ಮನರಂಜನೆ

ಓಂಪ್ರಕಾಶ್ ರಾವ್ ನಿರ್ದೇಶನದ ಎರಡು ಚಿತ್ರಗಳಿಗೆ ಹಂಸಲೇಖ ಸಂಗೀತ

ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಮತ್ತೊಮ್ಮೆ ಸಕ್ರಿಯರಾಗಿದ್ದಾರೆ. ಕಳೆದ ವಾರವಷ್ಟೇ ಅವರ ನಿರ್ದೇಶನದ ಮತ್ತು ಸಂಗೀತ ನಿರ್ದೇಶನದ ‘ಓಕೆ’ ಎಂಬ ಚಿತ್ರವು ಸೆಟ್ಟೇರಿತ್ತು. ಇದೀಗ ಹಂಸಲೇಖ ಇನ್ನೂ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸುವುದಕ್ಕೆ ಅಣಿಯಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಓಂಪ್ರಕಾಶ್ ರಾವ್‍ ಮತ್ತು ಹಂಸಲೇಖ ಅವರದ್ದು ಜನಪ್ರಿಯ ಜೋಡಿ. ಓಂಪ್ರಕಾಶ್ ರಾವ್‍ ನಿರ್ದೇಶನದ ‘ಲಾಕಪ್ ಡೆತ್’, ‘ಸಿಂಹದ ಮರಿ’, ‘AK 47’, ‘ಪಾಳೆಗಾರ’ ಮುಂತಾದ ಚಿತ್ರಗಳಿಗೆ ಹಂಸಲೇಖ ಸಂಗೀತ ಸಂಯೋಜಿಸಿದ್ದರು. ಇದೀಗ ‘ಫೀನಿಕ್ಸ್’ ಹಾಗೂ ‘ಗೆರಿಲ್ಲಾ ವಾರ್‌’ ಚಿತ್ರಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಓಂಪ್ರಕಾಶ್ ರಾವ್ ನಿರ್ದೇಶನದ 49 ಹಾಗೂ 50ನೇ ಚಿತ್ರಗಳಾಗಿದೆ.

ಈ ಪೈಕಿ ಚಿತ್ರೀಕರಣ ಮುಕ್ತಾಯ ಹಂತದಲ್ಲಿರುವ ‘ಫೀನಿಕ್ಸ್’ ಚಿತ್ರವನ್ನು ಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಿಸುತ್ತಿದ್ದಾರೆ. ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಎಸ್ತರ್ ನರೋನ್ಹಾ, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ.

‘ಗೆರಿಲ್ಲಾ ವಾರ್’ ಚಿತ್ರವನ್ನು ಎಂ.ಆರ್. ಟಾಕೀಸ್ ಲಾಂಛನದಲ್ಲಿ ನಯನ ಗೌಡ ನಿರ್ಮಿಸುತ್ತಿದ್ದು, ಮಂಡ್ಯ ಲೋಕಿ ನಾಯಕನಾಗಿ ಹಾಗೂ ನಿಮಿಕ ರತ್ನಾಕರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದು ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರವಾಗಿದ್ದು, ಆಗಸ್ಟ್ ನಲ್ಲಿ ಆರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

17 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

22 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

23 hours ago