ಮನರಂಜನೆ

ಓಂಪ್ರಕಾಶ್ ರಾವ್ ನಿರ್ದೇಶನದ ಎರಡು ಚಿತ್ರಗಳಿಗೆ ಹಂಸಲೇಖ ಸಂಗೀತ

ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಮತ್ತೊಮ್ಮೆ ಸಕ್ರಿಯರಾಗಿದ್ದಾರೆ. ಕಳೆದ ವಾರವಷ್ಟೇ ಅವರ ನಿರ್ದೇಶನದ ಮತ್ತು ಸಂಗೀತ ನಿರ್ದೇಶನದ ‘ಓಕೆ’ ಎಂಬ ಚಿತ್ರವು ಸೆಟ್ಟೇರಿತ್ತು. ಇದೀಗ ಹಂಸಲೇಖ ಇನ್ನೂ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸುವುದಕ್ಕೆ ಅಣಿಯಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಓಂಪ್ರಕಾಶ್ ರಾವ್‍ ಮತ್ತು ಹಂಸಲೇಖ ಅವರದ್ದು ಜನಪ್ರಿಯ ಜೋಡಿ. ಓಂಪ್ರಕಾಶ್ ರಾವ್‍ ನಿರ್ದೇಶನದ ‘ಲಾಕಪ್ ಡೆತ್’, ‘ಸಿಂಹದ ಮರಿ’, ‘AK 47’, ‘ಪಾಳೆಗಾರ’ ಮುಂತಾದ ಚಿತ್ರಗಳಿಗೆ ಹಂಸಲೇಖ ಸಂಗೀತ ಸಂಯೋಜಿಸಿದ್ದರು. ಇದೀಗ ‘ಫೀನಿಕ್ಸ್’ ಹಾಗೂ ‘ಗೆರಿಲ್ಲಾ ವಾರ್‌’ ಚಿತ್ರಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಓಂಪ್ರಕಾಶ್ ರಾವ್ ನಿರ್ದೇಶನದ 49 ಹಾಗೂ 50ನೇ ಚಿತ್ರಗಳಾಗಿದೆ.

ಈ ಪೈಕಿ ಚಿತ್ರೀಕರಣ ಮುಕ್ತಾಯ ಹಂತದಲ್ಲಿರುವ ‘ಫೀನಿಕ್ಸ್’ ಚಿತ್ರವನ್ನು ಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಿಸುತ್ತಿದ್ದಾರೆ. ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಎಸ್ತರ್ ನರೋನ್ಹಾ, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ.

‘ಗೆರಿಲ್ಲಾ ವಾರ್’ ಚಿತ್ರವನ್ನು ಎಂ.ಆರ್. ಟಾಕೀಸ್ ಲಾಂಛನದಲ್ಲಿ ನಯನ ಗೌಡ ನಿರ್ಮಿಸುತ್ತಿದ್ದು, ಮಂಡ್ಯ ಲೋಕಿ ನಾಯಕನಾಗಿ ಹಾಗೂ ನಿಮಿಕ ರತ್ನಾಕರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದು ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರವಾಗಿದ್ದು, ಆಗಸ್ಟ್ ನಲ್ಲಿ ಆರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

14 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

14 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago