಕನಾಗಿ ಹಾಗೂ ನಿಮಿಕ ರತ್ನಾಕರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದು ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರವಾಗಿದ್ದು, ಆಗಸ್ಟ್ ನಲ್ಲಿ ಆರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

16 mins ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

52 mins ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

1 hour ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

1 hour ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 hours ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

2 hours ago