ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಹಿಂದೆ ತಮ್ಮ ಕ್ರಾಂತಿ ಚಿತ್ರದ ಪ್ರಚಾರದ ವೇಳೆ ನಡೆದ ಒಂದು ಸಂದರ್ಶನದಲ್ಲಿ ತಮ್ಮ ನೆಚ್ಚಿನ ಚಾಟ್ ಸೆಂಟರ್ ಬಗ್ಗೆ ಮಾತನಾಡಿದ್ದರು. ಬೆಂಗಳೂರಿನ ನಾಗರಭಾವಿ ಸಮೀಪ ವೀರೇಶ್ ಎಂಬ ವಿಶೇಷ ಚೇತನ ಅಭಿಮಾನಿಯೋರ್ವ ನಡೆಸುತ್ತಿದ್ದ ʼಹೊಟ್ಟೆಪಾಡುʼ ಎಂಬ ಚಾಟ್ಸೆಂಟರ್ ಬಗ್ಗೆ ಮಾತನಾಡಿದ್ದರು.
“ಆತ ಒಬ್ಬ ವಿಶೇಷ ಚೇತನ ಅಭಿಮಾನಿ. ಹೊರಗಡೆ ಹೋಗಿ ಭಿಕ್ಷೆ ಬೇಡದೇ ಪಾನಿಪೂರಿ ಇಟ್ಟುಕೊಂಡು ಕಷ್ಟಪಟ್ಟು ದುಡಿಯುತ್ತಿದ್ದಾನಲ್ಲ ಅದು ಗ್ರೇಟ್. ಅವನನ್ನು ಹುಡುಕಿಕೊಂಡು ಹೋಗಿ ತಿಂದರೆ, ಆತ ಇನ್ನೊಂದಷ್ಟು ಜನರಿಗೆ ಸ್ಪೂರ್ತಿಯಾಗುತ್ತಾನೆ” ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದರು.
ದರ್ಶನ್ ಅವರ ಈ ಸಂದರ್ಶನ ಹೊರಬಿದ್ದ ಬಳಿಕ ಇದೀಗ ಆ ವಿಶೇಷಚೇತನ ಅಭಿಮಾನಿ ವೀರೇಶ್ ಜೀವನವೇ ಬದಲಾಗಿಹೋಗಿದೆ. ಈ ಹಿಂದೆ ದಿನಕ್ಕೆ ನೂರು ಪ್ಲೇಟ್ ಮಾರಾಟವಾಗ್ತಿದ್ದ ಚಾಟ್ಸ್ ಇದೀಗ ದಿನಕ್ಕೆ ಏನಿಲ್ಲವೆಂದರೂ ಕನಿಷ್ಟ 200 ಪ್ಲೇಟ್ ಮಾರಾಟವಾಗ್ತಿದೆ. ಹೀಗಂತ ಸ್ವತಃ ವೀರೇಶ್ ʼಕನ್ನಡ ಫಿಲ್ಮಿಬೀಟ್ʼ ಜತೆ ಮಾತನಾಡುತ್ತಾ ಹೇಳಿಕೊಂಡಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…