ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಹಿಂದೆ ತಮ್ಮ ಕ್ರಾಂತಿ ಚಿತ್ರದ ಪ್ರಚಾರದ ವೇಳೆ ನಡೆದ ಒಂದು ಸಂದರ್ಶನದಲ್ಲಿ ತಮ್ಮ ನೆಚ್ಚಿನ ಚಾಟ್ ಸೆಂಟರ್ ಬಗ್ಗೆ ಮಾತನಾಡಿದ್ದರು. ಬೆಂಗಳೂರಿನ ನಾಗರಭಾವಿ ಸಮೀಪ ವೀರೇಶ್ ಎಂಬ ವಿಶೇಷ ಚೇತನ ಅಭಿಮಾನಿಯೋರ್ವ ನಡೆಸುತ್ತಿದ್ದ ʼಹೊಟ್ಟೆಪಾಡುʼ ಎಂಬ ಚಾಟ್ಸೆಂಟರ್ ಬಗ್ಗೆ ಮಾತನಾಡಿದ್ದರು.
“ಆತ ಒಬ್ಬ ವಿಶೇಷ ಚೇತನ ಅಭಿಮಾನಿ. ಹೊರಗಡೆ ಹೋಗಿ ಭಿಕ್ಷೆ ಬೇಡದೇ ಪಾನಿಪೂರಿ ಇಟ್ಟುಕೊಂಡು ಕಷ್ಟಪಟ್ಟು ದುಡಿಯುತ್ತಿದ್ದಾನಲ್ಲ ಅದು ಗ್ರೇಟ್. ಅವನನ್ನು ಹುಡುಕಿಕೊಂಡು ಹೋಗಿ ತಿಂದರೆ, ಆತ ಇನ್ನೊಂದಷ್ಟು ಜನರಿಗೆ ಸ್ಪೂರ್ತಿಯಾಗುತ್ತಾನೆ” ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದರು.
ದರ್ಶನ್ ಅವರ ಈ ಸಂದರ್ಶನ ಹೊರಬಿದ್ದ ಬಳಿಕ ಇದೀಗ ಆ ವಿಶೇಷಚೇತನ ಅಭಿಮಾನಿ ವೀರೇಶ್ ಜೀವನವೇ ಬದಲಾಗಿಹೋಗಿದೆ. ಈ ಹಿಂದೆ ದಿನಕ್ಕೆ ನೂರು ಪ್ಲೇಟ್ ಮಾರಾಟವಾಗ್ತಿದ್ದ ಚಾಟ್ಸ್ ಇದೀಗ ದಿನಕ್ಕೆ ಏನಿಲ್ಲವೆಂದರೂ ಕನಿಷ್ಟ 200 ಪ್ಲೇಟ್ ಮಾರಾಟವಾಗ್ತಿದೆ. ಹೀಗಂತ ಸ್ವತಃ ವೀರೇಶ್ ʼಕನ್ನಡ ಫಿಲ್ಮಿಬೀಟ್ʼ ಜತೆ ಮಾತನಾಡುತ್ತಾ ಹೇಳಿಕೊಂಡಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…